ಕ್ರೀಡೆ

ಏಷ್ಯಾಕಪ್‌ 2023 : ಶ್ರೀಲಂಕಾ ಮಣಿಸಿ 8ನೇ ಬಾರಿಗೆ ಚಾಂಪಿಯನ್‌ ಪಟ್ಟಕ್ಕೇರಿದ ಭಾರತ

ಕೊಲಂಬೊ : ಶ್ರೀಲಂಕಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ 8ನೇ ಬಾರಿಗೆ ಏಷ್ಯಾಕಪ್‌ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. 1984, 1988, 1991, 1995, 2010, 2016, 2018ರಲ್ಲಿ ಏಷ್ಯಾಕಪ್‌ ಚಾಂಪಿಯನ್‌ ಆಗಿದ್ದ ಭಾರತ ಇದೀಗ 8ನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

ಇದು ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆದ್ದ 2ನೇ ಏಕದಿನ ಏಷ್ಯಾಕಪ್‌ ಚಾಂಪಿಯನ್‌ ಪಟ್ಟವಾಗಿದೆ. ಇನ್ನೂ 6 ಬಾರಿ ಚಾಂಪಿಯನ್‌ ಹಾಗೂ 6 ಬಾರಿ ರನ್ನರ್‌ ಅಪ್‌ ಪ್ರಶಸ್ತಿ ಗೆದ್ದುಕೊಂಡಿದ್ದ ಶ್ರೀಲಂಕಾ 7ನೇ ಬಾರಿಗೆ ರನ್ನರ್‌ ಅಪ್‌ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

ಉತ್ತಮ ಆರಂಭ ಪಡೆಯುವ ನಿರೀಕ್ಷೆಯಲ್ಲಿದ್ದ ಲಂಕಾ ಕೇವಲ 6 ಓವರ್‌ಗಳಲ್ಲಿ 13 ರನ್‌ಗಳಿಗೆ ಪ್ರಮುಖ 6 ವಿಕೆಟ್‌ ಗಳನ್ನ ಕಳೆದುಕೊಂಡಿತ್ತು. ಅಗ್ರ ಕ್ರಮಾಂಕದ ಬ್ಯಾಟರ್‌ಗಳಾದ ಪತುಮ್ ನಿಸ್ಸಂಕ (2 ರನ್‌), ಕುಶಲ್‌ ಮೆಂಡಿಸ್‌ (17 ರನ್), ಧನಂಜಯ ಡಿ ಸಿಲ್ವಾ (4 ರನ್‌), ದುನಿತ್ ವೆಲ್ಲಾಳ (8 ರನ್‌) ಗಳಿಸಿದ್ರೆ ಕುಶಲ್ ಪೆರೇರ, ಸಾದೀರ ಸಮರವಿಕ್ರಮ, ಚರಿತ್ ಅಸಲಂಕ, ನಾಯಕ ದಸುನ್‌ ಶನಾಕ (Dasun Shanaka) ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿಕೊಂಡರು. ಕೊನೆಯಲ್ಲಿ ಪ್ರಮೋದ್‌ ಮಧೂಶನ್‌ 1 ರನ್‌ ಗಳಿಸಿದ್ರೆ, ಮತೀಶ ಪಥಿರಣ ಶೂನ್ಯಕ್ಕೆ ಔಟಾದರು. ದುಶನ್ ಹೇಮಂತ 13 ರನ್‌ಗಳಿಸಿ ಕ್ರೀ‌ಸ್‌ನಲ್ಲಿ ಉಳಿದರು.

ಲಂಕಾ ವಿರುದ್ಧ ಮಾರಕ ಬೌಲಿಂಗ್‌ ದಾಳಿ ನಡೆಸಿದ ಮೊಹಮ್ಮದ್‌ ಸಿರಾಜ್‌, 7 ಓವರ್‌ಗಳಲ್ಲಿ 21 ರನ್‌ ಬಿಟ್ಟುಕೊಟ್ಟು 6 ವಿಕೆಟ್‌ ಕಿತ್ತರೆ, ಹಾರ್ದಿಕ್‌ ಪಾಂಡ್ಯ 2.2 ಓವರ್‌ಗಳಲ್ಲಿ 3 ರನ್‌ ನೀಡಿ 3 ವಿಕೆಟ್‌ ಕಿತ್ತರು. ಜಸ್ಪ್ರೀತ್‌ ಬುಮ್ರಾ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

lokesh

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

3 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

3 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

3 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

3 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

3 hours ago