ಕೊಲಂಬೊ : ಶ್ರೀಲಂಕಾ ವಿರುದ್ಧ 10 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ 8ನೇ ಬಾರಿಗೆ ಏಷ್ಯಾಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. 1984, 1988, 1991, 1995, 2010, 2016, 2018ರಲ್ಲಿ ಏಷ್ಯಾಕಪ್ ಚಾಂಪಿಯನ್ ಆಗಿದ್ದ ಭಾರತ ಇದೀಗ 8ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಇದು ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆದ್ದ 2ನೇ ಏಕದಿನ ಏಷ್ಯಾಕಪ್ ಚಾಂಪಿಯನ್ ಪಟ್ಟವಾಗಿದೆ. ಇನ್ನೂ 6 ಬಾರಿ ಚಾಂಪಿಯನ್ ಹಾಗೂ 6 ಬಾರಿ ರನ್ನರ್ ಅಪ್ ಪ್ರಶಸ್ತಿ ಗೆದ್ದುಕೊಂಡಿದ್ದ ಶ್ರೀಲಂಕಾ 7ನೇ ಬಾರಿಗೆ ರನ್ನರ್ ಅಪ್ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.
ಉತ್ತಮ ಆರಂಭ ಪಡೆಯುವ ನಿರೀಕ್ಷೆಯಲ್ಲಿದ್ದ ಲಂಕಾ ಕೇವಲ 6 ಓವರ್ಗಳಲ್ಲಿ 13 ರನ್ಗಳಿಗೆ ಪ್ರಮುಖ 6 ವಿಕೆಟ್ ಗಳನ್ನ ಕಳೆದುಕೊಂಡಿತ್ತು. ಅಗ್ರ ಕ್ರಮಾಂಕದ ಬ್ಯಾಟರ್ಗಳಾದ ಪತುಮ್ ನಿಸ್ಸಂಕ (2 ರನ್), ಕುಶಲ್ ಮೆಂಡಿಸ್ (17 ರನ್), ಧನಂಜಯ ಡಿ ಸಿಲ್ವಾ (4 ರನ್), ದುನಿತ್ ವೆಲ್ಲಾಳ (8 ರನ್) ಗಳಿಸಿದ್ರೆ ಕುಶಲ್ ಪೆರೇರ, ಸಾದೀರ ಸಮರವಿಕ್ರಮ, ಚರಿತ್ ಅಸಲಂಕ, ನಾಯಕ ದಸುನ್ ಶನಾಕ (Dasun Shanaka) ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ಕೊನೆಯಲ್ಲಿ ಪ್ರಮೋದ್ ಮಧೂಶನ್ 1 ರನ್ ಗಳಿಸಿದ್ರೆ, ಮತೀಶ ಪಥಿರಣ ಶೂನ್ಯಕ್ಕೆ ಔಟಾದರು. ದುಶನ್ ಹೇಮಂತ 13 ರನ್ಗಳಿಸಿ ಕ್ರೀಸ್ನಲ್ಲಿ ಉಳಿದರು.
ಲಂಕಾ ವಿರುದ್ಧ ಮಾರಕ ಬೌಲಿಂಗ್ ದಾಳಿ ನಡೆಸಿದ ಮೊಹಮ್ಮದ್ ಸಿರಾಜ್, 7 ಓವರ್ಗಳಲ್ಲಿ 21 ರನ್ ಬಿಟ್ಟುಕೊಟ್ಟು 6 ವಿಕೆಟ್ ಕಿತ್ತರೆ, ಹಾರ್ದಿಕ್ ಪಾಂಡ್ಯ 2.2 ಓವರ್ಗಳಲ್ಲಿ 3 ರನ್ ನೀಡಿ 3 ವಿಕೆಟ್ ಕಿತ್ತರು. ಜಸ್ಪ್ರೀತ್ ಬುಮ್ರಾ 1 ವಿಕೆಟ್ಗೆ ತೃಪ್ತಿಪಟ್ಟುಕೊಂಡರು.
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…
ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…
ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…
ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…