ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲೂ ಅದ್ಭುತ ಪ್ರದರ್ಶನ ನೀಡಿದ ಭಾರತ, ಭಾಬರ್ ಪಡೆಗೆ ಐತಿಹಾಸಿಕ ಸೋಲಿನ ಶಾಕ್ ನೀಡಿತು. ಇದರೊಂದಿಗೆ ಏಷ್ಯಾಕಪ್ ಸೂಪರ್ 4 ಸುತ್ತಿನ ಪಾಯಿಂಟ್ ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿತು.
ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕದನ ಮಳೆಯ ನಡುವೆಯೂ ಅಭಿಮಾನಿಳಿಗೆ ರಸದೌತಣ ನೀಡಿದೆ. ಉಭಯ ತಂಡಗಳ ನಡುವೆ ಸೋಮವಾರ ಕೊಲಂಬೊದಲ್ಲಿ ನಡೆದ ಏಷ್ಯಾಕಪ್ ಸೂಪರ್ 4 ಪಂದ್ಯದಲ್ಲಿ ಕುಲ್ದೀಪ್ ಯಾದವ್ ಅವರ ಐದು ವಿಕೆಟ್ ಮ್ಯಾಜಿಕ್ ಹಾಗೂ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅವರ ಅಜೇಯ ಶತಕದ ನೆರವಿನಿಂದ ಭಾರತವು, ಪಾಕಿಸ್ತಾನವನ್ನು 228 ರನ್ಗಳಿಂದ ಸೋಲಿಸಿದೆ. ವಾಸ್ತವವಾಗಿ ಭಾನುವಾರ ನಡೆಯಬೇಕಿದ್ದ ಪಂದ್ಯವನ್ನು ಮಳೆಯ ಕಾರಣದಿಂದಾಗಿ ಮೀಸಲು ದಿನಕ್ಕೆ ಮುಂದೂಡಲಾಯಿತು. ಸೋಮವಾರವೂ ಮಳೆ ಅಡ್ಡಿಯ ನಡುವೆಯೂ ಪಂದ್ಯ ಪೂರ್ಣಗೊಳ್ಳುವಲ್ಲಿ ಯಶಸ್ವಿಯಾಯಿತು. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲೂ ಅದ್ಭುತ ಪ್ರದರ್ಶನ ನೀಡಿದ ಭಾರತ, ಭಾಬರ್ ಪಡೆಗೆ ಐತಿಹಾಸಿಕ ಸೋಲಿನ ಶಾಕ್ ನೀಡಿತು. ಇದರೊಂದಿಗೆ ಏಷ್ಯಾಕಪ್ ಸೂಪರ್ 4 ಸುತ್ತಿನ ಪಾಯಿಂಟ್ ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿತು.
ಪಾಕಿಸ್ತಾನದ ಎದುರು ಬೃಹತ್ ಗೆಲುವು ದಾಖಲಿಸಿರುವ ಭಾರತ ಪ್ರಸ್ತುತ ಏಷ್ಯಾಕಪ್ 2023 ರ ಸೂಪರ್ 4 ಸುತ್ತಿನ ಪಾಯಿಂಟ್ ಟೇಬಲ್ನಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಈ ಸುತ್ತಿನಲ್ಲಿ ಆಡಿರುವ ಏಕೈಕ ಪಂದ್ಯವನ್ನು ಭಾರಿ ಅಂತರದಿಂದ ಗೆದ್ದಿರುವ ರೋಹಿತ್ ಪಡೆ ಎರಡು ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ 228 ರನ್ಗಳ ಗೆಲುವು ಭಾರತದ ರನ್ ರೇಟ್ ಅನ್ನು +4.560 ಕ್ಕೆ ಏರಿಸಿದೆ. ಹೀಗಾಗಿ ಟೀಂ ಇಂಡಿಯಾ ಉಳಿದ ಮೂರು ತಂಡಗಳಿಗಿಂತ ಅಧಿಕ ನೆಟ್ ರನ್ರೇಟ್ನೊಂದಿಗೆ ಮೊದಲ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.
ಇನ್ನು ಈ ಪಂದ್ಯಕ್ಕೂ ಮುನ್ನ ಆಡಿದ ಏಕೈಕ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಮಣಿಸಿದ್ದ ಪಾಕಿಸ್ತಾನ 2 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿತ್ತು. ಭಾರತ ಮೂರನೇ ಸ್ಥಾನದಲ್ಲಿತ್ತು. ಆದರೆ ರೋಹಿತ್ ಪಡೆಯ ಎದುರು ಹೀನಾಯಕವಾಗಿ ಶರಣಾದ ಬಾಬರ್ ತಂಡದ ರನ್ ರೇಟ್ ಪಾತಳಕ್ಕೆ ಕುಸಿದಿದೆ. ಭಾರತದ ವಿರುದ್ಧ 228 ರನ್ಗಳ ಅಂತರದ ಸೋಲು, ಪಾಕ್ ಪಡೆಯ ರನ್ ರೇಟ್ ಅನ್ನು -1.892 ಕ್ಕೆ ತಂದು ನಿಲ್ಲಿಸಿದೆ. ಹೀಗಾಗಿ ಮೈನಸ್ ರನ್ ರೇಟ್ನೊಂದಿಗೆ ಪಾಕ್ ತಂಡ ಮೂರನೇ ಸ್ಥಾನಕ್ಕೆ ಕುಸಿದಿದೆ.
ಹಾಗೆಯೇ ಇಂದು ತನ್ನ ಸೂಪರ್ 4 ಸುತ್ತಿನ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಎದುರಿಸುತ್ತಿರುವ ಹಾಲಿ ಚಾಂಪಿಯನ್ ಶ್ರೀಲಂಕಾ +0.420ನೆಟ್ ರನ್ರೇಟ್ನೊಂದಿಗೆ ಎರಡನೇ ಸ್ಥಾನದಲ್ಲಿದೆ. ಈ ಮೊದಲು ಬಾಂಗ್ಲಾದೇಶ ತಂಡವನ್ನು ಮಣಿಸಿದ್ದ ಶ್ರೀಲಂಕಾ ಕೂಡ 2 ಅಂಕಗಳನ್ನು ಸಂಪಾದಿಸಿತ್ತು. ಆದರೆ ನೆಟ್ ರನ್ರೇಟ್ ಪಾಕಿಸ್ತಾನಕ್ಕಿಂತ ಕಡಿಮೆ ಇದ್ದಿದ್ದರಿಂದಾಗಿ ಭಾರತ- ಪಾಕಿಸ್ತಾನ ನಡುವಿನ ಕದನಕ್ಕೂ ಮುನ್ನ ಎರಡನೇ ಸ್ಥಾನದಲ್ಲಿತ್ತು. ಆದರೀಗ ಪಾಕ್ ತಂಡದ ನೆಟ್ ರನ್ರೇಟ್ ಮೈನಸ್ -1.892 ಕ್ಕೆ ಇಳಿದಿರುವುದರಿಂದ ಪ್ಲಸ್ ರನ್ ರೇಟ್ ಹೊಂದಿರುವ ಶ್ರೀಲಂಕಾ ಎರಡನೇ ಸ್ಥಾನವನ್ನು ತನ್ನಲ್ಲೇ ಉಳಿಸಿಕೊಂಡಿದೆ. ಇನ್ನು ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಬಾಂಗ್ಲಾದೇಶ -0.749 ನೆಟ್ ರನ್ರೇಟ್ ಹೊಂದಿದೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…