ಏಷ್ಯಾಕಪ್ 2023ರಲ್ಲಿ ಟೀಂ ಇಂಡಿಯಾಗೆ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಸ್ಟಾರ್ ಬೌಲರ್ ಆಗಿದ್ದರು. ಆದರೆ ಇದೀಗ ಅವರು ಟೂರ್ನಿ ಮಧ್ಯೆ ಭಾರತಕ್ಕೆ ಮರಳಿದ್ದಾರೆ.
ವೇಗಿ ಜಸ್ಪ್ರೀತ್ ಬುಮ್ರಾ ವೈಯಕ್ತಿಕ ಕಾರಣಗಳಿಂದ ಭಾರತಕ್ಕೆ ಮರಳಿದ್ದಾರೆ. ಆದರೆ, ಅಭಿಮಾನಿಗಳಿಗೆ ಸಂತಸದ ಸುದ್ದಿ ಏನೆಂದರೆ ಅವರು ಏಷ್ಯಾಕಪ್ ಸೂಪರ್-4 ಹಂತಕ್ಕೆ ಬಹುಶಃ ತಂಡವನ್ನು ಸೇರಿಕೊಳ್ಳಬಹುದು. ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಶಮಿ ಆಡಲಿದ್ದಾರೆ. ಏಷ್ಯಾ ಕಪ್ 2023 ರಲ್ಲಿ ಭಾರತದ ಮುಂದಿನ ಪಂದ್ಯ ನೇಪಾಳ ವಿರುದ್ಧ ಸೋಮವಾರ ನಡೆಯಲಿದೆ.
ಮಾಧ್ಯಮ ವರದಿಗಳ ಪ್ರಕಾರ, ಜಸ್ಪ್ರೀತ್ ಬುಮ್ರಾ ಅವರು ಸಂಪೂರ್ಣವಾಗಿ ಫಿಟ್ ಆಗಿದ್ದಾರೆ. ಆದರೆ ವೈಯಕ್ತಿಕ ಕಾರಣಗಳಿಂದ ಅವರು ಸೋಮವಾರ (ಸೆಪ್ಟೆಂಬರ್ 4) ನೇಪಾಳ ವಿರುದ್ಧದ ಪಂದ್ಯದಲ್ಲಿ ಆಯ್ಕೆಗೆ ಲಭ್ಯವಿರುವುದಿಲ್ಲ. ಆದಾಗ್ಯೂ, ವರದಿಯ ಪ್ರಕಾರ, ಅವರು ಭಾರತದ ಸೂಪರ್-4 ಹಂತದ ಪಂದ್ಯಗಳಲ್ಲಿ ಪುನರಾಗಮನ ಮಾಡುತ್ತಾರೆ.
ಭಾರತ ಮತ್ತು ಪಾಕಿಸ್ತಾನ ನಡುವೆ ಶನಿವಾರ ನಡೆಯಬೇಕಿದ್ದ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಜಸ್ಪ್ರೀತ್ ಬುಮ್ರಾ ಅವರಿಗೆ ಈ ಪಂದ್ಯದಲ್ಲಿ ಬೌಲಿಂಗ್ ಮಾಡುವ ಅವಕಾಶ ಸಿಗಲಿಲ್ಲ ಆದರೆ ಅವರು ಬ್ಯಾಟಿಂಗ್ನಲ್ಲಿ ತಮ್ಮ ಬಲವನ್ನು ತೋರಿಸಿದರು. ಅವರು 14 ಎಸೆತಗಳಲ್ಲಿ 16 ರನ್ ಗಳಿಸಿದರು. ಅವರು ತಮ್ಮ ಇನ್ನಿಂಗ್ಸ್ನಲ್ಲಿ ಮೂರು ಬೌಂಡರಿಗಳನ್ನು ಬಾರಿಸಿದ್ದರು.
ಜಸ್ಪ್ರೀತ್ ಬುಮ್ರಾ ಕಳೆದ ತಿಂಗಳು ಐರ್ಲೆಂಡ್ ಪ್ರವಾಸದಲ್ಲಿ ನಾಯಕನಾಗಿ ಭಾರತ ತಂಡಕ್ಕೆ ಮರಳಿದ್ದರು. ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಬೆನ್ನು ನೋವಿನಿಂದಾಗಿ ಅವರು ಸುಮಾರು 11 ತಿಂಗಳ ಕಾಲ ಕ್ರಿಕೆಟ್ನಿಂದ ದೂರವಿದ್ದರು.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…