ಕ್ರೀಡೆ

ಏಷ್ಯಾ ಕಪ್ 2023: ಟೂರ್ನಿ ಮಧ್ಯೆ ಮುಂಬೈಗೆ ತೆರಳಿದ ಜಸ್ಪ್ರೀತ್ ಬುಮ್ರಾ

ಏಷ್ಯಾಕಪ್ 2023ರಲ್ಲಿ ಟೀಂ ಇಂಡಿಯಾಗೆ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಸ್ಟಾರ್ ಬೌಲರ್ ಆಗಿದ್ದರು. ಆದರೆ ಇದೀಗ ಅವರು ಟೂರ್ನಿ ಮಧ್ಯೆ ಭಾರತಕ್ಕೆ ಮರಳಿದ್ದಾರೆ.

ವೇಗಿ ಜಸ್ಪ್ರೀತ್ ಬುಮ್ರಾ ವೈಯಕ್ತಿಕ ಕಾರಣಗಳಿಂದ ಭಾರತಕ್ಕೆ ಮರಳಿದ್ದಾರೆ. ಆದರೆ, ಅಭಿಮಾನಿಗಳಿಗೆ ಸಂತಸದ ಸುದ್ದಿ ಏನೆಂದರೆ ಅವರು ಏಷ್ಯಾಕಪ್ ಸೂಪರ್-4 ಹಂತಕ್ಕೆ ಬಹುಶಃ ತಂಡವನ್ನು ಸೇರಿಕೊಳ್ಳಬಹುದು. ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಶಮಿ ಆಡಲಿದ್ದಾರೆ. ಏಷ್ಯಾ ಕಪ್ 2023 ರಲ್ಲಿ ಭಾರತದ ಮುಂದಿನ ಪಂದ್ಯ ನೇಪಾಳ ವಿರುದ್ಧ ಸೋಮವಾರ ನಡೆಯಲಿದೆ.

ಮಾಧ್ಯಮ ವರದಿಗಳ ಪ್ರಕಾರ, ಜಸ್ಪ್ರೀತ್ ಬುಮ್ರಾ ಅವರು ಸಂಪೂರ್ಣವಾಗಿ ಫಿಟ್ ಆಗಿದ್ದಾರೆ. ಆದರೆ ವೈಯಕ್ತಿಕ ಕಾರಣಗಳಿಂದ ಅವರು ಸೋಮವಾರ (ಸೆಪ್ಟೆಂಬರ್ 4) ನೇಪಾಳ ವಿರುದ್ಧದ ಪಂದ್ಯದಲ್ಲಿ ಆಯ್ಕೆಗೆ ಲಭ್ಯವಿರುವುದಿಲ್ಲ. ಆದಾಗ್ಯೂ, ವರದಿಯ ಪ್ರಕಾರ, ಅವರು ಭಾರತದ ಸೂಪರ್-4 ಹಂತದ ಪಂದ್ಯಗಳಲ್ಲಿ ಪುನರಾಗಮನ ಮಾಡುತ್ತಾರೆ.

ಭಾರತ ಮತ್ತು ಪಾಕಿಸ್ತಾನ ನಡುವೆ ಶನಿವಾರ ನಡೆಯಬೇಕಿದ್ದ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಜಸ್ಪ್ರೀತ್ ಬುಮ್ರಾ ಅವರಿಗೆ ಈ ಪಂದ್ಯದಲ್ಲಿ ಬೌಲಿಂಗ್ ಮಾಡುವ ಅವಕಾಶ ಸಿಗಲಿಲ್ಲ ಆದರೆ ಅವರು ಬ್ಯಾಟಿಂಗ್‌ನಲ್ಲಿ ತಮ್ಮ ಬಲವನ್ನು ತೋರಿಸಿದರು. ಅವರು 14 ಎಸೆತಗಳಲ್ಲಿ 16 ರನ್ ಗಳಿಸಿದರು. ಅವರು ತಮ್ಮ ಇನ್ನಿಂಗ್ಸ್‌ನಲ್ಲಿ ಮೂರು ಬೌಂಡರಿಗಳನ್ನು ಬಾರಿಸಿದ್ದರು.

ಜಸ್ಪ್ರೀತ್ ಬುಮ್ರಾ ಕಳೆದ ತಿಂಗಳು ಐರ್ಲೆಂಡ್ ಪ್ರವಾಸದಲ್ಲಿ ನಾಯಕನಾಗಿ ಭಾರತ ತಂಡಕ್ಕೆ ಮರಳಿದ್ದರು. ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಬೆನ್ನು ನೋವಿನಿಂದಾಗಿ ಅವರು ಸುಮಾರು 11 ತಿಂಗಳ ಕಾಲ ಕ್ರಿಕೆಟ್‌ನಿಂದ ದೂರವಿದ್ದರು.

andolanait

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

59 mins ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

1 hour ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

1 hour ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

1 hour ago