ಕ್ರೀಡೆ

ಏಷ್ಯಾ ಕಪ್ 2023: ಟೂರ್ನಿ ಮಧ್ಯೆ ಮುಂಬೈಗೆ ತೆರಳಿದ ಜಸ್ಪ್ರೀತ್ ಬುಮ್ರಾ

ಏಷ್ಯಾಕಪ್ 2023ರಲ್ಲಿ ಟೀಂ ಇಂಡಿಯಾಗೆ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಸ್ಟಾರ್ ಬೌಲರ್ ಆಗಿದ್ದರು. ಆದರೆ ಇದೀಗ ಅವರು ಟೂರ್ನಿ ಮಧ್ಯೆ ಭಾರತಕ್ಕೆ ಮರಳಿದ್ದಾರೆ.

ವೇಗಿ ಜಸ್ಪ್ರೀತ್ ಬುಮ್ರಾ ವೈಯಕ್ತಿಕ ಕಾರಣಗಳಿಂದ ಭಾರತಕ್ಕೆ ಮರಳಿದ್ದಾರೆ. ಆದರೆ, ಅಭಿಮಾನಿಗಳಿಗೆ ಸಂತಸದ ಸುದ್ದಿ ಏನೆಂದರೆ ಅವರು ಏಷ್ಯಾಕಪ್ ಸೂಪರ್-4 ಹಂತಕ್ಕೆ ಬಹುಶಃ ತಂಡವನ್ನು ಸೇರಿಕೊಳ್ಳಬಹುದು. ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಶಮಿ ಆಡಲಿದ್ದಾರೆ. ಏಷ್ಯಾ ಕಪ್ 2023 ರಲ್ಲಿ ಭಾರತದ ಮುಂದಿನ ಪಂದ್ಯ ನೇಪಾಳ ವಿರುದ್ಧ ಸೋಮವಾರ ನಡೆಯಲಿದೆ.

ಮಾಧ್ಯಮ ವರದಿಗಳ ಪ್ರಕಾರ, ಜಸ್ಪ್ರೀತ್ ಬುಮ್ರಾ ಅವರು ಸಂಪೂರ್ಣವಾಗಿ ಫಿಟ್ ಆಗಿದ್ದಾರೆ. ಆದರೆ ವೈಯಕ್ತಿಕ ಕಾರಣಗಳಿಂದ ಅವರು ಸೋಮವಾರ (ಸೆಪ್ಟೆಂಬರ್ 4) ನೇಪಾಳ ವಿರುದ್ಧದ ಪಂದ್ಯದಲ್ಲಿ ಆಯ್ಕೆಗೆ ಲಭ್ಯವಿರುವುದಿಲ್ಲ. ಆದಾಗ್ಯೂ, ವರದಿಯ ಪ್ರಕಾರ, ಅವರು ಭಾರತದ ಸೂಪರ್-4 ಹಂತದ ಪಂದ್ಯಗಳಲ್ಲಿ ಪುನರಾಗಮನ ಮಾಡುತ್ತಾರೆ.

ಭಾರತ ಮತ್ತು ಪಾಕಿಸ್ತಾನ ನಡುವೆ ಶನಿವಾರ ನಡೆಯಬೇಕಿದ್ದ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಜಸ್ಪ್ರೀತ್ ಬುಮ್ರಾ ಅವರಿಗೆ ಈ ಪಂದ್ಯದಲ್ಲಿ ಬೌಲಿಂಗ್ ಮಾಡುವ ಅವಕಾಶ ಸಿಗಲಿಲ್ಲ ಆದರೆ ಅವರು ಬ್ಯಾಟಿಂಗ್‌ನಲ್ಲಿ ತಮ್ಮ ಬಲವನ್ನು ತೋರಿಸಿದರು. ಅವರು 14 ಎಸೆತಗಳಲ್ಲಿ 16 ರನ್ ಗಳಿಸಿದರು. ಅವರು ತಮ್ಮ ಇನ್ನಿಂಗ್ಸ್‌ನಲ್ಲಿ ಮೂರು ಬೌಂಡರಿಗಳನ್ನು ಬಾರಿಸಿದ್ದರು.

ಜಸ್ಪ್ರೀತ್ ಬುಮ್ರಾ ಕಳೆದ ತಿಂಗಳು ಐರ್ಲೆಂಡ್ ಪ್ರವಾಸದಲ್ಲಿ ನಾಯಕನಾಗಿ ಭಾರತ ತಂಡಕ್ಕೆ ಮರಳಿದ್ದರು. ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಬೆನ್ನು ನೋವಿನಿಂದಾಗಿ ಅವರು ಸುಮಾರು 11 ತಿಂಗಳ ಕಾಲ ಕ್ರಿಕೆಟ್‌ನಿಂದ ದೂರವಿದ್ದರು.

andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

6 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

8 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

10 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

10 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

12 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

12 hours ago