ಕ್ರೀಡೆ

ಏಷ್ಯಾ ಕಪ್ ಕೂಟ ಬಹಿಷ್ಕರಿಸುತ್ತೇವೆ: ಪಾಕ್ ಮಂಡಳಿಯ ಬೆದರಿಕೆ?

ಮುಂಬೈ: ಈ ವರ್ಷದ ಏಷ್ಯಾ ಕಪ್ ಕೂಟವನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವುದನ್ನು ಪಾಕಿಸ್ತಾನ ಕ್ರಿಕೆಟ್ ಅಧಿಕಾರಿಗಳು ವಿರೋಧಿಸಿದ್ದಾರೆ. ತಮ್ಮ ಪ್ರಸ್ತಾವನೆಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಂಗೀಕರಿಸದಿದ್ದರೆ ಪಂದ್ಯಾವಳಿಯನ್ನು ಬಹಿಷ್ಕರಿಸುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಖ್ಯಸ್ಥ ನಜಮ್ ಸೇಥಿ ಅವರು ಮಂಗಳವಾರ ದುಬೈನಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧಿಕಾರಿಗಳನ್ನು ಭೇಟಿ ಮಾಡಿದ್ದು, ಏಷ್ಯಾ ಕಪ್ ಕೂಟವನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಏಷ್ಯಾ ಕಪ್‌ ಗಾಗಿ ಪಾಕಿಸ್ತಾನದ ಪರಿಷ್ಕೃತ ಹೈಬ್ರಿಡ್ ಮಾದರಿಯ ಪ್ರಸ್ತಾವನೆ ವೇಳಾಪಟ್ಟಿಯನ್ನು ಎಸಿಸಿ ಒಪ್ಪಿಕೊಳ್ಳಬೇಕು. ಒಂದು ವೇಳೆ ಹೆಚ್ಚಿನ ಸದಸ್ಯ ರಾಷ್ಟ್ರಗಳು ಬೇರೆಡೆ ಸ್ಥಳಾಂತರಿಸಲು ಬಯಸಿದರೆ ಕೂಟವನ್ನು 2018 ಮತ್ತು 2022 ರಂತೆ ಯುಎಇಯಲ್ಲಿ ನಡೆಸಬೇಕು ಎಂದು ಸೇಥಿ ಒತ್ತಿ ಹೇಳಿದರು.

ಬಿಸಿಸಿಐನಿ ಹಿಂಬಾಗಿಲಿನ ಬೆಂಬಲದೊಂದಿಗೆ ಶ್ರೀಲಂಕಾ ಮಂಡಳಿಯು ಈ ವರ್ಷ ಏಷ್ಯಾ ಕಪ್ ಅನ್ನು ಆಯೋಜಿಸಲು ಬಯಸಿದೆ ಎಂದು ಎಸಿಸಿಗೆ ತಿಳಿಸಿರುವುದನ್ನು ತಿಳಿದು ಪಿಸಿಬಿ ಆಶ್ಚರ್ಯಚಕಿತವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಬಾರಿಯ ಏಷ್ಯಾ ಕಪ್ ಆತಿಥ್ಯವನ್ನು ಪಾಕಿಸ್ಥಾನ ಪಡೆದುಕೊಂಡಿತ್ತು. ಆದರೆ ರಾಜಕೀಯ ಕಾರಣಗಳಿಂದ ಬಿಸಿಸಿಐ ಭಾರತೀಯ ಆಟಗಾರರನ್ನು ಪಾಕ್ ಗೆ ಕಳುಹಿಸದಿರಲು ನಿರ್ಧರಿಸಿದೆ. ಹೀಗಾಗಿ ಭಾರತದ ಪಂದ್ಯಗಳು ಯುಎಇ ನಲ್ಲಿ ಮತ್ತು ಉಳಿದ ಪಂದ್ಯಗಳು ಪಾಕಿಸ್ಥಾನದಲ್ಲಿ ನಡೆಸುವ ಹೈಬ್ರಿಡ್ ಮಾದರಿಯನ್ನು ಪಾಕ್ ಮಂಡಳಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಗೆ ಪ್ರಸ್ತಾಪಿಸಿದೆ.

andolanait

Recent Posts

ನಮೀನಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

43 seconds ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

11 mins ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

16 mins ago

ಮಹದೇಶ್ವರ ಬೆಟ್ಟ : ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ತೆರೆ

ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ…

32 mins ago

ಭಾರತೀಯ ಸೇನೆ ಬಗ್ಗೆ ರಾಹುಲ್‌ ಗಾಂಧಿ ಆಕ್ಷೇಪಾರ್ಹ ಹೇಳಿಕೆ

ನವದೆಹಲಿ: ಭಾರತ್‌ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಭಾರತೀಯ ಸೇನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ…

34 mins ago

ದೊಡ್ಡಕೆರೆ, ಲಿಂಗಾಂಬುಧಿ ಕೆರೆ ಪುನರುಜ್ಜೀವನಗೊಳಿಸಿ : ಪರಿಸರ ಸಂರಕ್ಷಣಾ ವೇದಿಕೆ ಒತ್ತಾಯ

ಮೈಸೂರು : ನಗರದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ರಚಿಸಿರುವ ನಿವೇಶನಗಳನ್ನು ತೆರವುಗೊಳಿಸಿ ದೊಡ್ಡಕೆರೆ ಮತ್ತು ಲಿಂಗಾಂಬುಧಿ ಕೆರೆಯನ್ನು ಪುನರುಜ್ಜೀವನಗೊಳಿಸಬೇಕು ಎಂದು…

45 mins ago