ಕ್ರೀಡೆ

ಏಷ್ಯಾ ಕಪ್ ಕೂಟ ಬಹಿಷ್ಕರಿಸುತ್ತೇವೆ: ಪಾಕ್ ಮಂಡಳಿಯ ಬೆದರಿಕೆ?

ಮುಂಬೈ: ಈ ವರ್ಷದ ಏಷ್ಯಾ ಕಪ್ ಕೂಟವನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವುದನ್ನು ಪಾಕಿಸ್ತಾನ ಕ್ರಿಕೆಟ್ ಅಧಿಕಾರಿಗಳು ವಿರೋಧಿಸಿದ್ದಾರೆ. ತಮ್ಮ ಪ್ರಸ್ತಾವನೆಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಂಗೀಕರಿಸದಿದ್ದರೆ ಪಂದ್ಯಾವಳಿಯನ್ನು ಬಹಿಷ್ಕರಿಸುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಖ್ಯಸ್ಥ ನಜಮ್ ಸೇಥಿ ಅವರು ಮಂಗಳವಾರ ದುಬೈನಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧಿಕಾರಿಗಳನ್ನು ಭೇಟಿ ಮಾಡಿದ್ದು, ಏಷ್ಯಾ ಕಪ್ ಕೂಟವನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಏಷ್ಯಾ ಕಪ್‌ ಗಾಗಿ ಪಾಕಿಸ್ತಾನದ ಪರಿಷ್ಕೃತ ಹೈಬ್ರಿಡ್ ಮಾದರಿಯ ಪ್ರಸ್ತಾವನೆ ವೇಳಾಪಟ್ಟಿಯನ್ನು ಎಸಿಸಿ ಒಪ್ಪಿಕೊಳ್ಳಬೇಕು. ಒಂದು ವೇಳೆ ಹೆಚ್ಚಿನ ಸದಸ್ಯ ರಾಷ್ಟ್ರಗಳು ಬೇರೆಡೆ ಸ್ಥಳಾಂತರಿಸಲು ಬಯಸಿದರೆ ಕೂಟವನ್ನು 2018 ಮತ್ತು 2022 ರಂತೆ ಯುಎಇಯಲ್ಲಿ ನಡೆಸಬೇಕು ಎಂದು ಸೇಥಿ ಒತ್ತಿ ಹೇಳಿದರು.

ಬಿಸಿಸಿಐನಿ ಹಿಂಬಾಗಿಲಿನ ಬೆಂಬಲದೊಂದಿಗೆ ಶ್ರೀಲಂಕಾ ಮಂಡಳಿಯು ಈ ವರ್ಷ ಏಷ್ಯಾ ಕಪ್ ಅನ್ನು ಆಯೋಜಿಸಲು ಬಯಸಿದೆ ಎಂದು ಎಸಿಸಿಗೆ ತಿಳಿಸಿರುವುದನ್ನು ತಿಳಿದು ಪಿಸಿಬಿ ಆಶ್ಚರ್ಯಚಕಿತವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಬಾರಿಯ ಏಷ್ಯಾ ಕಪ್ ಆತಿಥ್ಯವನ್ನು ಪಾಕಿಸ್ಥಾನ ಪಡೆದುಕೊಂಡಿತ್ತು. ಆದರೆ ರಾಜಕೀಯ ಕಾರಣಗಳಿಂದ ಬಿಸಿಸಿಐ ಭಾರತೀಯ ಆಟಗಾರರನ್ನು ಪಾಕ್ ಗೆ ಕಳುಹಿಸದಿರಲು ನಿರ್ಧರಿಸಿದೆ. ಹೀಗಾಗಿ ಭಾರತದ ಪಂದ್ಯಗಳು ಯುಎಇ ನಲ್ಲಿ ಮತ್ತು ಉಳಿದ ಪಂದ್ಯಗಳು ಪಾಕಿಸ್ಥಾನದಲ್ಲಿ ನಡೆಸುವ ಹೈಬ್ರಿಡ್ ಮಾದರಿಯನ್ನು ಪಾಕ್ ಮಂಡಳಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಗೆ ಪ್ರಸ್ತಾಪಿಸಿದೆ.

andolanait

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

5 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

5 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

5 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

5 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

7 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

8 hours ago