ಕ್ರೀಡೆ

ಏಷ್ಯಾ ಕಪ್ ಕೂಟ ಬಹಿಷ್ಕರಿಸುತ್ತೇವೆ: ಪಾಕ್ ಮಂಡಳಿಯ ಬೆದರಿಕೆ?

ಮುಂಬೈ: ಈ ವರ್ಷದ ಏಷ್ಯಾ ಕಪ್ ಕೂಟವನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವುದನ್ನು ಪಾಕಿಸ್ತಾನ ಕ್ರಿಕೆಟ್ ಅಧಿಕಾರಿಗಳು ವಿರೋಧಿಸಿದ್ದಾರೆ. ತಮ್ಮ ಪ್ರಸ್ತಾವನೆಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಂಗೀಕರಿಸದಿದ್ದರೆ ಪಂದ್ಯಾವಳಿಯನ್ನು ಬಹಿಷ್ಕರಿಸುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಖ್ಯಸ್ಥ ನಜಮ್ ಸೇಥಿ ಅವರು ಮಂಗಳವಾರ ದುಬೈನಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧಿಕಾರಿಗಳನ್ನು ಭೇಟಿ ಮಾಡಿದ್ದು, ಏಷ್ಯಾ ಕಪ್ ಕೂಟವನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಏಷ್ಯಾ ಕಪ್‌ ಗಾಗಿ ಪಾಕಿಸ್ತಾನದ ಪರಿಷ್ಕೃತ ಹೈಬ್ರಿಡ್ ಮಾದರಿಯ ಪ್ರಸ್ತಾವನೆ ವೇಳಾಪಟ್ಟಿಯನ್ನು ಎಸಿಸಿ ಒಪ್ಪಿಕೊಳ್ಳಬೇಕು. ಒಂದು ವೇಳೆ ಹೆಚ್ಚಿನ ಸದಸ್ಯ ರಾಷ್ಟ್ರಗಳು ಬೇರೆಡೆ ಸ್ಥಳಾಂತರಿಸಲು ಬಯಸಿದರೆ ಕೂಟವನ್ನು 2018 ಮತ್ತು 2022 ರಂತೆ ಯುಎಇಯಲ್ಲಿ ನಡೆಸಬೇಕು ಎಂದು ಸೇಥಿ ಒತ್ತಿ ಹೇಳಿದರು.

ಬಿಸಿಸಿಐನಿ ಹಿಂಬಾಗಿಲಿನ ಬೆಂಬಲದೊಂದಿಗೆ ಶ್ರೀಲಂಕಾ ಮಂಡಳಿಯು ಈ ವರ್ಷ ಏಷ್ಯಾ ಕಪ್ ಅನ್ನು ಆಯೋಜಿಸಲು ಬಯಸಿದೆ ಎಂದು ಎಸಿಸಿಗೆ ತಿಳಿಸಿರುವುದನ್ನು ತಿಳಿದು ಪಿಸಿಬಿ ಆಶ್ಚರ್ಯಚಕಿತವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಬಾರಿಯ ಏಷ್ಯಾ ಕಪ್ ಆತಿಥ್ಯವನ್ನು ಪಾಕಿಸ್ಥಾನ ಪಡೆದುಕೊಂಡಿತ್ತು. ಆದರೆ ರಾಜಕೀಯ ಕಾರಣಗಳಿಂದ ಬಿಸಿಸಿಐ ಭಾರತೀಯ ಆಟಗಾರರನ್ನು ಪಾಕ್ ಗೆ ಕಳುಹಿಸದಿರಲು ನಿರ್ಧರಿಸಿದೆ. ಹೀಗಾಗಿ ಭಾರತದ ಪಂದ್ಯಗಳು ಯುಎಇ ನಲ್ಲಿ ಮತ್ತು ಉಳಿದ ಪಂದ್ಯಗಳು ಪಾಕಿಸ್ಥಾನದಲ್ಲಿ ನಡೆಸುವ ಹೈಬ್ರಿಡ್ ಮಾದರಿಯನ್ನು ಪಾಕ್ ಮಂಡಳಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಗೆ ಪ್ರಸ್ತಾಪಿಸಿದೆ.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

7 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

7 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

7 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

10 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

10 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

10 hours ago