ಮುಂಬೈ: ಈ ವರ್ಷದ ಏಷ್ಯಾ ಕಪ್ ಕೂಟವನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವುದನ್ನು ಪಾಕಿಸ್ತಾನ ಕ್ರಿಕೆಟ್ ಅಧಿಕಾರಿಗಳು ವಿರೋಧಿಸಿದ್ದಾರೆ. ತಮ್ಮ ಪ್ರಸ್ತಾವನೆಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಂಗೀಕರಿಸದಿದ್ದರೆ ಪಂದ್ಯಾವಳಿಯನ್ನು ಬಹಿಷ್ಕರಿಸುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿದ್ದಾರೆ ಎಂದು ವರದಿಯಾಗಿದೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಖ್ಯಸ್ಥ ನಜಮ್ ಸೇಥಿ ಅವರು ಮಂಗಳವಾರ ದುಬೈನಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧಿಕಾರಿಗಳನ್ನು ಭೇಟಿ ಮಾಡಿದ್ದು, ಏಷ್ಯಾ ಕಪ್ ಕೂಟವನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.
ಏಷ್ಯಾ ಕಪ್ ಗಾಗಿ ಪಾಕಿಸ್ತಾನದ ಪರಿಷ್ಕೃತ ಹೈಬ್ರಿಡ್ ಮಾದರಿಯ ಪ್ರಸ್ತಾವನೆ ವೇಳಾಪಟ್ಟಿಯನ್ನು ಎಸಿಸಿ ಒಪ್ಪಿಕೊಳ್ಳಬೇಕು. ಒಂದು ವೇಳೆ ಹೆಚ್ಚಿನ ಸದಸ್ಯ ರಾಷ್ಟ್ರಗಳು ಬೇರೆಡೆ ಸ್ಥಳಾಂತರಿಸಲು ಬಯಸಿದರೆ ಕೂಟವನ್ನು 2018 ಮತ್ತು 2022 ರಂತೆ ಯುಎಇಯಲ್ಲಿ ನಡೆಸಬೇಕು ಎಂದು ಸೇಥಿ ಒತ್ತಿ ಹೇಳಿದರು.
ಬಿಸಿಸಿಐನಿ ಹಿಂಬಾಗಿಲಿನ ಬೆಂಬಲದೊಂದಿಗೆ ಶ್ರೀಲಂಕಾ ಮಂಡಳಿಯು ಈ ವರ್ಷ ಏಷ್ಯಾ ಕಪ್ ಅನ್ನು ಆಯೋಜಿಸಲು ಬಯಸಿದೆ ಎಂದು ಎಸಿಸಿಗೆ ತಿಳಿಸಿರುವುದನ್ನು ತಿಳಿದು ಪಿಸಿಬಿ ಆಶ್ಚರ್ಯಚಕಿತವಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಬಾರಿಯ ಏಷ್ಯಾ ಕಪ್ ಆತಿಥ್ಯವನ್ನು ಪಾಕಿಸ್ಥಾನ ಪಡೆದುಕೊಂಡಿತ್ತು. ಆದರೆ ರಾಜಕೀಯ ಕಾರಣಗಳಿಂದ ಬಿಸಿಸಿಐ ಭಾರತೀಯ ಆಟಗಾರರನ್ನು ಪಾಕ್ ಗೆ ಕಳುಹಿಸದಿರಲು ನಿರ್ಧರಿಸಿದೆ. ಹೀಗಾಗಿ ಭಾರತದ ಪಂದ್ಯಗಳು ಯುಎಇ ನಲ್ಲಿ ಮತ್ತು ಉಳಿದ ಪಂದ್ಯಗಳು ಪಾಕಿಸ್ಥಾನದಲ್ಲಿ ನಡೆಸುವ ಹೈಬ್ರಿಡ್ ಮಾದರಿಯನ್ನು ಪಾಕ್ ಮಂಡಳಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಗೆ ಪ್ರಸ್ತಾಪಿಸಿದೆ.
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…
ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…
ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…