ಮುಂಬೈ: ಈ ವರ್ಷದ ಏಷ್ಯಾ ಕಪ್ ಕೂಟವನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವುದನ್ನು ಪಾಕಿಸ್ತಾನ ಕ್ರಿಕೆಟ್ ಅಧಿಕಾರಿಗಳು ವಿರೋಧಿಸಿದ್ದಾರೆ. ತಮ್ಮ ಪ್ರಸ್ತಾವನೆಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಂಗೀಕರಿಸದಿದ್ದರೆ ಪಂದ್ಯಾವಳಿಯನ್ನು ಬಹಿಷ್ಕರಿಸುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿದ್ದಾರೆ ಎಂದು ವರದಿಯಾಗಿದೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಖ್ಯಸ್ಥ ನಜಮ್ ಸೇಥಿ ಅವರು ಮಂಗಳವಾರ ದುಬೈನಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧಿಕಾರಿಗಳನ್ನು ಭೇಟಿ ಮಾಡಿದ್ದು, ಏಷ್ಯಾ ಕಪ್ ಕೂಟವನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.
ಏಷ್ಯಾ ಕಪ್ ಗಾಗಿ ಪಾಕಿಸ್ತಾನದ ಪರಿಷ್ಕೃತ ಹೈಬ್ರಿಡ್ ಮಾದರಿಯ ಪ್ರಸ್ತಾವನೆ ವೇಳಾಪಟ್ಟಿಯನ್ನು ಎಸಿಸಿ ಒಪ್ಪಿಕೊಳ್ಳಬೇಕು. ಒಂದು ವೇಳೆ ಹೆಚ್ಚಿನ ಸದಸ್ಯ ರಾಷ್ಟ್ರಗಳು ಬೇರೆಡೆ ಸ್ಥಳಾಂತರಿಸಲು ಬಯಸಿದರೆ ಕೂಟವನ್ನು 2018 ಮತ್ತು 2022 ರಂತೆ ಯುಎಇಯಲ್ಲಿ ನಡೆಸಬೇಕು ಎಂದು ಸೇಥಿ ಒತ್ತಿ ಹೇಳಿದರು.
ಬಿಸಿಸಿಐನಿ ಹಿಂಬಾಗಿಲಿನ ಬೆಂಬಲದೊಂದಿಗೆ ಶ್ರೀಲಂಕಾ ಮಂಡಳಿಯು ಈ ವರ್ಷ ಏಷ್ಯಾ ಕಪ್ ಅನ್ನು ಆಯೋಜಿಸಲು ಬಯಸಿದೆ ಎಂದು ಎಸಿಸಿಗೆ ತಿಳಿಸಿರುವುದನ್ನು ತಿಳಿದು ಪಿಸಿಬಿ ಆಶ್ಚರ್ಯಚಕಿತವಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಬಾರಿಯ ಏಷ್ಯಾ ಕಪ್ ಆತಿಥ್ಯವನ್ನು ಪಾಕಿಸ್ಥಾನ ಪಡೆದುಕೊಂಡಿತ್ತು. ಆದರೆ ರಾಜಕೀಯ ಕಾರಣಗಳಿಂದ ಬಿಸಿಸಿಐ ಭಾರತೀಯ ಆಟಗಾರರನ್ನು ಪಾಕ್ ಗೆ ಕಳುಹಿಸದಿರಲು ನಿರ್ಧರಿಸಿದೆ. ಹೀಗಾಗಿ ಭಾರತದ ಪಂದ್ಯಗಳು ಯುಎಇ ನಲ್ಲಿ ಮತ್ತು ಉಳಿದ ಪಂದ್ಯಗಳು ಪಾಕಿಸ್ಥಾನದಲ್ಲಿ ನಡೆಸುವ ಹೈಬ್ರಿಡ್ ಮಾದರಿಯನ್ನು ಪಾಕ್ ಮಂಡಳಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಗೆ ಪ್ರಸ್ತಾಪಿಸಿದೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…