ಕ್ರೀಡೆ

ಏಷ್ಯಾ ಕಪ್ ಫುಟ್ಬಾಲ್‌: ಭಾರತಕ್ಕೆ ಸೋಲುಣಿಸಿದ ಆಸ್ಟ್ರೇಲಿಯಾ

ಬೆಂಗಳೂರು: ಏಷ್ಯಾಕಪ್-2024ರ ಆರಂಭಿಕ ಪಂದ್ಯದಲ್ಲಿ ಆಸ್ಟ್ರೇಲಿಯಾ ಫುಟ್ಬಾಲ್‌ ತಂಡವು 0-2 ಗೋಲುಗಳ ಅಂತರದಿಂದ ಭಾರತ ಫುಟ್ಬಾಲ್‌ ತಂಡವನ್ನು ಪರಾಭವಗೊಳಿಸಿತು.

ಆದರೆ ಅಲ್ ರಿಯಾನ್‌ನ ಅಹ್ಮದ್ ಬಿನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಆಸೀಸ್‌ ತಂಡ ಗೆದ್ದು ಬೀಗಿತು.

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭಾರತ 50 ನಿಮಿಷ ಕಾಲ ಸಮಬಲ ಸಾಧಿಸಿತ್ತು. 2011ರ ಏಷ್ಯನ್ ಕಪ್ ಅಭಿಯಾನದಲ್ಲಿ ಇಂಥದ್ದೇ ಪಂದ್ಯದಲ್ಲಿ ಭಾರತ ಮಧ್ಯಂತರದ ವೇಳೆಗೇ 3 ಗೋಲುಗಳನ್ನು ಬಿಟ್ಟುಕೊಟ್ಟಿತ್ತು. 4 ಗೋಲುಗಳಿಂದ ಆಸ್ಟ್ರೇಲಿಯಾ ಜಯ ದಾಖಲಿಸಿತ್ತು.

ಮೊದಲ 45 ನಿಮಿಷಗಳಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡಿತು. ಭಾರತದ ರಕ್ಷಣಾ ಆಟಗಾರರ ವಿರುದ್ಧ ಆಸ್ಟ್ರೇಲಿಯಾ ಪಂದ್ಯವಿಡೀ ಪ್ರಾಬಲ್ಯ ಮೆರೆದರೂ, ಭಾರತೀಯ ಆಟಗಾರರು ಎರಡು ಗೋಲುಗಳನ್ನಷ್ಟೇ ಬಿಟ್ಟುಕೊಟ್ಟರು.

16ನೇ ನಿಮಿಷದಲ್ಲಿ ಭಾರತ ಗೋಲು ಗಳಿಸುವ ಅವಕಾಶ ಪಡೆಯಿತು. ಸುನೀಲ್ ಚೇಟ್ರಿ ಫ್ರೀ ಹೆಡ‌ರ್ ಅನ್ನು ಗುರಿಯತ್ತ ಹೊಡೆದರೂ, ಆಸೀಸ್ ಕೀಪರ್ ಮ್ಯಾಟ್ ರ್ಯಾನ್ ಇದನ್ನು ತಡೆಯುವಲ್ಲಿ ಯಶಸ್ವಿಯಾದರು. ಆದರೆ ದ್ವಿತೀಯಾರ್ಧದಲ್ಲಿ ಭಾರತ ತಂಡದ ನಾಯಕ ಗುರುಪ್ರೀತ್ ಸಿಂಗ್ ಸಂಧು ಮಾಡಿದ ತಪ್ಪು ಜಾಕ್ಸನ್ ಇರ್ವಿನ್ ಮೊದಲ ಗೋಲು ಹೊಡೆಯಲು ಅವಕಾಶ ಮಾಡಿಕೊಟ್ಟಿತು.

ಬಳಿಕ ಜೋರ್ಡನ್ ಬಾಸ್ 73ನೇ ನಿಮಿಷದಲ್ಲಿ ಎರಡನೇ ಗೋಲು ಬಾರಿಸಿ, ಪಂದ್ಯವನ್ನು ಗೆದ್ದರು.

andolanait

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

5 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

5 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

5 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

5 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

5 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

6 hours ago