ಕ್ರೀಡೆ

ಏಷ್ಯಾ ಕಪ್ ಫುಟ್ಬಾಲ್‌: ಭಾರತಕ್ಕೆ ಸೋಲುಣಿಸಿದ ಆಸ್ಟ್ರೇಲಿಯಾ

ಬೆಂಗಳೂರು: ಏಷ್ಯಾಕಪ್-2024ರ ಆರಂಭಿಕ ಪಂದ್ಯದಲ್ಲಿ ಆಸ್ಟ್ರೇಲಿಯಾ ಫುಟ್ಬಾಲ್‌ ತಂಡವು 0-2 ಗೋಲುಗಳ ಅಂತರದಿಂದ ಭಾರತ ಫುಟ್ಬಾಲ್‌ ತಂಡವನ್ನು ಪರಾಭವಗೊಳಿಸಿತು.

ಆದರೆ ಅಲ್ ರಿಯಾನ್‌ನ ಅಹ್ಮದ್ ಬಿನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಆಸೀಸ್‌ ತಂಡ ಗೆದ್ದು ಬೀಗಿತು.

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭಾರತ 50 ನಿಮಿಷ ಕಾಲ ಸಮಬಲ ಸಾಧಿಸಿತ್ತು. 2011ರ ಏಷ್ಯನ್ ಕಪ್ ಅಭಿಯಾನದಲ್ಲಿ ಇಂಥದ್ದೇ ಪಂದ್ಯದಲ್ಲಿ ಭಾರತ ಮಧ್ಯಂತರದ ವೇಳೆಗೇ 3 ಗೋಲುಗಳನ್ನು ಬಿಟ್ಟುಕೊಟ್ಟಿತ್ತು. 4 ಗೋಲುಗಳಿಂದ ಆಸ್ಟ್ರೇಲಿಯಾ ಜಯ ದಾಖಲಿಸಿತ್ತು.

ಮೊದಲ 45 ನಿಮಿಷಗಳಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡಿತು. ಭಾರತದ ರಕ್ಷಣಾ ಆಟಗಾರರ ವಿರುದ್ಧ ಆಸ್ಟ್ರೇಲಿಯಾ ಪಂದ್ಯವಿಡೀ ಪ್ರಾಬಲ್ಯ ಮೆರೆದರೂ, ಭಾರತೀಯ ಆಟಗಾರರು ಎರಡು ಗೋಲುಗಳನ್ನಷ್ಟೇ ಬಿಟ್ಟುಕೊಟ್ಟರು.

16ನೇ ನಿಮಿಷದಲ್ಲಿ ಭಾರತ ಗೋಲು ಗಳಿಸುವ ಅವಕಾಶ ಪಡೆಯಿತು. ಸುನೀಲ್ ಚೇಟ್ರಿ ಫ್ರೀ ಹೆಡ‌ರ್ ಅನ್ನು ಗುರಿಯತ್ತ ಹೊಡೆದರೂ, ಆಸೀಸ್ ಕೀಪರ್ ಮ್ಯಾಟ್ ರ್ಯಾನ್ ಇದನ್ನು ತಡೆಯುವಲ್ಲಿ ಯಶಸ್ವಿಯಾದರು. ಆದರೆ ದ್ವಿತೀಯಾರ್ಧದಲ್ಲಿ ಭಾರತ ತಂಡದ ನಾಯಕ ಗುರುಪ್ರೀತ್ ಸಿಂಗ್ ಸಂಧು ಮಾಡಿದ ತಪ್ಪು ಜಾಕ್ಸನ್ ಇರ್ವಿನ್ ಮೊದಲ ಗೋಲು ಹೊಡೆಯಲು ಅವಕಾಶ ಮಾಡಿಕೊಟ್ಟಿತು.

ಬಳಿಕ ಜೋರ್ಡನ್ ಬಾಸ್ 73ನೇ ನಿಮಿಷದಲ್ಲಿ ಎರಡನೇ ಗೋಲು ಬಾರಿಸಿ, ಪಂದ್ಯವನ್ನು ಗೆದ್ದರು.

andolanait

Recent Posts

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

8 mins ago

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

20 mins ago

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್‌ ಬಳಿ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 25 ಮಂದಿ ಸಜೀವ ದಹನ

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌…

21 mins ago

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

48 mins ago

ಓದುಗರ ಪತ್ರ:  ತಂಬಾಕು ಉತ್ಪನ್ನ  ಸೆಸ್: ಕಠಿಣ ಕ್ರಮ ಅಗತ್ಯ

ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…

52 mins ago

ಓದುಗರ ಪತ್ರ:  ಚಾ.ನಗರ-ಮೈಸೂರು ನಡುವೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸಿ

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…

1 hour ago