ಕ್ರೀಡೆ

ಏಷ್ಯಾ ಕಪ್ ಫುಟ್ಬಾಲ್‌: ಭಾರತಕ್ಕೆ ಸೋಲುಣಿಸಿದ ಆಸ್ಟ್ರೇಲಿಯಾ

ಬೆಂಗಳೂರು: ಏಷ್ಯಾಕಪ್-2024ರ ಆರಂಭಿಕ ಪಂದ್ಯದಲ್ಲಿ ಆಸ್ಟ್ರೇಲಿಯಾ ಫುಟ್ಬಾಲ್‌ ತಂಡವು 0-2 ಗೋಲುಗಳ ಅಂತರದಿಂದ ಭಾರತ ಫುಟ್ಬಾಲ್‌ ತಂಡವನ್ನು ಪರಾಭವಗೊಳಿಸಿತು.

ಆದರೆ ಅಲ್ ರಿಯಾನ್‌ನ ಅಹ್ಮದ್ ಬಿನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಆಸೀಸ್‌ ತಂಡ ಗೆದ್ದು ಬೀಗಿತು.

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭಾರತ 50 ನಿಮಿಷ ಕಾಲ ಸಮಬಲ ಸಾಧಿಸಿತ್ತು. 2011ರ ಏಷ್ಯನ್ ಕಪ್ ಅಭಿಯಾನದಲ್ಲಿ ಇಂಥದ್ದೇ ಪಂದ್ಯದಲ್ಲಿ ಭಾರತ ಮಧ್ಯಂತರದ ವೇಳೆಗೇ 3 ಗೋಲುಗಳನ್ನು ಬಿಟ್ಟುಕೊಟ್ಟಿತ್ತು. 4 ಗೋಲುಗಳಿಂದ ಆಸ್ಟ್ರೇಲಿಯಾ ಜಯ ದಾಖಲಿಸಿತ್ತು.

ಮೊದಲ 45 ನಿಮಿಷಗಳಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡಿತು. ಭಾರತದ ರಕ್ಷಣಾ ಆಟಗಾರರ ವಿರುದ್ಧ ಆಸ್ಟ್ರೇಲಿಯಾ ಪಂದ್ಯವಿಡೀ ಪ್ರಾಬಲ್ಯ ಮೆರೆದರೂ, ಭಾರತೀಯ ಆಟಗಾರರು ಎರಡು ಗೋಲುಗಳನ್ನಷ್ಟೇ ಬಿಟ್ಟುಕೊಟ್ಟರು.

16ನೇ ನಿಮಿಷದಲ್ಲಿ ಭಾರತ ಗೋಲು ಗಳಿಸುವ ಅವಕಾಶ ಪಡೆಯಿತು. ಸುನೀಲ್ ಚೇಟ್ರಿ ಫ್ರೀ ಹೆಡ‌ರ್ ಅನ್ನು ಗುರಿಯತ್ತ ಹೊಡೆದರೂ, ಆಸೀಸ್ ಕೀಪರ್ ಮ್ಯಾಟ್ ರ್ಯಾನ್ ಇದನ್ನು ತಡೆಯುವಲ್ಲಿ ಯಶಸ್ವಿಯಾದರು. ಆದರೆ ದ್ವಿತೀಯಾರ್ಧದಲ್ಲಿ ಭಾರತ ತಂಡದ ನಾಯಕ ಗುರುಪ್ರೀತ್ ಸಿಂಗ್ ಸಂಧು ಮಾಡಿದ ತಪ್ಪು ಜಾಕ್ಸನ್ ಇರ್ವಿನ್ ಮೊದಲ ಗೋಲು ಹೊಡೆಯಲು ಅವಕಾಶ ಮಾಡಿಕೊಟ್ಟಿತು.

ಬಳಿಕ ಜೋರ್ಡನ್ ಬಾಸ್ 73ನೇ ನಿಮಿಷದಲ್ಲಿ ಎರಡನೇ ಗೋಲು ಬಾರಿಸಿ, ಪಂದ್ಯವನ್ನು ಗೆದ್ದರು.

andolanait

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

2 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

7 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

7 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

7 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

7 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

8 hours ago