ಕ್ರೀಡೆ

ಏಷ್ಯಾ ಕಪ್ ಫುಟ್ಬಾಲ್‌: ಭಾರತಕ್ಕೆ ಸೋಲುಣಿಸಿದ ಆಸ್ಟ್ರೇಲಿಯಾ

ಬೆಂಗಳೂರು: ಏಷ್ಯಾಕಪ್-2024ರ ಆರಂಭಿಕ ಪಂದ್ಯದಲ್ಲಿ ಆಸ್ಟ್ರೇಲಿಯಾ ಫುಟ್ಬಾಲ್‌ ತಂಡವು 0-2 ಗೋಲುಗಳ ಅಂತರದಿಂದ ಭಾರತ ಫುಟ್ಬಾಲ್‌ ತಂಡವನ್ನು ಪರಾಭವಗೊಳಿಸಿತು.

ಆದರೆ ಅಲ್ ರಿಯಾನ್‌ನ ಅಹ್ಮದ್ ಬಿನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಆಸೀಸ್‌ ತಂಡ ಗೆದ್ದು ಬೀಗಿತು.

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭಾರತ 50 ನಿಮಿಷ ಕಾಲ ಸಮಬಲ ಸಾಧಿಸಿತ್ತು. 2011ರ ಏಷ್ಯನ್ ಕಪ್ ಅಭಿಯಾನದಲ್ಲಿ ಇಂಥದ್ದೇ ಪಂದ್ಯದಲ್ಲಿ ಭಾರತ ಮಧ್ಯಂತರದ ವೇಳೆಗೇ 3 ಗೋಲುಗಳನ್ನು ಬಿಟ್ಟುಕೊಟ್ಟಿತ್ತು. 4 ಗೋಲುಗಳಿಂದ ಆಸ್ಟ್ರೇಲಿಯಾ ಜಯ ದಾಖಲಿಸಿತ್ತು.

ಮೊದಲ 45 ನಿಮಿಷಗಳಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡಿತು. ಭಾರತದ ರಕ್ಷಣಾ ಆಟಗಾರರ ವಿರುದ್ಧ ಆಸ್ಟ್ರೇಲಿಯಾ ಪಂದ್ಯವಿಡೀ ಪ್ರಾಬಲ್ಯ ಮೆರೆದರೂ, ಭಾರತೀಯ ಆಟಗಾರರು ಎರಡು ಗೋಲುಗಳನ್ನಷ್ಟೇ ಬಿಟ್ಟುಕೊಟ್ಟರು.

16ನೇ ನಿಮಿಷದಲ್ಲಿ ಭಾರತ ಗೋಲು ಗಳಿಸುವ ಅವಕಾಶ ಪಡೆಯಿತು. ಸುನೀಲ್ ಚೇಟ್ರಿ ಫ್ರೀ ಹೆಡ‌ರ್ ಅನ್ನು ಗುರಿಯತ್ತ ಹೊಡೆದರೂ, ಆಸೀಸ್ ಕೀಪರ್ ಮ್ಯಾಟ್ ರ್ಯಾನ್ ಇದನ್ನು ತಡೆಯುವಲ್ಲಿ ಯಶಸ್ವಿಯಾದರು. ಆದರೆ ದ್ವಿತೀಯಾರ್ಧದಲ್ಲಿ ಭಾರತ ತಂಡದ ನಾಯಕ ಗುರುಪ್ರೀತ್ ಸಿಂಗ್ ಸಂಧು ಮಾಡಿದ ತಪ್ಪು ಜಾಕ್ಸನ್ ಇರ್ವಿನ್ ಮೊದಲ ಗೋಲು ಹೊಡೆಯಲು ಅವಕಾಶ ಮಾಡಿಕೊಟ್ಟಿತು.

ಬಳಿಕ ಜೋರ್ಡನ್ ಬಾಸ್ 73ನೇ ನಿಮಿಷದಲ್ಲಿ ಎರಡನೇ ಗೋಲು ಬಾರಿಸಿ, ಪಂದ್ಯವನ್ನು ಗೆದ್ದರು.

andolanait

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

2 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

3 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

4 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

6 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

6 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

7 hours ago