ಕ್ರೀಡೆ

ಏಷ್ಯಾ ಕಪ್ ಫುಟ್ಬಾಲ್‌: ಭಾರತಕ್ಕೆ ಸೋಲುಣಿಸಿದ ಆಸ್ಟ್ರೇಲಿಯಾ

ಬೆಂಗಳೂರು: ಏಷ್ಯಾಕಪ್-2024ರ ಆರಂಭಿಕ ಪಂದ್ಯದಲ್ಲಿ ಆಸ್ಟ್ರೇಲಿಯಾ ಫುಟ್ಬಾಲ್‌ ತಂಡವು 0-2 ಗೋಲುಗಳ ಅಂತರದಿಂದ ಭಾರತ ಫುಟ್ಬಾಲ್‌ ತಂಡವನ್ನು ಪರಾಭವಗೊಳಿಸಿತು.

ಆದರೆ ಅಲ್ ರಿಯಾನ್‌ನ ಅಹ್ಮದ್ ಬಿನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಆಸೀಸ್‌ ತಂಡ ಗೆದ್ದು ಬೀಗಿತು.

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭಾರತ 50 ನಿಮಿಷ ಕಾಲ ಸಮಬಲ ಸಾಧಿಸಿತ್ತು. 2011ರ ಏಷ್ಯನ್ ಕಪ್ ಅಭಿಯಾನದಲ್ಲಿ ಇಂಥದ್ದೇ ಪಂದ್ಯದಲ್ಲಿ ಭಾರತ ಮಧ್ಯಂತರದ ವೇಳೆಗೇ 3 ಗೋಲುಗಳನ್ನು ಬಿಟ್ಟುಕೊಟ್ಟಿತ್ತು. 4 ಗೋಲುಗಳಿಂದ ಆಸ್ಟ್ರೇಲಿಯಾ ಜಯ ದಾಖಲಿಸಿತ್ತು.

ಮೊದಲ 45 ನಿಮಿಷಗಳಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡಿತು. ಭಾರತದ ರಕ್ಷಣಾ ಆಟಗಾರರ ವಿರುದ್ಧ ಆಸ್ಟ್ರೇಲಿಯಾ ಪಂದ್ಯವಿಡೀ ಪ್ರಾಬಲ್ಯ ಮೆರೆದರೂ, ಭಾರತೀಯ ಆಟಗಾರರು ಎರಡು ಗೋಲುಗಳನ್ನಷ್ಟೇ ಬಿಟ್ಟುಕೊಟ್ಟರು.

16ನೇ ನಿಮಿಷದಲ್ಲಿ ಭಾರತ ಗೋಲು ಗಳಿಸುವ ಅವಕಾಶ ಪಡೆಯಿತು. ಸುನೀಲ್ ಚೇಟ್ರಿ ಫ್ರೀ ಹೆಡ‌ರ್ ಅನ್ನು ಗುರಿಯತ್ತ ಹೊಡೆದರೂ, ಆಸೀಸ್ ಕೀಪರ್ ಮ್ಯಾಟ್ ರ್ಯಾನ್ ಇದನ್ನು ತಡೆಯುವಲ್ಲಿ ಯಶಸ್ವಿಯಾದರು. ಆದರೆ ದ್ವಿತೀಯಾರ್ಧದಲ್ಲಿ ಭಾರತ ತಂಡದ ನಾಯಕ ಗುರುಪ್ರೀತ್ ಸಿಂಗ್ ಸಂಧು ಮಾಡಿದ ತಪ್ಪು ಜಾಕ್ಸನ್ ಇರ್ವಿನ್ ಮೊದಲ ಗೋಲು ಹೊಡೆಯಲು ಅವಕಾಶ ಮಾಡಿಕೊಟ್ಟಿತು.

ಬಳಿಕ ಜೋರ್ಡನ್ ಬಾಸ್ 73ನೇ ನಿಮಿಷದಲ್ಲಿ ಎರಡನೇ ಗೋಲು ಬಾರಿಸಿ, ಪಂದ್ಯವನ್ನು ಗೆದ್ದರು.

andolanait

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

6 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

6 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

6 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

7 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

19 hours ago