ಕ್ರೀಡೆ

Asia cup | ಭಾರತಕ್ಕೆ ಸುಲಭ ಜಯ : ಪಾಕಿಸ್ತಾನಕ್ಕೆ ಮುಖಭಂಗ

ದುಬೈ : ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ನೀರಸ ಪ್ರದರ್ಶನ ತೋರಿದ ಪಾಕಿಸ್ತಾನ ಭಾರತ ತಂಡದ ವಿರುದ್ಧ 7 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ.

ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2025ರ ಏಷ್ಯಾಕಪ್ ಪಂದ್ಯಾವಳಿಯ 6ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ಕಳಪೆ ಬ್ಯಾಟಿಂಗ್‌ನಿಂದಾಗಿ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಿ ಟೀಂ ಇಂಡಿಯಾಗೆ 128 ರನ್‌ಗಳ ಸಾಧಾರಣ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಭಾರತ 18 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 130 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಭಾರತ ಪರ ಅಭಿಶೇಷ್ ಶರ್ಮಾ ಮೊದಲ ಎಸೆತದಿಂದಲೇ ಸ್ಫೋಟಕ ಬ್ಯಾಟಿಂಗ್ ಆರಂಭಿಸಿದರು. ಪರಿಣಾಮ ಭಾರತ ಉತ್ತಮ ಓಪನಿಂಗ್ ಪಡೆಯಿತು. 13 ಎಸೆತಗಳಲ್ಲಿ 2 ಸಿಕ್ಸರ್ 4 ಬೌಂಡರಿ ಸೇರಿದಂತೆ 31 ರನ್ ಬಾರಿಸಿ ಸೈಮ್ ಆಯೂಬ್ ಬೌಲಿಂಗ್ ನಲ್ಲಿ ಔಟಾದರು. ಇನ್ನು ಶುಭ್ಮನ್ ಗಿಲ್ ಸಹ ಉತ್ತಮ ಬ್ಯಾಟಿಂಗ್ ಆರಂಭಿಸಿದರು. ಆದರೆ 10 ರನ್ ಗಳಿಸಿದ್ದಾಗ ಸೈಮ್ ಆಯೂಬ್ ಎಸೆತದಲ್ಲಿ ಸ್ಟಂಪ್ ಔಟ್ ಆದರು.

ನಂತರ ಜೊತೆಯಾದ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ತಂಡದ ರನ್ ಗತಿ ಹೆಚ್ಚಿಸಿದರು. ಆದರೆ 31 ರನ್ ಗಳಿಸಿದ್ದಾಗ ಸೈಮ್ ಆಯೂಬ್ ಎಸೆತದಲ್ಲಿ ಬೌಲ್ಡ್ ಆಗಿ ಪೆವಿಲಿಯನ್ ಗೆ ತೆರಳಿದರು. ನಂತರ ಸೂರ್ಯಕುಮಾರ್ ಹಾಗೂ ಶಿವಂ ದುಬೆ ಜೊತೆಯಾಗಿ ಭಾರತ ತಂಡವನ್ನು ಗೆಲುವಿನ ದಡ ಸೇರಿದರು.

ಅಂತಿಮವಾಗಿ ಭಾರತ 3 ವಿಕೆಟ್ ನಷ್ಟಕ್ಕೆಆರಂಭದಿಂದಲೂ ಪಾಕ್ ಬ್ಯಾಟ್ಸ್ ಮನ್ ಗಳನ್ನು ನಿಯಂತ್ರಿಸುವಲ್ಲಿ ಭಾರತೀಯ ಬೌಲರ್ ಗಳು ಯಶಸ್ವಿಯಾದರು. ಪಾಕ್ ಪರ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳ ವೈಫಲ್ಯದಿಂದಾಗಿ ತಂಡಕ್ಕೆ ಹೆಚ್ಚಿನ ರನ್ ಗಳಿಸಲು ಸಾಧ್ಯವಾಗಲಿಲ್ಲ. ಆರಂಭಿಕ ಆಟಗಾರ ಸಯೀಂ ಅಯೂಬ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ಮಧ್ಯಮ ಕ್ರಮಾಂಕದ ಬಹುತೇಕ ಬ್ಯಾಟ್ಸ್ ಮನ್ ಗಳು 2 ಅಂಕಿಯ ಸ್ಕೋರ್ ನ್ನೂ ದಾಟಲು ಸಾಧ್ಯವಾಗಲಿಲ್ಲ. ಸಾಹಿಬ್‌ಜಾದಾ ಫರ್ಹಾನ್ 44 ಎಸೆತಗಳಲ್ಲಿ 40 ರನ್ ಗಳಿಸಿದ್ದು ತಂಡದಲ್ಲಿ ಗರಿಷ್ಠ ಸ್ಕೋರ್ ಆಗಿದೆ.

ಭಾರತದ ಬೌಲಿಂಗ್ ವಿಭಾಗದಲ್ಲಿ ಕುಲ್ದೀಪ್ ಯಾದವ್ 18 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಜಸ್ಪ್ರೀತ್ ಬೂಮ್ರಾ, ಅಕ್ಸರ್ ಪಟೇಲ್ ತಲಾ 2 ವಿಕೆಟ್, ಹಾರ್ದಿಕ್ ಪಾಂಡ್ಯ 1 ವಿಕೆಟ್ ಗಳಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಬೀದಿನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…

8 mins ago

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

45 mins ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

1 hour ago

ಓದುಗರ ಪತ್ರ | ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ವೈಫೈ ಸೌಲಭ್ಯ ಕಲ್ಪಿಸಿ

ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…

2 hours ago

ಆಂದೋಲನ ವಿಶೇಷ ; ಸೋನಂ ವಾಂಗ್ಚುಕ್ ದಿಢೀರ್ ಬಿಡುಗಡೆ ‌

• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…

4 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಕಲ ಸಿದ್ಧತೆ

ಮಹಾದೇಶ್‌ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…

4 hours ago