ಕ್ರೀಡೆ

Asia cup | ಭಾರತಕ್ಕೆ ಸುಲಭ ಜಯ : ಪಾಕಿಸ್ತಾನಕ್ಕೆ ಮುಖಭಂಗ

ದುಬೈ : ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ನೀರಸ ಪ್ರದರ್ಶನ ತೋರಿದ ಪಾಕಿಸ್ತಾನ ಭಾರತ ತಂಡದ ವಿರುದ್ಧ 7 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ.

ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2025ರ ಏಷ್ಯಾಕಪ್ ಪಂದ್ಯಾವಳಿಯ 6ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ಕಳಪೆ ಬ್ಯಾಟಿಂಗ್‌ನಿಂದಾಗಿ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಿ ಟೀಂ ಇಂಡಿಯಾಗೆ 128 ರನ್‌ಗಳ ಸಾಧಾರಣ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಭಾರತ 18 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 130 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಭಾರತ ಪರ ಅಭಿಶೇಷ್ ಶರ್ಮಾ ಮೊದಲ ಎಸೆತದಿಂದಲೇ ಸ್ಫೋಟಕ ಬ್ಯಾಟಿಂಗ್ ಆರಂಭಿಸಿದರು. ಪರಿಣಾಮ ಭಾರತ ಉತ್ತಮ ಓಪನಿಂಗ್ ಪಡೆಯಿತು. 13 ಎಸೆತಗಳಲ್ಲಿ 2 ಸಿಕ್ಸರ್ 4 ಬೌಂಡರಿ ಸೇರಿದಂತೆ 31 ರನ್ ಬಾರಿಸಿ ಸೈಮ್ ಆಯೂಬ್ ಬೌಲಿಂಗ್ ನಲ್ಲಿ ಔಟಾದರು. ಇನ್ನು ಶುಭ್ಮನ್ ಗಿಲ್ ಸಹ ಉತ್ತಮ ಬ್ಯಾಟಿಂಗ್ ಆರಂಭಿಸಿದರು. ಆದರೆ 10 ರನ್ ಗಳಿಸಿದ್ದಾಗ ಸೈಮ್ ಆಯೂಬ್ ಎಸೆತದಲ್ಲಿ ಸ್ಟಂಪ್ ಔಟ್ ಆದರು.

ನಂತರ ಜೊತೆಯಾದ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ತಂಡದ ರನ್ ಗತಿ ಹೆಚ್ಚಿಸಿದರು. ಆದರೆ 31 ರನ್ ಗಳಿಸಿದ್ದಾಗ ಸೈಮ್ ಆಯೂಬ್ ಎಸೆತದಲ್ಲಿ ಬೌಲ್ಡ್ ಆಗಿ ಪೆವಿಲಿಯನ್ ಗೆ ತೆರಳಿದರು. ನಂತರ ಸೂರ್ಯಕುಮಾರ್ ಹಾಗೂ ಶಿವಂ ದುಬೆ ಜೊತೆಯಾಗಿ ಭಾರತ ತಂಡವನ್ನು ಗೆಲುವಿನ ದಡ ಸೇರಿದರು.

ಅಂತಿಮವಾಗಿ ಭಾರತ 3 ವಿಕೆಟ್ ನಷ್ಟಕ್ಕೆಆರಂಭದಿಂದಲೂ ಪಾಕ್ ಬ್ಯಾಟ್ಸ್ ಮನ್ ಗಳನ್ನು ನಿಯಂತ್ರಿಸುವಲ್ಲಿ ಭಾರತೀಯ ಬೌಲರ್ ಗಳು ಯಶಸ್ವಿಯಾದರು. ಪಾಕ್ ಪರ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳ ವೈಫಲ್ಯದಿಂದಾಗಿ ತಂಡಕ್ಕೆ ಹೆಚ್ಚಿನ ರನ್ ಗಳಿಸಲು ಸಾಧ್ಯವಾಗಲಿಲ್ಲ. ಆರಂಭಿಕ ಆಟಗಾರ ಸಯೀಂ ಅಯೂಬ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ಮಧ್ಯಮ ಕ್ರಮಾಂಕದ ಬಹುತೇಕ ಬ್ಯಾಟ್ಸ್ ಮನ್ ಗಳು 2 ಅಂಕಿಯ ಸ್ಕೋರ್ ನ್ನೂ ದಾಟಲು ಸಾಧ್ಯವಾಗಲಿಲ್ಲ. ಸಾಹಿಬ್‌ಜಾದಾ ಫರ್ಹಾನ್ 44 ಎಸೆತಗಳಲ್ಲಿ 40 ರನ್ ಗಳಿಸಿದ್ದು ತಂಡದಲ್ಲಿ ಗರಿಷ್ಠ ಸ್ಕೋರ್ ಆಗಿದೆ.

ಭಾರತದ ಬೌಲಿಂಗ್ ವಿಭಾಗದಲ್ಲಿ ಕುಲ್ದೀಪ್ ಯಾದವ್ 18 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಜಸ್ಪ್ರೀತ್ ಬೂಮ್ರಾ, ಅಕ್ಸರ್ ಪಟೇಲ್ ತಲಾ 2 ವಿಕೆಟ್, ಹಾರ್ದಿಕ್ ಪಾಂಡ್ಯ 1 ವಿಕೆಟ್ ಗಳಿಸಿದರು.

ಆಂದೋಲನ ಡೆಸ್ಕ್

Recent Posts

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

8 mins ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

33 mins ago

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…

41 mins ago

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

2 hours ago

ಮಹದೇಶ್ವರ ಬೆಟ್ಟ | ಪಾದಯಾತ್ರೆ, ದ್ವಿಚಕ್ರ ವಾಹನಕ್ಕೆ ತಾತ್ಕಾಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…

2 hours ago

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

2 hours ago