ಕ್ರೀಡೆ

Asia cup | ಭಾರತಕ್ಕೆ ಸುಲಭ ಜಯ : ಪಾಕಿಸ್ತಾನಕ್ಕೆ ಮುಖಭಂಗ

ದುಬೈ : ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ನೀರಸ ಪ್ರದರ್ಶನ ತೋರಿದ ಪಾಕಿಸ್ತಾನ ಭಾರತ ತಂಡದ ವಿರುದ್ಧ 7 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ.

ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2025ರ ಏಷ್ಯಾಕಪ್ ಪಂದ್ಯಾವಳಿಯ 6ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ಕಳಪೆ ಬ್ಯಾಟಿಂಗ್‌ನಿಂದಾಗಿ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಿ ಟೀಂ ಇಂಡಿಯಾಗೆ 128 ರನ್‌ಗಳ ಸಾಧಾರಣ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಭಾರತ 18 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 130 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಭಾರತ ಪರ ಅಭಿಶೇಷ್ ಶರ್ಮಾ ಮೊದಲ ಎಸೆತದಿಂದಲೇ ಸ್ಫೋಟಕ ಬ್ಯಾಟಿಂಗ್ ಆರಂಭಿಸಿದರು. ಪರಿಣಾಮ ಭಾರತ ಉತ್ತಮ ಓಪನಿಂಗ್ ಪಡೆಯಿತು. 13 ಎಸೆತಗಳಲ್ಲಿ 2 ಸಿಕ್ಸರ್ 4 ಬೌಂಡರಿ ಸೇರಿದಂತೆ 31 ರನ್ ಬಾರಿಸಿ ಸೈಮ್ ಆಯೂಬ್ ಬೌಲಿಂಗ್ ನಲ್ಲಿ ಔಟಾದರು. ಇನ್ನು ಶುಭ್ಮನ್ ಗಿಲ್ ಸಹ ಉತ್ತಮ ಬ್ಯಾಟಿಂಗ್ ಆರಂಭಿಸಿದರು. ಆದರೆ 10 ರನ್ ಗಳಿಸಿದ್ದಾಗ ಸೈಮ್ ಆಯೂಬ್ ಎಸೆತದಲ್ಲಿ ಸ್ಟಂಪ್ ಔಟ್ ಆದರು.

ನಂತರ ಜೊತೆಯಾದ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ತಂಡದ ರನ್ ಗತಿ ಹೆಚ್ಚಿಸಿದರು. ಆದರೆ 31 ರನ್ ಗಳಿಸಿದ್ದಾಗ ಸೈಮ್ ಆಯೂಬ್ ಎಸೆತದಲ್ಲಿ ಬೌಲ್ಡ್ ಆಗಿ ಪೆವಿಲಿಯನ್ ಗೆ ತೆರಳಿದರು. ನಂತರ ಸೂರ್ಯಕುಮಾರ್ ಹಾಗೂ ಶಿವಂ ದುಬೆ ಜೊತೆಯಾಗಿ ಭಾರತ ತಂಡವನ್ನು ಗೆಲುವಿನ ದಡ ಸೇರಿದರು.

ಅಂತಿಮವಾಗಿ ಭಾರತ 3 ವಿಕೆಟ್ ನಷ್ಟಕ್ಕೆಆರಂಭದಿಂದಲೂ ಪಾಕ್ ಬ್ಯಾಟ್ಸ್ ಮನ್ ಗಳನ್ನು ನಿಯಂತ್ರಿಸುವಲ್ಲಿ ಭಾರತೀಯ ಬೌಲರ್ ಗಳು ಯಶಸ್ವಿಯಾದರು. ಪಾಕ್ ಪರ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳ ವೈಫಲ್ಯದಿಂದಾಗಿ ತಂಡಕ್ಕೆ ಹೆಚ್ಚಿನ ರನ್ ಗಳಿಸಲು ಸಾಧ್ಯವಾಗಲಿಲ್ಲ. ಆರಂಭಿಕ ಆಟಗಾರ ಸಯೀಂ ಅಯೂಬ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ಮಧ್ಯಮ ಕ್ರಮಾಂಕದ ಬಹುತೇಕ ಬ್ಯಾಟ್ಸ್ ಮನ್ ಗಳು 2 ಅಂಕಿಯ ಸ್ಕೋರ್ ನ್ನೂ ದಾಟಲು ಸಾಧ್ಯವಾಗಲಿಲ್ಲ. ಸಾಹಿಬ್‌ಜಾದಾ ಫರ್ಹಾನ್ 44 ಎಸೆತಗಳಲ್ಲಿ 40 ರನ್ ಗಳಿಸಿದ್ದು ತಂಡದಲ್ಲಿ ಗರಿಷ್ಠ ಸ್ಕೋರ್ ಆಗಿದೆ.

ಭಾರತದ ಬೌಲಿಂಗ್ ವಿಭಾಗದಲ್ಲಿ ಕುಲ್ದೀಪ್ ಯಾದವ್ 18 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಜಸ್ಪ್ರೀತ್ ಬೂಮ್ರಾ, ಅಕ್ಸರ್ ಪಟೇಲ್ ತಲಾ 2 ವಿಕೆಟ್, ಹಾರ್ದಿಕ್ ಪಾಂಡ್ಯ 1 ವಿಕೆಟ್ ಗಳಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

34 mins ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

36 mins ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

39 mins ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

41 mins ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

46 mins ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

51 mins ago