ಕ್ರೀಡೆ

Asia cup | ನಾಳೆ ಭಾರತ-ಪಾಕ್‌ ಫೈನಲ್‌ : ಹೈವೋಲ್ಟೇಜ್‌ ಪಂದ್ಯಕ್ಕೆ ವೇದಿಕೆ ಸಿದ್ಧ

ದುಬೈ : ನಾಳೆ ಅಂದರೆ ಸೆ.28 ರಂದು ದುಬೈ ಇಂಟರ್‌ನ್ಯಾಶನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ 2025ರ ಆವೃತ್ತಿಯ ಏಶ್ಯಕಪ್ ಟಿ-20 ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಮುಖಾಮುಖಿಯಾಗಲಿವೆ. ಕ್ರಿಕೆಟಿನ ಹೈವೋಲ್ಟೇಜ್‌ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ.

41 ವರ್ಷಗಳ ಏಶ್ಯಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಸೆಣಸಾಡಲಿವೆ.

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡಗಳು ಪ್ರಸಕ್ತ ಟೂರ್ನಮೆಂಟ್‌ನಲ್ಲಿ ಮೂರನೇ ಬಾರಿ ಸೆಣಸಾಡುತ್ತಿವೆ. ಎರಡೂ ಬಾರಿಯೂ ಟೀಮ್ ಇಂಡಿಯಾವು ಪಾಕ್ ವಿರುದ್ಧ ಸುಲಭ ಜಯ ದಾಖಲಿಸಿ ಭರ್ಜರಿ ಫಾರ್ಮ್‌ನಲ್ಲಿದ್ದು, ಪಂದ್ಯಾವಳಿಯಲ್ಲಿ ಆಡಿರುವ ಎಲ್ಲ 6 ಪಂದ್ಯಗಳನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ :-ಚುನಾವಣೆ ರಾಜಕಾರಣದಿಂದ ಹಿಂದೆ ಸರಿದ ಗೀತಾ ಶಿವರಾಜ್‌ಕುಮಾರ್‌ ; ಕಾರಣವೇನು?

ಪ್ರಸಕ್ತ ಏಶ್ಯ ಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಲೀಗ್ ಹಂತ ಹಾಗೂ ಸೂಪರ್-4 ಹಂತದಲ್ಲಿ ಭಾರತ ತಂಡವು ಜಯಭೇರಿ ಬಾರಿಸಿದೆ. ಸೂರ್ಯಕುಮಾರ್ ನೇತೃತ್ವದಲ್ಲಿ ಭಾರತ ತಂಡವು ಭಾನುವಾರದ ಫೈನಲ್ ಪಂದ್ಯದಲ್ಲೂ ಪಾಕಿಸ್ತಾನ ತಂಡಕ್ಕೆ ಸೋಲುಣಿಸಿ 9ನೇ ಬಾರಿ ಏಶ್ಯ ಕಪ್ ಪ್ರಶಸ್ತಿ ಜಯಿಸಿ ದಾಖಲೆ ನಿರ್ಮಿಸಲು ಎದುರು ನೋಡುತ್ತಿದೆ.

ಮತ್ತೊಂದೆಡೆ ಪಾಕಿಸ್ತಾನ ತಂಡವು ಪಂದ್ಯಾವಳಿಯಲ್ಲಿ ಮಿಶ್ರ ಫಲಿತಾಂಶ ಪಡೆದಿದೆ. ಪಂದ್ಯಾವಳಿಯಲ್ಲಿ ಭಾರತದ ವಿರುದ್ಧ ಆಡಿರುವ ಎರಡೂ ಪಂದ್ಯಗಳನ್ನು ಸೋತಿದ್ದು, ಇನ್ನುಳಿದ ಕೆಲವು ಪಂದ್ಯಗಳಲ್ಲಿ ಪ್ರಯಾಣದ ಗೆಲುವು, ಇನ್ನೂ ಕೆಲವು ಪಂದ್ಯದಲ್ಲಿ ಸುಲಭ ಜಯ ದಾಖಲಿಸಿದೆ.

ಭಾರತ ತಂಡವು ಟೂರ್ನಿಯಲ್ಲಿ ತನ್ನ ಗೆಲುವಿನ ಓಟ ಮುಂದುವರಿಸುವತ್ತ ಚಿತ್ತ ಹರಿಸಿದರೆ, ಪಾಕಿಸ್ತಾನ ತಂಡ ‘ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ’ ಭಾರತಕ್ಕೆ ಸೋಲುಣಿಸಿ ಏಶ್ಯ ಕಪ್ ಟ್ರೋಫಿಯನ್ನು ಗೆಲ್ಲುವ ಗುರಿ ಇಟ್ಟುಕೊಂಡಿದೆ.

ಐದಕ್ಕಿಂತ ಹೆಚ್ಚು ತಂಡಗಳು ಭಾಗವಹಿಸಿರುವ ಐದು ಪಂದ್ಯಾವಳಿಗಳಲ್ಲಿ ಎರಡೂ ತಂಡಗಳು 5 ಬಾರಿ ಫೈನಲ್‌ನಲ್ಲಿ ಸೆಣಸಾಡಿವೆ. ಈ ಟೂರ್ನಿಗಳ ಹೆಡ್-ಟು-ಹೆಡ್ ದಾಖಲೆಯಲ್ಲಿ ಪಾಕಿಸ್ತಾನ ತಂಡವು 3-2 ಅಲ್ಪ ಮುನ್ನಡೆಯಲ್ಲಿದೆ.

ಪಾಕಿಸ್ತಾನ ತಂಡದ ಹಿರಿಯ ಬೌಲರ್ ಶಾಹೀನ್ ಅಫ್ರಿದಿ ಹಿಂದಿನ ಎರಡು ಪಂದ್ಯಗಳಲ್ಲಿ ತಲಾ 3 ವಿಕೆಟ್‌ಗಳನ್ನು ಪಡೆದಿದ್ದಾರೆ. ಟೂರ್ನಿಯಲ್ಲಿ ಒಟ್ಟು 9 ವಿಕೆಟ್‌ಗಳನ್ನು ಪಡೆದಿದ್ದರೂ ಭಾರತ ತಂಡದ ವಿರುದ್ಧ ಒಂದೂ ವಿಕೆಟ್ ಪಡೆಯಲು ಸಾಧ್ಯವಾಗಿಲ್ಲ. ಭಾರತ ವಿರುದ್ಧ ಆಡಿರುವ 2 ಪಂದ್ಯಗಳಲ್ಲಿ ತನ್ನ 5.5 ಓವರ್‌ಗಳಲ್ಲಿ 63 ರನ್ ನೀಡಿದ್ದಾರೆ.

ಒಟ್ಟಾರೆ, ಉಭಯ ತಂಡಗಳ ನಡುವೆ ನಡೆದ ಮಾತಿ ಚಕಮಕಿ ಹಾಗೂ ಮೈದಾನದಲ್ಲಿನ ಆಟಗಾರರ ಕೆಲವು ವರ್ತನೆಗಳು ಪೈನಲ್‌ ಪಂದ್ಯದ ರೋಚಕತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

6 mins ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

32 mins ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

53 mins ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

2 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಬೆಚ್ಚನೆಯ ಉಡುಪು ಒದಗಿಸಿ

ಪ್ರತಿದಿನ ಬೆಳಗಿನ ಜಾವ ದಿನ ದಿನಪತ್ರಿಕೆಗಳನ್ನು ಬಹುತೇಕ ಮಕ್ಕಳೇ ವಿತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ವಿಪರೀತ ಚಳಿ ಇರುವುದರಿಂದ ಆರೋಗ್ಯದ ಮೇಲೆ…

2 hours ago