ದುಬೈ : ನಾಳೆ ಅಂದರೆ ಸೆ.28 ರಂದು ದುಬೈ ಇಂಟರ್ನ್ಯಾಶನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ 2025ರ ಆವೃತ್ತಿಯ ಏಶ್ಯಕಪ್ ಟಿ-20 ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಮುಖಾಮುಖಿಯಾಗಲಿವೆ. ಕ್ರಿಕೆಟಿನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ.
41 ವರ್ಷಗಳ ಏಶ್ಯಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಸೆಣಸಾಡಲಿವೆ.
ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡಗಳು ಪ್ರಸಕ್ತ ಟೂರ್ನಮೆಂಟ್ನಲ್ಲಿ ಮೂರನೇ ಬಾರಿ ಸೆಣಸಾಡುತ್ತಿವೆ. ಎರಡೂ ಬಾರಿಯೂ ಟೀಮ್ ಇಂಡಿಯಾವು ಪಾಕ್ ವಿರುದ್ಧ ಸುಲಭ ಜಯ ದಾಖಲಿಸಿ ಭರ್ಜರಿ ಫಾರ್ಮ್ನಲ್ಲಿದ್ದು, ಪಂದ್ಯಾವಳಿಯಲ್ಲಿ ಆಡಿರುವ ಎಲ್ಲ 6 ಪಂದ್ಯಗಳನ್ನು ಗೆದ್ದುಕೊಂಡಿದೆ.
ಇದನ್ನೂ ಓದಿ :-ಚುನಾವಣೆ ರಾಜಕಾರಣದಿಂದ ಹಿಂದೆ ಸರಿದ ಗೀತಾ ಶಿವರಾಜ್ಕುಮಾರ್ ; ಕಾರಣವೇನು?
ಪ್ರಸಕ್ತ ಏಶ್ಯ ಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಲೀಗ್ ಹಂತ ಹಾಗೂ ಸೂಪರ್-4 ಹಂತದಲ್ಲಿ ಭಾರತ ತಂಡವು ಜಯಭೇರಿ ಬಾರಿಸಿದೆ. ಸೂರ್ಯಕುಮಾರ್ ನೇತೃತ್ವದಲ್ಲಿ ಭಾರತ ತಂಡವು ಭಾನುವಾರದ ಫೈನಲ್ ಪಂದ್ಯದಲ್ಲೂ ಪಾಕಿಸ್ತಾನ ತಂಡಕ್ಕೆ ಸೋಲುಣಿಸಿ 9ನೇ ಬಾರಿ ಏಶ್ಯ ಕಪ್ ಪ್ರಶಸ್ತಿ ಜಯಿಸಿ ದಾಖಲೆ ನಿರ್ಮಿಸಲು ಎದುರು ನೋಡುತ್ತಿದೆ.
ಮತ್ತೊಂದೆಡೆ ಪಾಕಿಸ್ತಾನ ತಂಡವು ಪಂದ್ಯಾವಳಿಯಲ್ಲಿ ಮಿಶ್ರ ಫಲಿತಾಂಶ ಪಡೆದಿದೆ. ಪಂದ್ಯಾವಳಿಯಲ್ಲಿ ಭಾರತದ ವಿರುದ್ಧ ಆಡಿರುವ ಎರಡೂ ಪಂದ್ಯಗಳನ್ನು ಸೋತಿದ್ದು, ಇನ್ನುಳಿದ ಕೆಲವು ಪಂದ್ಯಗಳಲ್ಲಿ ಪ್ರಯಾಣದ ಗೆಲುವು, ಇನ್ನೂ ಕೆಲವು ಪಂದ್ಯದಲ್ಲಿ ಸುಲಭ ಜಯ ದಾಖಲಿಸಿದೆ.
ಭಾರತ ತಂಡವು ಟೂರ್ನಿಯಲ್ಲಿ ತನ್ನ ಗೆಲುವಿನ ಓಟ ಮುಂದುವರಿಸುವತ್ತ ಚಿತ್ತ ಹರಿಸಿದರೆ, ಪಾಕಿಸ್ತಾನ ತಂಡ ‘ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ’ ಭಾರತಕ್ಕೆ ಸೋಲುಣಿಸಿ ಏಶ್ಯ ಕಪ್ ಟ್ರೋಫಿಯನ್ನು ಗೆಲ್ಲುವ ಗುರಿ ಇಟ್ಟುಕೊಂಡಿದೆ.
ಐದಕ್ಕಿಂತ ಹೆಚ್ಚು ತಂಡಗಳು ಭಾಗವಹಿಸಿರುವ ಐದು ಪಂದ್ಯಾವಳಿಗಳಲ್ಲಿ ಎರಡೂ ತಂಡಗಳು 5 ಬಾರಿ ಫೈನಲ್ನಲ್ಲಿ ಸೆಣಸಾಡಿವೆ. ಈ ಟೂರ್ನಿಗಳ ಹೆಡ್-ಟು-ಹೆಡ್ ದಾಖಲೆಯಲ್ಲಿ ಪಾಕಿಸ್ತಾನ ತಂಡವು 3-2 ಅಲ್ಪ ಮುನ್ನಡೆಯಲ್ಲಿದೆ.
ಪಾಕಿಸ್ತಾನ ತಂಡದ ಹಿರಿಯ ಬೌಲರ್ ಶಾಹೀನ್ ಅಫ್ರಿದಿ ಹಿಂದಿನ ಎರಡು ಪಂದ್ಯಗಳಲ್ಲಿ ತಲಾ 3 ವಿಕೆಟ್ಗಳನ್ನು ಪಡೆದಿದ್ದಾರೆ. ಟೂರ್ನಿಯಲ್ಲಿ ಒಟ್ಟು 9 ವಿಕೆಟ್ಗಳನ್ನು ಪಡೆದಿದ್ದರೂ ಭಾರತ ತಂಡದ ವಿರುದ್ಧ ಒಂದೂ ವಿಕೆಟ್ ಪಡೆಯಲು ಸಾಧ್ಯವಾಗಿಲ್ಲ. ಭಾರತ ವಿರುದ್ಧ ಆಡಿರುವ 2 ಪಂದ್ಯಗಳಲ್ಲಿ ತನ್ನ 5.5 ಓವರ್ಗಳಲ್ಲಿ 63 ರನ್ ನೀಡಿದ್ದಾರೆ.
ಒಟ್ಟಾರೆ, ಉಭಯ ತಂಡಗಳ ನಡುವೆ ನಡೆದ ಮಾತಿ ಚಕಮಕಿ ಹಾಗೂ ಮೈದಾನದಲ್ಲಿನ ಆಟಗಾರರ ಕೆಲವು ವರ್ತನೆಗಳು ಪೈನಲ್ ಪಂದ್ಯದ ರೋಚಕತೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…
ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…
ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…
ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…
ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…