ಕ್ರೀಡೆ

Asia cup | ನಾಳೆ ಭಾರತ-ಪಾಕ್‌ ಫೈನಲ್‌ : ಹೈವೋಲ್ಟೇಜ್‌ ಪಂದ್ಯಕ್ಕೆ ವೇದಿಕೆ ಸಿದ್ಧ

ದುಬೈ : ನಾಳೆ ಅಂದರೆ ಸೆ.28 ರಂದು ದುಬೈ ಇಂಟರ್‌ನ್ಯಾಶನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ 2025ರ ಆವೃತ್ತಿಯ ಏಶ್ಯಕಪ್ ಟಿ-20 ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಮುಖಾಮುಖಿಯಾಗಲಿವೆ. ಕ್ರಿಕೆಟಿನ ಹೈವೋಲ್ಟೇಜ್‌ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ.

41 ವರ್ಷಗಳ ಏಶ್ಯಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಸೆಣಸಾಡಲಿವೆ.

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡಗಳು ಪ್ರಸಕ್ತ ಟೂರ್ನಮೆಂಟ್‌ನಲ್ಲಿ ಮೂರನೇ ಬಾರಿ ಸೆಣಸಾಡುತ್ತಿವೆ. ಎರಡೂ ಬಾರಿಯೂ ಟೀಮ್ ಇಂಡಿಯಾವು ಪಾಕ್ ವಿರುದ್ಧ ಸುಲಭ ಜಯ ದಾಖಲಿಸಿ ಭರ್ಜರಿ ಫಾರ್ಮ್‌ನಲ್ಲಿದ್ದು, ಪಂದ್ಯಾವಳಿಯಲ್ಲಿ ಆಡಿರುವ ಎಲ್ಲ 6 ಪಂದ್ಯಗಳನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ :-ಚುನಾವಣೆ ರಾಜಕಾರಣದಿಂದ ಹಿಂದೆ ಸರಿದ ಗೀತಾ ಶಿವರಾಜ್‌ಕುಮಾರ್‌ ; ಕಾರಣವೇನು?

ಪ್ರಸಕ್ತ ಏಶ್ಯ ಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಲೀಗ್ ಹಂತ ಹಾಗೂ ಸೂಪರ್-4 ಹಂತದಲ್ಲಿ ಭಾರತ ತಂಡವು ಜಯಭೇರಿ ಬಾರಿಸಿದೆ. ಸೂರ್ಯಕುಮಾರ್ ನೇತೃತ್ವದಲ್ಲಿ ಭಾರತ ತಂಡವು ಭಾನುವಾರದ ಫೈನಲ್ ಪಂದ್ಯದಲ್ಲೂ ಪಾಕಿಸ್ತಾನ ತಂಡಕ್ಕೆ ಸೋಲುಣಿಸಿ 9ನೇ ಬಾರಿ ಏಶ್ಯ ಕಪ್ ಪ್ರಶಸ್ತಿ ಜಯಿಸಿ ದಾಖಲೆ ನಿರ್ಮಿಸಲು ಎದುರು ನೋಡುತ್ತಿದೆ.

ಮತ್ತೊಂದೆಡೆ ಪಾಕಿಸ್ತಾನ ತಂಡವು ಪಂದ್ಯಾವಳಿಯಲ್ಲಿ ಮಿಶ್ರ ಫಲಿತಾಂಶ ಪಡೆದಿದೆ. ಪಂದ್ಯಾವಳಿಯಲ್ಲಿ ಭಾರತದ ವಿರುದ್ಧ ಆಡಿರುವ ಎರಡೂ ಪಂದ್ಯಗಳನ್ನು ಸೋತಿದ್ದು, ಇನ್ನುಳಿದ ಕೆಲವು ಪಂದ್ಯಗಳಲ್ಲಿ ಪ್ರಯಾಣದ ಗೆಲುವು, ಇನ್ನೂ ಕೆಲವು ಪಂದ್ಯದಲ್ಲಿ ಸುಲಭ ಜಯ ದಾಖಲಿಸಿದೆ.

ಭಾರತ ತಂಡವು ಟೂರ್ನಿಯಲ್ಲಿ ತನ್ನ ಗೆಲುವಿನ ಓಟ ಮುಂದುವರಿಸುವತ್ತ ಚಿತ್ತ ಹರಿಸಿದರೆ, ಪಾಕಿಸ್ತಾನ ತಂಡ ‘ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ’ ಭಾರತಕ್ಕೆ ಸೋಲುಣಿಸಿ ಏಶ್ಯ ಕಪ್ ಟ್ರೋಫಿಯನ್ನು ಗೆಲ್ಲುವ ಗುರಿ ಇಟ್ಟುಕೊಂಡಿದೆ.

ಐದಕ್ಕಿಂತ ಹೆಚ್ಚು ತಂಡಗಳು ಭಾಗವಹಿಸಿರುವ ಐದು ಪಂದ್ಯಾವಳಿಗಳಲ್ಲಿ ಎರಡೂ ತಂಡಗಳು 5 ಬಾರಿ ಫೈನಲ್‌ನಲ್ಲಿ ಸೆಣಸಾಡಿವೆ. ಈ ಟೂರ್ನಿಗಳ ಹೆಡ್-ಟು-ಹೆಡ್ ದಾಖಲೆಯಲ್ಲಿ ಪಾಕಿಸ್ತಾನ ತಂಡವು 3-2 ಅಲ್ಪ ಮುನ್ನಡೆಯಲ್ಲಿದೆ.

ಪಾಕಿಸ್ತಾನ ತಂಡದ ಹಿರಿಯ ಬೌಲರ್ ಶಾಹೀನ್ ಅಫ್ರಿದಿ ಹಿಂದಿನ ಎರಡು ಪಂದ್ಯಗಳಲ್ಲಿ ತಲಾ 3 ವಿಕೆಟ್‌ಗಳನ್ನು ಪಡೆದಿದ್ದಾರೆ. ಟೂರ್ನಿಯಲ್ಲಿ ಒಟ್ಟು 9 ವಿಕೆಟ್‌ಗಳನ್ನು ಪಡೆದಿದ್ದರೂ ಭಾರತ ತಂಡದ ವಿರುದ್ಧ ಒಂದೂ ವಿಕೆಟ್ ಪಡೆಯಲು ಸಾಧ್ಯವಾಗಿಲ್ಲ. ಭಾರತ ವಿರುದ್ಧ ಆಡಿರುವ 2 ಪಂದ್ಯಗಳಲ್ಲಿ ತನ್ನ 5.5 ಓವರ್‌ಗಳಲ್ಲಿ 63 ರನ್ ನೀಡಿದ್ದಾರೆ.

ಒಟ್ಟಾರೆ, ಉಭಯ ತಂಡಗಳ ನಡುವೆ ನಡೆದ ಮಾತಿ ಚಕಮಕಿ ಹಾಗೂ ಮೈದಾನದಲ್ಲಿನ ಆಟಗಾರರ ಕೆಲವು ವರ್ತನೆಗಳು ಪೈನಲ್‌ ಪಂದ್ಯದ ರೋಚಕತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

7 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

8 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

9 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

10 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

15 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

17 hours ago