ಕ್ರೀಡೆ

Asia cup | ನಾಳೆ ಭಾರತ-ಪಾಕ್‌ ಫೈನಲ್‌ : ಹೈವೋಲ್ಟೇಜ್‌ ಪಂದ್ಯಕ್ಕೆ ವೇದಿಕೆ ಸಿದ್ಧ

ದುಬೈ : ನಾಳೆ ಅಂದರೆ ಸೆ.28 ರಂದು ದುಬೈ ಇಂಟರ್‌ನ್ಯಾಶನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ 2025ರ ಆವೃತ್ತಿಯ ಏಶ್ಯಕಪ್ ಟಿ-20 ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಮುಖಾಮುಖಿಯಾಗಲಿವೆ. ಕ್ರಿಕೆಟಿನ ಹೈವೋಲ್ಟೇಜ್‌ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ.

41 ವರ್ಷಗಳ ಏಶ್ಯಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಸೆಣಸಾಡಲಿವೆ.

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡಗಳು ಪ್ರಸಕ್ತ ಟೂರ್ನಮೆಂಟ್‌ನಲ್ಲಿ ಮೂರನೇ ಬಾರಿ ಸೆಣಸಾಡುತ್ತಿವೆ. ಎರಡೂ ಬಾರಿಯೂ ಟೀಮ್ ಇಂಡಿಯಾವು ಪಾಕ್ ವಿರುದ್ಧ ಸುಲಭ ಜಯ ದಾಖಲಿಸಿ ಭರ್ಜರಿ ಫಾರ್ಮ್‌ನಲ್ಲಿದ್ದು, ಪಂದ್ಯಾವಳಿಯಲ್ಲಿ ಆಡಿರುವ ಎಲ್ಲ 6 ಪಂದ್ಯಗಳನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ :-ಚುನಾವಣೆ ರಾಜಕಾರಣದಿಂದ ಹಿಂದೆ ಸರಿದ ಗೀತಾ ಶಿವರಾಜ್‌ಕುಮಾರ್‌ ; ಕಾರಣವೇನು?

ಪ್ರಸಕ್ತ ಏಶ್ಯ ಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಲೀಗ್ ಹಂತ ಹಾಗೂ ಸೂಪರ್-4 ಹಂತದಲ್ಲಿ ಭಾರತ ತಂಡವು ಜಯಭೇರಿ ಬಾರಿಸಿದೆ. ಸೂರ್ಯಕುಮಾರ್ ನೇತೃತ್ವದಲ್ಲಿ ಭಾರತ ತಂಡವು ಭಾನುವಾರದ ಫೈನಲ್ ಪಂದ್ಯದಲ್ಲೂ ಪಾಕಿಸ್ತಾನ ತಂಡಕ್ಕೆ ಸೋಲುಣಿಸಿ 9ನೇ ಬಾರಿ ಏಶ್ಯ ಕಪ್ ಪ್ರಶಸ್ತಿ ಜಯಿಸಿ ದಾಖಲೆ ನಿರ್ಮಿಸಲು ಎದುರು ನೋಡುತ್ತಿದೆ.

ಮತ್ತೊಂದೆಡೆ ಪಾಕಿಸ್ತಾನ ತಂಡವು ಪಂದ್ಯಾವಳಿಯಲ್ಲಿ ಮಿಶ್ರ ಫಲಿತಾಂಶ ಪಡೆದಿದೆ. ಪಂದ್ಯಾವಳಿಯಲ್ಲಿ ಭಾರತದ ವಿರುದ್ಧ ಆಡಿರುವ ಎರಡೂ ಪಂದ್ಯಗಳನ್ನು ಸೋತಿದ್ದು, ಇನ್ನುಳಿದ ಕೆಲವು ಪಂದ್ಯಗಳಲ್ಲಿ ಪ್ರಯಾಣದ ಗೆಲುವು, ಇನ್ನೂ ಕೆಲವು ಪಂದ್ಯದಲ್ಲಿ ಸುಲಭ ಜಯ ದಾಖಲಿಸಿದೆ.

ಭಾರತ ತಂಡವು ಟೂರ್ನಿಯಲ್ಲಿ ತನ್ನ ಗೆಲುವಿನ ಓಟ ಮುಂದುವರಿಸುವತ್ತ ಚಿತ್ತ ಹರಿಸಿದರೆ, ಪಾಕಿಸ್ತಾನ ತಂಡ ‘ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ’ ಭಾರತಕ್ಕೆ ಸೋಲುಣಿಸಿ ಏಶ್ಯ ಕಪ್ ಟ್ರೋಫಿಯನ್ನು ಗೆಲ್ಲುವ ಗುರಿ ಇಟ್ಟುಕೊಂಡಿದೆ.

ಐದಕ್ಕಿಂತ ಹೆಚ್ಚು ತಂಡಗಳು ಭಾಗವಹಿಸಿರುವ ಐದು ಪಂದ್ಯಾವಳಿಗಳಲ್ಲಿ ಎರಡೂ ತಂಡಗಳು 5 ಬಾರಿ ಫೈನಲ್‌ನಲ್ಲಿ ಸೆಣಸಾಡಿವೆ. ಈ ಟೂರ್ನಿಗಳ ಹೆಡ್-ಟು-ಹೆಡ್ ದಾಖಲೆಯಲ್ಲಿ ಪಾಕಿಸ್ತಾನ ತಂಡವು 3-2 ಅಲ್ಪ ಮುನ್ನಡೆಯಲ್ಲಿದೆ.

ಪಾಕಿಸ್ತಾನ ತಂಡದ ಹಿರಿಯ ಬೌಲರ್ ಶಾಹೀನ್ ಅಫ್ರಿದಿ ಹಿಂದಿನ ಎರಡು ಪಂದ್ಯಗಳಲ್ಲಿ ತಲಾ 3 ವಿಕೆಟ್‌ಗಳನ್ನು ಪಡೆದಿದ್ದಾರೆ. ಟೂರ್ನಿಯಲ್ಲಿ ಒಟ್ಟು 9 ವಿಕೆಟ್‌ಗಳನ್ನು ಪಡೆದಿದ್ದರೂ ಭಾರತ ತಂಡದ ವಿರುದ್ಧ ಒಂದೂ ವಿಕೆಟ್ ಪಡೆಯಲು ಸಾಧ್ಯವಾಗಿಲ್ಲ. ಭಾರತ ವಿರುದ್ಧ ಆಡಿರುವ 2 ಪಂದ್ಯಗಳಲ್ಲಿ ತನ್ನ 5.5 ಓವರ್‌ಗಳಲ್ಲಿ 63 ರನ್ ನೀಡಿದ್ದಾರೆ.

ಒಟ್ಟಾರೆ, ಉಭಯ ತಂಡಗಳ ನಡುವೆ ನಡೆದ ಮಾತಿ ಚಕಮಕಿ ಹಾಗೂ ಮೈದಾನದಲ್ಲಿನ ಆಟಗಾರರ ಕೆಲವು ವರ್ತನೆಗಳು ಪೈನಲ್‌ ಪಂದ್ಯದ ರೋಚಕತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

7 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

7 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

7 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

7 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

7 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago