ದುಬೈ : ನಾಳೆ ಅಂದರೆ ಸೆ.28 ರಂದು ದುಬೈ ಇಂಟರ್ನ್ಯಾಶನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ 2025ರ ಆವೃತ್ತಿಯ ಏಶ್ಯಕಪ್ ಟಿ-20 ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಮುಖಾಮುಖಿಯಾಗಲಿವೆ. ಕ್ರಿಕೆಟಿನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ.
41 ವರ್ಷಗಳ ಏಶ್ಯಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಸೆಣಸಾಡಲಿವೆ.
ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡಗಳು ಪ್ರಸಕ್ತ ಟೂರ್ನಮೆಂಟ್ನಲ್ಲಿ ಮೂರನೇ ಬಾರಿ ಸೆಣಸಾಡುತ್ತಿವೆ. ಎರಡೂ ಬಾರಿಯೂ ಟೀಮ್ ಇಂಡಿಯಾವು ಪಾಕ್ ವಿರುದ್ಧ ಸುಲಭ ಜಯ ದಾಖಲಿಸಿ ಭರ್ಜರಿ ಫಾರ್ಮ್ನಲ್ಲಿದ್ದು, ಪಂದ್ಯಾವಳಿಯಲ್ಲಿ ಆಡಿರುವ ಎಲ್ಲ 6 ಪಂದ್ಯಗಳನ್ನು ಗೆದ್ದುಕೊಂಡಿದೆ.
ಇದನ್ನೂ ಓದಿ :-ಚುನಾವಣೆ ರಾಜಕಾರಣದಿಂದ ಹಿಂದೆ ಸರಿದ ಗೀತಾ ಶಿವರಾಜ್ಕುಮಾರ್ ; ಕಾರಣವೇನು?
ಪ್ರಸಕ್ತ ಏಶ್ಯ ಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಲೀಗ್ ಹಂತ ಹಾಗೂ ಸೂಪರ್-4 ಹಂತದಲ್ಲಿ ಭಾರತ ತಂಡವು ಜಯಭೇರಿ ಬಾರಿಸಿದೆ. ಸೂರ್ಯಕುಮಾರ್ ನೇತೃತ್ವದಲ್ಲಿ ಭಾರತ ತಂಡವು ಭಾನುವಾರದ ಫೈನಲ್ ಪಂದ್ಯದಲ್ಲೂ ಪಾಕಿಸ್ತಾನ ತಂಡಕ್ಕೆ ಸೋಲುಣಿಸಿ 9ನೇ ಬಾರಿ ಏಶ್ಯ ಕಪ್ ಪ್ರಶಸ್ತಿ ಜಯಿಸಿ ದಾಖಲೆ ನಿರ್ಮಿಸಲು ಎದುರು ನೋಡುತ್ತಿದೆ.
ಮತ್ತೊಂದೆಡೆ ಪಾಕಿಸ್ತಾನ ತಂಡವು ಪಂದ್ಯಾವಳಿಯಲ್ಲಿ ಮಿಶ್ರ ಫಲಿತಾಂಶ ಪಡೆದಿದೆ. ಪಂದ್ಯಾವಳಿಯಲ್ಲಿ ಭಾರತದ ವಿರುದ್ಧ ಆಡಿರುವ ಎರಡೂ ಪಂದ್ಯಗಳನ್ನು ಸೋತಿದ್ದು, ಇನ್ನುಳಿದ ಕೆಲವು ಪಂದ್ಯಗಳಲ್ಲಿ ಪ್ರಯಾಣದ ಗೆಲುವು, ಇನ್ನೂ ಕೆಲವು ಪಂದ್ಯದಲ್ಲಿ ಸುಲಭ ಜಯ ದಾಖಲಿಸಿದೆ.
ಭಾರತ ತಂಡವು ಟೂರ್ನಿಯಲ್ಲಿ ತನ್ನ ಗೆಲುವಿನ ಓಟ ಮುಂದುವರಿಸುವತ್ತ ಚಿತ್ತ ಹರಿಸಿದರೆ, ಪಾಕಿಸ್ತಾನ ತಂಡ ‘ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ’ ಭಾರತಕ್ಕೆ ಸೋಲುಣಿಸಿ ಏಶ್ಯ ಕಪ್ ಟ್ರೋಫಿಯನ್ನು ಗೆಲ್ಲುವ ಗುರಿ ಇಟ್ಟುಕೊಂಡಿದೆ.
ಐದಕ್ಕಿಂತ ಹೆಚ್ಚು ತಂಡಗಳು ಭಾಗವಹಿಸಿರುವ ಐದು ಪಂದ್ಯಾವಳಿಗಳಲ್ಲಿ ಎರಡೂ ತಂಡಗಳು 5 ಬಾರಿ ಫೈನಲ್ನಲ್ಲಿ ಸೆಣಸಾಡಿವೆ. ಈ ಟೂರ್ನಿಗಳ ಹೆಡ್-ಟು-ಹೆಡ್ ದಾಖಲೆಯಲ್ಲಿ ಪಾಕಿಸ್ತಾನ ತಂಡವು 3-2 ಅಲ್ಪ ಮುನ್ನಡೆಯಲ್ಲಿದೆ.
ಪಾಕಿಸ್ತಾನ ತಂಡದ ಹಿರಿಯ ಬೌಲರ್ ಶಾಹೀನ್ ಅಫ್ರಿದಿ ಹಿಂದಿನ ಎರಡು ಪಂದ್ಯಗಳಲ್ಲಿ ತಲಾ 3 ವಿಕೆಟ್ಗಳನ್ನು ಪಡೆದಿದ್ದಾರೆ. ಟೂರ್ನಿಯಲ್ಲಿ ಒಟ್ಟು 9 ವಿಕೆಟ್ಗಳನ್ನು ಪಡೆದಿದ್ದರೂ ಭಾರತ ತಂಡದ ವಿರುದ್ಧ ಒಂದೂ ವಿಕೆಟ್ ಪಡೆಯಲು ಸಾಧ್ಯವಾಗಿಲ್ಲ. ಭಾರತ ವಿರುದ್ಧ ಆಡಿರುವ 2 ಪಂದ್ಯಗಳಲ್ಲಿ ತನ್ನ 5.5 ಓವರ್ಗಳಲ್ಲಿ 63 ರನ್ ನೀಡಿದ್ದಾರೆ.
ಒಟ್ಟಾರೆ, ಉಭಯ ತಂಡಗಳ ನಡುವೆ ನಡೆದ ಮಾತಿ ಚಕಮಕಿ ಹಾಗೂ ಮೈದಾನದಲ್ಲಿನ ಆಟಗಾರರ ಕೆಲವು ವರ್ತನೆಗಳು ಪೈನಲ್ ಪಂದ್ಯದ ರೋಚಕತೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…