ಕ್ರೀಡೆ

Asia cup | ನಾಳೆ ಭಾರತ-ಪಾಕ್‌ ಫೈನಲ್‌ : ಹೈವೋಲ್ಟೇಜ್‌ ಪಂದ್ಯಕ್ಕೆ ವೇದಿಕೆ ಸಿದ್ಧ

ದುಬೈ : ನಾಳೆ ಅಂದರೆ ಸೆ.28 ರಂದು ದುಬೈ ಇಂಟರ್‌ನ್ಯಾಶನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ 2025ರ ಆವೃತ್ತಿಯ ಏಶ್ಯಕಪ್ ಟಿ-20 ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಮುಖಾಮುಖಿಯಾಗಲಿವೆ. ಕ್ರಿಕೆಟಿನ ಹೈವೋಲ್ಟೇಜ್‌ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ.

41 ವರ್ಷಗಳ ಏಶ್ಯಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಸೆಣಸಾಡಲಿವೆ.

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡಗಳು ಪ್ರಸಕ್ತ ಟೂರ್ನಮೆಂಟ್‌ನಲ್ಲಿ ಮೂರನೇ ಬಾರಿ ಸೆಣಸಾಡುತ್ತಿವೆ. ಎರಡೂ ಬಾರಿಯೂ ಟೀಮ್ ಇಂಡಿಯಾವು ಪಾಕ್ ವಿರುದ್ಧ ಸುಲಭ ಜಯ ದಾಖಲಿಸಿ ಭರ್ಜರಿ ಫಾರ್ಮ್‌ನಲ್ಲಿದ್ದು, ಪಂದ್ಯಾವಳಿಯಲ್ಲಿ ಆಡಿರುವ ಎಲ್ಲ 6 ಪಂದ್ಯಗಳನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ :-ಚುನಾವಣೆ ರಾಜಕಾರಣದಿಂದ ಹಿಂದೆ ಸರಿದ ಗೀತಾ ಶಿವರಾಜ್‌ಕುಮಾರ್‌ ; ಕಾರಣವೇನು?

ಪ್ರಸಕ್ತ ಏಶ್ಯ ಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಲೀಗ್ ಹಂತ ಹಾಗೂ ಸೂಪರ್-4 ಹಂತದಲ್ಲಿ ಭಾರತ ತಂಡವು ಜಯಭೇರಿ ಬಾರಿಸಿದೆ. ಸೂರ್ಯಕುಮಾರ್ ನೇತೃತ್ವದಲ್ಲಿ ಭಾರತ ತಂಡವು ಭಾನುವಾರದ ಫೈನಲ್ ಪಂದ್ಯದಲ್ಲೂ ಪಾಕಿಸ್ತಾನ ತಂಡಕ್ಕೆ ಸೋಲುಣಿಸಿ 9ನೇ ಬಾರಿ ಏಶ್ಯ ಕಪ್ ಪ್ರಶಸ್ತಿ ಜಯಿಸಿ ದಾಖಲೆ ನಿರ್ಮಿಸಲು ಎದುರು ನೋಡುತ್ತಿದೆ.

ಮತ್ತೊಂದೆಡೆ ಪಾಕಿಸ್ತಾನ ತಂಡವು ಪಂದ್ಯಾವಳಿಯಲ್ಲಿ ಮಿಶ್ರ ಫಲಿತಾಂಶ ಪಡೆದಿದೆ. ಪಂದ್ಯಾವಳಿಯಲ್ಲಿ ಭಾರತದ ವಿರುದ್ಧ ಆಡಿರುವ ಎರಡೂ ಪಂದ್ಯಗಳನ್ನು ಸೋತಿದ್ದು, ಇನ್ನುಳಿದ ಕೆಲವು ಪಂದ್ಯಗಳಲ್ಲಿ ಪ್ರಯಾಣದ ಗೆಲುವು, ಇನ್ನೂ ಕೆಲವು ಪಂದ್ಯದಲ್ಲಿ ಸುಲಭ ಜಯ ದಾಖಲಿಸಿದೆ.

ಭಾರತ ತಂಡವು ಟೂರ್ನಿಯಲ್ಲಿ ತನ್ನ ಗೆಲುವಿನ ಓಟ ಮುಂದುವರಿಸುವತ್ತ ಚಿತ್ತ ಹರಿಸಿದರೆ, ಪಾಕಿಸ್ತಾನ ತಂಡ ‘ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ’ ಭಾರತಕ್ಕೆ ಸೋಲುಣಿಸಿ ಏಶ್ಯ ಕಪ್ ಟ್ರೋಫಿಯನ್ನು ಗೆಲ್ಲುವ ಗುರಿ ಇಟ್ಟುಕೊಂಡಿದೆ.

ಐದಕ್ಕಿಂತ ಹೆಚ್ಚು ತಂಡಗಳು ಭಾಗವಹಿಸಿರುವ ಐದು ಪಂದ್ಯಾವಳಿಗಳಲ್ಲಿ ಎರಡೂ ತಂಡಗಳು 5 ಬಾರಿ ಫೈನಲ್‌ನಲ್ಲಿ ಸೆಣಸಾಡಿವೆ. ಈ ಟೂರ್ನಿಗಳ ಹೆಡ್-ಟು-ಹೆಡ್ ದಾಖಲೆಯಲ್ಲಿ ಪಾಕಿಸ್ತಾನ ತಂಡವು 3-2 ಅಲ್ಪ ಮುನ್ನಡೆಯಲ್ಲಿದೆ.

ಪಾಕಿಸ್ತಾನ ತಂಡದ ಹಿರಿಯ ಬೌಲರ್ ಶಾಹೀನ್ ಅಫ್ರಿದಿ ಹಿಂದಿನ ಎರಡು ಪಂದ್ಯಗಳಲ್ಲಿ ತಲಾ 3 ವಿಕೆಟ್‌ಗಳನ್ನು ಪಡೆದಿದ್ದಾರೆ. ಟೂರ್ನಿಯಲ್ಲಿ ಒಟ್ಟು 9 ವಿಕೆಟ್‌ಗಳನ್ನು ಪಡೆದಿದ್ದರೂ ಭಾರತ ತಂಡದ ವಿರುದ್ಧ ಒಂದೂ ವಿಕೆಟ್ ಪಡೆಯಲು ಸಾಧ್ಯವಾಗಿಲ್ಲ. ಭಾರತ ವಿರುದ್ಧ ಆಡಿರುವ 2 ಪಂದ್ಯಗಳಲ್ಲಿ ತನ್ನ 5.5 ಓವರ್‌ಗಳಲ್ಲಿ 63 ರನ್ ನೀಡಿದ್ದಾರೆ.

ಒಟ್ಟಾರೆ, ಉಭಯ ತಂಡಗಳ ನಡುವೆ ನಡೆದ ಮಾತಿ ಚಕಮಕಿ ಹಾಗೂ ಮೈದಾನದಲ್ಲಿನ ಆಟಗಾರರ ಕೆಲವು ವರ್ತನೆಗಳು ಪೈನಲ್‌ ಪಂದ್ಯದ ರೋಚಕತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಆಂದೋಲನ ಡೆಸ್ಕ್

Recent Posts

ಕೆ.ಆರ್‌.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕೆ.ಆರ್.‌ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…

24 mins ago

ಓದುಗರ ಪತ್ರ: ಚುನಾವಣೋತ್ತರ.. !

ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…

40 mins ago

ಓದುಗರ ಪತ್ರ: ಬೇಸಿಗೆಯಲ್ಲಿ ನೀರನ್ನು ಮಿತವಾಗಿ ಬಳಸಿ

ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…

41 mins ago

ಓದುಗರ ಪತ್ರ: ರಸ್ತೆ ಬದಿಯಲ್ಲಿರುವ ಗಿಡ ಮರಗಳಿಗೆ ನೀರುಣಿಸಿ

ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ…

41 mins ago

ಓದುಗರ ಪತ್ರ: ವಾಣಿಜ್ಯ ಸಿಲಿಂಡರ್ ದರ ಏರಿಕೆ ಬರೆ

ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್‌ಗಳ ದರವನ್ನು ಮೇ ೧ರಿಂದ ಒಂದೇ ಬಾರಿಗೆ ೯೯೧ರೂ.ಗಳಿಗೆ ಏರಿಕೆ ಮಾಡಿದ್ದು, ಇದರಿಂದಾಗಿ ಹೋಟೆಲ್‌ಗಳಲ್ಲಿ…

43 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಂಗಾಳ-ಕೇರಳದಲ್ಲಿ ಬದಲಾವಣೆಯ ಸುಳಿವು?

ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…

4 hours ago