Asia Cup | India squad announced Suryakumar named captain.
ಮುಂಬೈ : ಏಷ್ಯಾ ಕಪ್ 2025ರ ಟೂರ್ನಿಗಾಗಿ ಟೀಂ ಇಂಡಿಯಾ ತಂಡದ ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದಾರೆ.
ಮಂಗಳವಾರ ಮಧ್ಯಾಹ್ನ ನಡೆದ ಆಯ್ಕೆ ಮಂಡಳಿ ಸಭೆಯಲ್ಲಿ ಏಷ್ಯಾಕಪ್ಗಾಗಿ ಭಾರತದ 15 ಸದಸ್ಯರ ತಂಡವನ್ನು ಪ್ರಕಟಿಸಲಾತಿತು. ಶುಭಮನ್ ಗಿಲ್ ಉಪನಾಯಕರಾದರೇ, ಜಸ್ಪ್ರೀತ್ ಬುಮ್ರಾ ಮತ್ತು ಸಂಜು ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಕುಲದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ಅಕ್ಷರ್ ಪಟೇಲ್ ಅವರನ್ನು ಸ್ಪಿನ್ನರ್ಗಳಾಗಿ ಆಯ್ಕೆ ಮಾಡಲಾಗಿದೆ.
ಸೆಪ್ಟೆಂಬರ್ 9 ರಂದು ಯುಎಇಯಲ್ಲಿ ಆರಂಭವಾಗುವ ಏಷ್ಯಾಕಪ್ನೊಂದಿಗೆ ಭಾರತವು ಮುಂದಿನ ಫೆಬ್ರವರಿಯಲ್ಲಿ ಪುರುಷರ ಟಿ20 ವಿಶ್ವಕಪ್ಗೆ ಸಿದ್ಧತೆ ಪ್ರಾರಂಭಿಸಲಿದೆ. ಒಂದು ದಿನದ ನಂತರ ಭಾರತ ತನ್ನ ಮೊದಲ ಪಂದ್ಯವನ್ನು ಆಡಲಿದೆ.
ಭಾರತ ತಂಡ ಹೀಗಿದೆ?
ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್, ಜಿತೇಶ್ ಶರ್ಮಾ (ಡಬ್ಲ್ಯುಕೆ), ಜಸ್ಪ್ರೀತ್ ಬುಮ್ರಾ, ಅರ್ಷ್ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ, ರಿಂಕು ಸಿಂಗ್,
ಐದು ಸ್ಟ್ಯಾಂಡ್-ಬೈಗಳು: ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್, ರಿಯಾನ್ ಪರಾಗ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…