ಕ್ರೀಡೆ

ಏಷ್ಯ ಕಪ್‌: ಅಪರೂಪದ ವಿಶ್ವ ದಾಖಲೆಯನ್ನು ಸರಿಗಟ್ಟಿದ ಕಿಂಗ್‌ ಕೊಹ್ಲಿ

ಏಷ್ಯ ಕಪ್‌: ದುಬೈ ಇಂಟರ್​ನ್ಯಾಷನಲ್​ ಮೈದಾನದಲ್ಲಿ ಭಾನುವಾರ ನಡೆದ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳಿಂದ ಭರ್ಜರಿ ಜಯ ಸಾಧಿಸಿತ್ತು. ವಿಶೇಷ ಎಂದರೆ ಇದು ವಿರಾಟ್ ಕೊಹ್ಲಿ ಪಾಲಿನ 100ನೇ ಟಿ20 ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಕಿಂಗ್ ಕೊಹ್ಲಿ ಕ್ರಿಕೆಟ್ ಇತಿಹಾಸ ಅಪರೂಪದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಂದರೆ ಮೂರು ಮಾದರಿ ಕ್ರಿಕೆಟ್​ನಲ್ಲಿ 100 ಪಂದ್ಯಗಳನ್ನಾಡಿದ ವಿಶ್ವದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

ಅಂದರೆ 100 ಟೆಸ್ಟ್, 100 ಏಕದಿನ ಮತ್ತು 100 ಟಿ20 ಪಂದ್ಯವಾಡಿದ ಭಾರತದ ಮೊದಲ ಆಟಗಾರ ಹಾಗೂ ವಿಶ್ವದ ಎರಡನೇ ಕ್ರಿಕೆಟಿಗ ಎಂಬ ವಿಶ್ವ ದಾಖಲೆಯನ್ನು ಕೊಹ್ಲಿ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ನ್ಯೂಜಿಲೆಂಡ್​ನ ರಾಸ್ ಟೇಲರ್ ಮೂರು ಮಾದರಿಯಲ್ಲೂ 100 ಪಂದ್ಯಗಳನ್ನಾಡಿದ್ದರು. ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದ ಟೇಲರ್ 112 ಟೆಸ್ಟ್, 236 ಏಕದಿನ ಹಾಗೂ 102 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಈ ಮೂಲಕ ಮೂರು ಮಾದರಿಯ ಕ್ರಿಕೆಟ್​ನಲ್ಲಿ 100 ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದರು.

ಇದೀಗ ವಿರಾಟ್ ಕೊಹ್ಲಿ 100 ಟಿ20 ಪಂದ್ಯ, 262 ಏಕದಿನ ಹಾಗೂ 102 ಟೆಸ್ಟ್​ ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ರಾಸ್ ಟೇಲರ್​ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಭಾರತದ ಮೊದಲ ಕ್ರಿಕೆಟಿಗ ಎಂಬ ದಾಖಲೆ ನಿರ್ಮಿಸಿದ್ದಾರೆ.

ಇನ್ನು ರೋಹಿತ್ ಶರ್ಮಾ ಬಳಿಕ ಟೀಮ್ ಇಂಡಿಯಾ ಪರ 100 ಟಿ20 ಪಂದ್ಯವಾಡಿದ ಆಟಗಾರ ಎಂಬ ದಾಖಲೆಯನ್ನೂ ಕೂಡ ಕೊಹ್ಲಿ ಬರೆದಿದ್ದಾರೆ. ಭಾರತದ ಪರ ರೋಹಿತ್ ಶರ್ಮಾ 132 ಟಿ20 ಪಂದ್ಯಗಳನ್ನಾಡಿದ್ದಾರೆ. ಇದೀಗ ಕೊಹ್ಲಿ ನೂರು ಪಂದ್ಯಗಳಲ್ಲಿ ಕಣಕ್ಕಿಳಿದು ಈ ಸಾಧನೆ ಮಾಡಿದ 2ನೇ ಭಾರತೀಯ ಎನಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾ 100 ಟಿ20 ಪಂದ್ಯಗಳಲ್ಲಿ 92 ಇನಿಂಗ್ಸ್​ಗಳನ್ನು ಆಡಿರುವ ವಿರಾಟ್ ಕೊಹ್ಲಿ, 50 ಸರಾಸರಿಯಲ್ಲಿ 3343 ರನ್ ಕಲೆಹಾಕಿದ್ದಾರೆ. ಈ ವೇಳೆ 30 ಅರ್ಧಶತಕಗಳನ್ನು ಕೂಡ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ವಿಶ್ವದ ಮೂರನೇ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ಪಾಕ್ ವಿರುದ್ದ ಕಣಕ್ಕಿಳಿಯುವ ಮೂಲಕ ಅಪರೂಪದ ವಿಶ್ವ ದಾಖಲೆಯನ್ನು ನಿರ್ಮಿಸುವ ಮೂಲಕ ಕಿಂಗ್ ಕೊಹ್ಲಿ ತಮ್ಮ ಹೆಸರಿಗೆ ಮತ್ತೊಂದು ದಾಖಲೆಯನ್ನು ಸೇರ್ಪಡೆಗೊಳಿಸಿದ್ದಾರೆ.

andolana

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

5 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

6 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

6 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

6 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

6 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

7 hours ago