ಕ್ರೀಡೆ

ಏಷ್ಯ ಕಪ್‌: ಅಪರೂಪದ ವಿಶ್ವ ದಾಖಲೆಯನ್ನು ಸರಿಗಟ್ಟಿದ ಕಿಂಗ್‌ ಕೊಹ್ಲಿ

ಏಷ್ಯ ಕಪ್‌: ದುಬೈ ಇಂಟರ್​ನ್ಯಾಷನಲ್​ ಮೈದಾನದಲ್ಲಿ ಭಾನುವಾರ ನಡೆದ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳಿಂದ ಭರ್ಜರಿ ಜಯ ಸಾಧಿಸಿತ್ತು. ವಿಶೇಷ ಎಂದರೆ ಇದು ವಿರಾಟ್ ಕೊಹ್ಲಿ ಪಾಲಿನ 100ನೇ ಟಿ20 ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಕಿಂಗ್ ಕೊಹ್ಲಿ ಕ್ರಿಕೆಟ್ ಇತಿಹಾಸ ಅಪರೂಪದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಂದರೆ ಮೂರು ಮಾದರಿ ಕ್ರಿಕೆಟ್​ನಲ್ಲಿ 100 ಪಂದ್ಯಗಳನ್ನಾಡಿದ ವಿಶ್ವದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

ಅಂದರೆ 100 ಟೆಸ್ಟ್, 100 ಏಕದಿನ ಮತ್ತು 100 ಟಿ20 ಪಂದ್ಯವಾಡಿದ ಭಾರತದ ಮೊದಲ ಆಟಗಾರ ಹಾಗೂ ವಿಶ್ವದ ಎರಡನೇ ಕ್ರಿಕೆಟಿಗ ಎಂಬ ವಿಶ್ವ ದಾಖಲೆಯನ್ನು ಕೊಹ್ಲಿ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ನ್ಯೂಜಿಲೆಂಡ್​ನ ರಾಸ್ ಟೇಲರ್ ಮೂರು ಮಾದರಿಯಲ್ಲೂ 100 ಪಂದ್ಯಗಳನ್ನಾಡಿದ್ದರು. ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದ ಟೇಲರ್ 112 ಟೆಸ್ಟ್, 236 ಏಕದಿನ ಹಾಗೂ 102 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಈ ಮೂಲಕ ಮೂರು ಮಾದರಿಯ ಕ್ರಿಕೆಟ್​ನಲ್ಲಿ 100 ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದರು.

ಇದೀಗ ವಿರಾಟ್ ಕೊಹ್ಲಿ 100 ಟಿ20 ಪಂದ್ಯ, 262 ಏಕದಿನ ಹಾಗೂ 102 ಟೆಸ್ಟ್​ ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ರಾಸ್ ಟೇಲರ್​ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಭಾರತದ ಮೊದಲ ಕ್ರಿಕೆಟಿಗ ಎಂಬ ದಾಖಲೆ ನಿರ್ಮಿಸಿದ್ದಾರೆ.

ಇನ್ನು ರೋಹಿತ್ ಶರ್ಮಾ ಬಳಿಕ ಟೀಮ್ ಇಂಡಿಯಾ ಪರ 100 ಟಿ20 ಪಂದ್ಯವಾಡಿದ ಆಟಗಾರ ಎಂಬ ದಾಖಲೆಯನ್ನೂ ಕೂಡ ಕೊಹ್ಲಿ ಬರೆದಿದ್ದಾರೆ. ಭಾರತದ ಪರ ರೋಹಿತ್ ಶರ್ಮಾ 132 ಟಿ20 ಪಂದ್ಯಗಳನ್ನಾಡಿದ್ದಾರೆ. ಇದೀಗ ಕೊಹ್ಲಿ ನೂರು ಪಂದ್ಯಗಳಲ್ಲಿ ಕಣಕ್ಕಿಳಿದು ಈ ಸಾಧನೆ ಮಾಡಿದ 2ನೇ ಭಾರತೀಯ ಎನಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾ 100 ಟಿ20 ಪಂದ್ಯಗಳಲ್ಲಿ 92 ಇನಿಂಗ್ಸ್​ಗಳನ್ನು ಆಡಿರುವ ವಿರಾಟ್ ಕೊಹ್ಲಿ, 50 ಸರಾಸರಿಯಲ್ಲಿ 3343 ರನ್ ಕಲೆಹಾಕಿದ್ದಾರೆ. ಈ ವೇಳೆ 30 ಅರ್ಧಶತಕಗಳನ್ನು ಕೂಡ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ವಿಶ್ವದ ಮೂರನೇ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ಪಾಕ್ ವಿರುದ್ದ ಕಣಕ್ಕಿಳಿಯುವ ಮೂಲಕ ಅಪರೂಪದ ವಿಶ್ವ ದಾಖಲೆಯನ್ನು ನಿರ್ಮಿಸುವ ಮೂಲಕ ಕಿಂಗ್ ಕೊಹ್ಲಿ ತಮ್ಮ ಹೆಸರಿಗೆ ಮತ್ತೊಂದು ದಾಖಲೆಯನ್ನು ಸೇರ್ಪಡೆಗೊಳಿಸಿದ್ದಾರೆ.

andolana

Recent Posts

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

52 mins ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

4 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

4 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

4 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

5 hours ago