ನವದೆಹಲಿ: ಏಷ್ಯಾಕಪ್ 2023ರ ವೇಳಾಪಟ್ಟಿ ಪ್ರಕಟವಾಗಿದೆ. ಆಗಸ್ಟ್ 30 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ.
ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯವು ಶ್ರೀಲಂಕಾದ ಕ್ಯಾಂಡಿಯಲ್ಲಿ ನಡೆಯಲಿರುವುದು ವಿಶೇಷ
ಅಂದರೆ ಈ ಬಾರಿಯ ಏಷ್ಯಾಕಪ್ ಹೈ ಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸುತ್ತಿರುವ ಈ ಟೂರ್ನಿಯು ಪಾಕ್ನಲ್ಲಿ ನಡೆಯಬೇಕಿತ್ತು. ಆದರೆ ಪಾಕಿಸ್ತಾನದಲ್ಲಿ ಟೂರ್ನಿ ನಡೆದರೆ ಭಾರತ ತಂಡವು ಪಾಲ್ಗೊಳ್ಳುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿತ್ತು. ಹೀಗಾಗಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮುಂದಾಗಿದೆ.
ಅದರಂತೆ ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿದ್ದು, ಈ ಪಂದ್ಯಗಳಿಗಾಗಿ ಉಳಿದ ತಂಡಗಳು ಲಂಕಾಗೆ ಆಗಮಿಸಲಿದೆ. ಈ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.
ಏಷ್ಯಾಕಪ್ ವೇಳಾಪಟ್ಟಿ:
ಆಗಸ್ಟ್ 30- ಪಾಕಿಸ್ತಾನ್ vs ನೇಪಾಳ (ಮುಲ್ತಾನ್)
ಆಗಸ್ಟ್ 31- ಬಾಂಗ್ಲಾದೇಶ್ vs ಶ್ರೀಲಂಕಾ (ಕ್ಯಾಂಡಿ)
ಸೆಪ್ಟೆಂಬರ್ 2- ಭಾರತ vs ಪಾಕಿಸ್ತಾನ್ (ಕ್ಯಾಂಡಿ)
ಸೆಪ್ಟೆಂಬರ್ 3- ಬಾಂಗ್ಲಾದೇಶ್ vs ಅಫ್ಘಾನಿಸ್ತಾನ್ (ಲಾಹೋರ್)
ಸೆಪ್ಟೆಂಬರ್ 4- ಭಾರತ vs ನೇಪಾಳ (ಕ್ಯಾಂಡಿ)
ಸೆಪ್ಟೆಂಬರ್ 5- ಶ್ರೀಲಂಕಾ vs ಅಫ್ಘಾನಿಸ್ತಾನ್ (ಲಾಹೋರ್)
ಸೂಪರ್-4 ಹಂತದ ವೇಳಾಪಟ್ಟಿ:
ಸೆಪ್ಟೆಂಬರ್ 6- A1 Vs B2 (ಲಾಹೋರ್)
ಸೆಪ್ಟೆಂಬರ್ 9- B1 Vs B2 (ಕೊಲಂಬೊ)
ಸೆಪ್ಟೆಂಬರ್ 10- A1 Vs A2 (ಕೊಲಂಬೊ)
ಸೆಪ್ಟೆಂಬರ್ 12- A2 Vs B1 (ಕೊಲಂಬೊ)
ಸೆಪ್ಟೆಂಬರ್ 14- A1 Vs B1 (ಕೊಲಂಬೊ)
ಸೆಪ್ಟೆಂಬರ್ 15- A2 Vs B2 (ಕೊಲಂಬೊ)
ಸೆಪ್ಟೆಂಬರ್ 17- ಫೈನಲ್ ಪಂದ್ಯ (ಕೊಲಂಬೊ)
ಈ ಬಾರಿಯ ಏಷ್ಯಾಕಪ್ನಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿದೆ. ವಿಶೇಷ ಎಂದರೆ ಈ ಹಿಂದಿನ 5 ತಂಡಗಳ ಜೊತೆ ಈ ಬಾರಿ ನೇಪಾಳ ತಂಡವು ಅರ್ಹತೆ ಪಡೆದುಕೊಂಡಿದೆ. ಅದರಂತೆ ಇದೇ ಮೊದಲ ಬಾರಿಗೆ ಕಣಕ್ಕಿಳಿಯುತ್ತಿರುವ ನೇಪಾಳ ತಂಡವು ಗ್ರೂಪ್-ಬಿ ನಲ್ಲಿದ್ದು, ಏಷ್ಯಾದ ಬಲಿಷ್ಠ ಎರಡು ತಂಡಗಳಾದ ಭಾರತ ಮತ್ತು ಪಾಕಿಸ್ತಾನ್ ವಿರುದ್ಧ ಸೆಣಸಲಿದೆ.
ಏಷ್ಯಾಕಪ್ ಗ್ರೂಪ್ಗಳು:
ಗ್ರೂಪ್- A ತಂಡಗಳು:
ಭಾರತ
ಪಾಕಿಸ್ತಾನ್
ನೇಪಾಳ
ಗ್ರೂಪ್- B ತಂಡಗಳು
ಶ್ರೀಲಂಕಾ
ಅಫ್ಘಾನಿಸ್ತಾನ್
ಬಾಂಗ್ಲಾದೇಶ್
ಏಕದಿನ ಮಾದರಿ ಟೂರ್ನಿ: ಈ ಬಾರಿಯ ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯಲಿದೆ. ಮುಂಬರುವ ಐಸಿಸಿ ಏಕದಿನ ವಿಶ್ವಕಪ್ ಹಿನ್ನಲೆಯಲ್ಲಿ 50 ಓವರ್ಗಳ ಸ್ವರೂಪದಲ್ಲಿ ಟೂರ್ನಿ ಆಯೋಜಿಸಲು ನಿರ್ಧರಿಸಲಾಗಿದೆ. ಅಂದರೆ ಆಯಾ ಏಷ್ಯಾಕಪ್ನ ನಂತರ ಐಸಿಸಿ ಟೂರ್ನಿ ಜರುಗುತ್ತಿದ್ದರೆ ಅದೇ ಸ್ವರೂಪದಲ್ಲಿ ಟೂರ್ನಿಯನ್ನು ಆಯೋಜಿಸಲಾಗುತ್ತದೆ. ಕಳೆದ ವರ್ಷ ಟಿ20 ವಿಶ್ವಕಪ್ ಹಿನ್ನಲೆಯಲ್ಲಿ ಏಷ್ಯಾಕಪ್ ಅನ್ನು ಕೂಡ ಟಿ20 ಮಾದರಿಯಲ್ಲಿ ಆಯೋಜಿಸಲಾಗಿತ್ತು. ಇದೀಗ ಏಕದಿನ ವಿಶ್ವಕಪ್ ಹಿನ್ನಲೆಯಲ್ಲಿ ಏಷ್ಯಾಕಪ್ ಕೂಡ 50 ಓವರ್ಗಳಲ್ಲಿ ನಡೆಯಲಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…