ಕ್ರೀಡೆ

ಇಂದು ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್‌ ಟಿ20 ಆರಂಭ

ದುಬೈ : ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್‌ ಟಿ20 ಪಂದ್ಯ ಭಾನುವಾರ ನಡೆಯಲಿದೆ. 10 ತಿಂಗಳ ಹಿಂದೆ ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದಿದ್ದ ಐಸಿಸಿ ಟಿ20 ವಿಶ್ವಕಪ್‌ ಪಂದ್ಯವನ್ನು ಸೋತಿದ್ದ ಭಾರತ, ಈಗ ಅದೇ ಮೈದಾನದಲ್ಲಿ ಸೇಡು ತೀರಿಸಿಕೊಳ್ಳಲು ಕಾತರಿಸುತ್ತಿದೆ. ರೋಹಿತ್‌ ಶರ್ಮಾ ನೇತೃತ್ವದ ತಂಡ ತನ್ನ ಬ್ಯಾಟಿಂಗ್‌ ಪಡೆ ಮೇಲೆ ಹೆಚ್ಚು ಅವಲಂಬಿತಗೊಂಡಿದ್ದು, ಮುಂಚೂಣಿ ವೇಗಿ ಜಸ್‌ಪ್ರೀತ್‌ ಬುಮ್ರಾ ಅನುಪಸ್ಥಿತಿಯಲ್ಲಿ ಆಡಬೇಕಿದೆ. ವಿಶ್ವಕಪ್‌ ಪಂದ್ಯದಲ್ಲಿ ಭಾರತೀಯರನ್ನು ಕಟ್ಟಿಹಾಕಿದ್ದ ಎಡಗೈ ವೇಗಿ ಶಾಹೀನ್‌ ಅಫ್ರಿದಿ ಅನುಪಸ್ಥಿತಿ ಪಾಕಿಸ್ತಾನವನ್ನು ಬಲವಾಗಿ ಕಾಡಲಿದೆ.

ಟಿ20 ವಿಶ್ವಕಪ್‌ಗೆ ಇನ್ನು ಕೆಲವೇ ವಾರಗಳು ಬಾಕಿ ಇದ್ದು, ಭಾರತ ಹಾಗೂ ಪಾಕಿಸ್ತಾನ ತನ್ನ ತಂಡಗಳನ್ನು ಅಂತಿಮಗೊಳಿಸಿಕೊಳ್ಳಲು ಎದುರು ನೋಡುತ್ತಿವೆ. ಹಿಂದಿನ ಸರಣಿಗಳಲ್ಲಿ ವಿಪರೀಪ ಪ್ರಯೋಗಗಳನ್ನು ನಡೆಸಿದ್ದರೂ ಕೆ.ಎಲ್‌.ರಾಹುಲ್‌ ತಂಡಕ್ಕೆ ವಾಪಸಾಗಿರುವ ಕಾರಣ ರೋಹಿತ್‌ ಜೊತೆ ಅವರೇ ಆರಂಭಿಕರಾಗಿ ಆಡಲಿದ್ದಾರೆ. 3ನೇ ಕ್ರಮಾಂಕದಲ್ಲಿ ವಿರಾಟ್‌ ಕೊಹ್ಲಿ ಕಣಕ್ಕಿಳಿಯಲಿದ್ದು, ಸ್ಫೋಟಕ ಬ್ಯಾಟರ್‌ಗಳಾದ ರಿಷಭ್‌ ಪಂತ್‌, ಸೂರ್ಯಕುಮಾರ್‌ ಯಾದವ್‌ ಮತ್ತು ಹಾರ್ದಿಕ್‌ ಪಾಂಡ್ಯ ಮೇಲೆ ದೊಡ್ಡ ಜವಾಬ್ದಾರಿ ಇರಲಿದೆ. ದಿನೇಶ್‌ ಕಾರ್ತಿಕ್‌ರನ್ನು ಹಿಂದಿಕ್ಕಿ ರವೀಂದ್ರ ಜಡೇಜಾಗೆ ಸ್ಥಾನ ಸಿಗುವ ಸಾಧ್ಯತೆ ಹೆಚ್ಚು. ಭುವನೇಶ್ವರ್‌ ಕುಮಾರ್‌ ಬೌಲಿಂಗ್‌ ಪಡೆಯನ್ನು ಮುನ್ನಡೆಸಲಿದ್ದು, ಯುವ ವೇಗಿಗಳಾದ ಅಶ್‌ರ್‍ದೀಪ್‌ ಸಿಂಗ್‌ ಮತ್ತು ಆವೇಶ್‌ ಖಾನ್‌ ನಿರೀಕ್ಷೆ ಉಳಿಸಿಕೊಳ್ಳಬೇಕಿದೆ. ಲೆಗ್‌ ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಭಾರತದ ಟ್ರಂಪ್‌ ಕಾರ್ಡ್‌ ಆಗಬಹುದು.

ಆಟಗಾರರ ಪಟ್ಟಿ

ಭಾರತ: ರೋಹಿತ್‌ ಶರ್ಮಾ(ನಾಯಕ), ಕೆ.ಎಲ್‌.ರಾಹುಲ್‌, ವಿರಾಟ್‌ ಕೊಹ್ಲಿ, ರಿಷಭ್‌ ಪಂತ್‌, ಸೂರ್ಯಕುಮಾರ್‌, ಹಾರ್ದಿಕ್‌ ಪಾಂಡ್ಯ, ಜಡೇಜಾ/ಕಾರ್ತಿಕ್‌, ಭುವನೇಶ್ವರ್‌ ಕುಮಾರ್‌, ಯಜುವೇಂದ್ರ ಚಹಲ್‌, ಅಶ್‌ರ್‍ದೀಪ್‌ ಸಿಂಗ್‌, ಆವೇಶ್‌ ಖಾನ್‌.

ಪಾಕಿಸ್ತಾನ: ಮೊಹಮದ್‌ ರಿಜ್ವಾನ್‌, ಬಾಬರ್‌ ಆಜಂ(ನಾಯಕ), ಫಖರ್‌ ಜಮಾನ್‌, ಇಫ್ತಿಕರ್‌ ಅಹ್ಮದ್‌, ಕುಶ್‌ದಿಲ್‌ ಶಾ, ಆಸಿಫ್‌ ಅಲಿ, ಶದಾಬ್‌ ಖಾನ್‌, ಮೊಹಮದ್‌ ನವಾಜ್‌, ಹಸನ್‌ ಅಲಿ, ಹ್ಯಾರಿಸ್‌ ರೌಫ್‌, ಮೊಹಮದ್‌ ಹಸ್ನೈನ್‌.

ಪಂದ್ಯ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

andolana

Recent Posts

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

34 mins ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

59 mins ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

2 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

3 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

3 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

4 hours ago