ಕ್ರೀಡೆ

ಇಂದು ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್‌ ಟಿ20 ಆರಂಭ

ದುಬೈ : ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್‌ ಟಿ20 ಪಂದ್ಯ ಭಾನುವಾರ ನಡೆಯಲಿದೆ. 10 ತಿಂಗಳ ಹಿಂದೆ ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದಿದ್ದ ಐಸಿಸಿ ಟಿ20 ವಿಶ್ವಕಪ್‌ ಪಂದ್ಯವನ್ನು ಸೋತಿದ್ದ ಭಾರತ, ಈಗ ಅದೇ ಮೈದಾನದಲ್ಲಿ ಸೇಡು ತೀರಿಸಿಕೊಳ್ಳಲು ಕಾತರಿಸುತ್ತಿದೆ. ರೋಹಿತ್‌ ಶರ್ಮಾ ನೇತೃತ್ವದ ತಂಡ ತನ್ನ ಬ್ಯಾಟಿಂಗ್‌ ಪಡೆ ಮೇಲೆ ಹೆಚ್ಚು ಅವಲಂಬಿತಗೊಂಡಿದ್ದು, ಮುಂಚೂಣಿ ವೇಗಿ ಜಸ್‌ಪ್ರೀತ್‌ ಬುಮ್ರಾ ಅನುಪಸ್ಥಿತಿಯಲ್ಲಿ ಆಡಬೇಕಿದೆ. ವಿಶ್ವಕಪ್‌ ಪಂದ್ಯದಲ್ಲಿ ಭಾರತೀಯರನ್ನು ಕಟ್ಟಿಹಾಕಿದ್ದ ಎಡಗೈ ವೇಗಿ ಶಾಹೀನ್‌ ಅಫ್ರಿದಿ ಅನುಪಸ್ಥಿತಿ ಪಾಕಿಸ್ತಾನವನ್ನು ಬಲವಾಗಿ ಕಾಡಲಿದೆ.

ಟಿ20 ವಿಶ್ವಕಪ್‌ಗೆ ಇನ್ನು ಕೆಲವೇ ವಾರಗಳು ಬಾಕಿ ಇದ್ದು, ಭಾರತ ಹಾಗೂ ಪಾಕಿಸ್ತಾನ ತನ್ನ ತಂಡಗಳನ್ನು ಅಂತಿಮಗೊಳಿಸಿಕೊಳ್ಳಲು ಎದುರು ನೋಡುತ್ತಿವೆ. ಹಿಂದಿನ ಸರಣಿಗಳಲ್ಲಿ ವಿಪರೀಪ ಪ್ರಯೋಗಗಳನ್ನು ನಡೆಸಿದ್ದರೂ ಕೆ.ಎಲ್‌.ರಾಹುಲ್‌ ತಂಡಕ್ಕೆ ವಾಪಸಾಗಿರುವ ಕಾರಣ ರೋಹಿತ್‌ ಜೊತೆ ಅವರೇ ಆರಂಭಿಕರಾಗಿ ಆಡಲಿದ್ದಾರೆ. 3ನೇ ಕ್ರಮಾಂಕದಲ್ಲಿ ವಿರಾಟ್‌ ಕೊಹ್ಲಿ ಕಣಕ್ಕಿಳಿಯಲಿದ್ದು, ಸ್ಫೋಟಕ ಬ್ಯಾಟರ್‌ಗಳಾದ ರಿಷಭ್‌ ಪಂತ್‌, ಸೂರ್ಯಕುಮಾರ್‌ ಯಾದವ್‌ ಮತ್ತು ಹಾರ್ದಿಕ್‌ ಪಾಂಡ್ಯ ಮೇಲೆ ದೊಡ್ಡ ಜವಾಬ್ದಾರಿ ಇರಲಿದೆ. ದಿನೇಶ್‌ ಕಾರ್ತಿಕ್‌ರನ್ನು ಹಿಂದಿಕ್ಕಿ ರವೀಂದ್ರ ಜಡೇಜಾಗೆ ಸ್ಥಾನ ಸಿಗುವ ಸಾಧ್ಯತೆ ಹೆಚ್ಚು. ಭುವನೇಶ್ವರ್‌ ಕುಮಾರ್‌ ಬೌಲಿಂಗ್‌ ಪಡೆಯನ್ನು ಮುನ್ನಡೆಸಲಿದ್ದು, ಯುವ ವೇಗಿಗಳಾದ ಅಶ್‌ರ್‍ದೀಪ್‌ ಸಿಂಗ್‌ ಮತ್ತು ಆವೇಶ್‌ ಖಾನ್‌ ನಿರೀಕ್ಷೆ ಉಳಿಸಿಕೊಳ್ಳಬೇಕಿದೆ. ಲೆಗ್‌ ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಭಾರತದ ಟ್ರಂಪ್‌ ಕಾರ್ಡ್‌ ಆಗಬಹುದು.

ಆಟಗಾರರ ಪಟ್ಟಿ

ಭಾರತ: ರೋಹಿತ್‌ ಶರ್ಮಾ(ನಾಯಕ), ಕೆ.ಎಲ್‌.ರಾಹುಲ್‌, ವಿರಾಟ್‌ ಕೊಹ್ಲಿ, ರಿಷಭ್‌ ಪಂತ್‌, ಸೂರ್ಯಕುಮಾರ್‌, ಹಾರ್ದಿಕ್‌ ಪಾಂಡ್ಯ, ಜಡೇಜಾ/ಕಾರ್ತಿಕ್‌, ಭುವನೇಶ್ವರ್‌ ಕುಮಾರ್‌, ಯಜುವೇಂದ್ರ ಚಹಲ್‌, ಅಶ್‌ರ್‍ದೀಪ್‌ ಸಿಂಗ್‌, ಆವೇಶ್‌ ಖಾನ್‌.

ಪಾಕಿಸ್ತಾನ: ಮೊಹಮದ್‌ ರಿಜ್ವಾನ್‌, ಬಾಬರ್‌ ಆಜಂ(ನಾಯಕ), ಫಖರ್‌ ಜಮಾನ್‌, ಇಫ್ತಿಕರ್‌ ಅಹ್ಮದ್‌, ಕುಶ್‌ದಿಲ್‌ ಶಾ, ಆಸಿಫ್‌ ಅಲಿ, ಶದಾಬ್‌ ಖಾನ್‌, ಮೊಹಮದ್‌ ನವಾಜ್‌, ಹಸನ್‌ ಅಲಿ, ಹ್ಯಾರಿಸ್‌ ರೌಫ್‌, ಮೊಹಮದ್‌ ಹಸ್ನೈನ್‌.

ಪಂದ್ಯ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

8 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago