ಕ್ರೀಡೆ

ಏಶ್ಯಕಪ್| ಅಲ್ಪ ಮೊತ್ತಕ್ಕೆ ಕುಸಿದ ಭಾರತಕ್ಕೆ ಇಶಾನ್‌-ಪಾಂಡ್ಯ ಆಸರೆ: ಪಾಕಿಸ್ತಾನಕ್ಕೆ 267 ರನ್‌ ಗುರಿ

ಪಲ್ಲೆಕೆಲೆ : ಆರಂಭಿಕ ಬ್ಯಾಟಿಂಗ್ ಕುಸಿತದ ಹೊರತಾಗಿಯೂ ಹಾರ್ದಿಕ್ ಪಾಂಡ್ಯ(87 ರನ್, 90 ಎಸೆತ)ಹಾಗೂ ಇಶಾನ್ ಕಿಶನ್(82 ರನ್, 81 ಎಸೆತ)ಅರ್ಧಶತಕದ ಕೊಡುಗೆಯ ನೆರವಿನಿಂದ ಏಶ್ಯಕಪ್‌ನ ಎ ಗುಂಪಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನ ತಂಡದ ಗೆಲುವಿಗೆ 267 ರನ್ ಗುರಿ ನೀಡಿದೆ.

ಶನಿವಾರ ಟಾಸ್ ಜಯಿಸಿದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಭಾರತ 48.5 ಓವರ್‌ಗಳಲ್ಲಿ 266 ರನ್‌ಗೆ ಆಲೌಟಾಯಿತು. ಎರಡು ಬಾರಿ ಮಳೆ ಪಂದ್ಯಕ್ಕೆ ಅಡ್ಡಿಪಡಿಸಿದ್ದು ಈ ಮಧ್ಯೆ ಭಾರತವು 66 ರನ್‌ಗೆ 4 ವಿಕೆಟ್‌ಗಳನ್ನು ಕಳೆದುಕೊಂಡು ಅಗ್ರ ಸರದಿಯ ಕುಸಿತಕ್ಕೆ ಒಳಗಾಯಿತು.

ಆಗ ಜೊತೆಯಾದ ವಿಕೆಟ್‌ಕೀಪರ್-ಬ್ಯಾಟರ್ ಕಿಶನ್ ಹಾಗೂ ಆಲ್‌ರೌಂಡರ್ ಪಾಂಡ್ಯ 5ನೇ ವಿಕೆಟ್‌ಗೆ 138 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು. ಇದು 5ನೇ ವಿಕೆಟ್‌ನಲ್ಲಿ ಭಾರತ ಗಳಿಸಿರುವ ಗರಿಷ್ಠ ರನ್ ಜೊತೆಯಾಟವಾಗಿದೆ.

ಕಿಶನ್ 54 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ನೆರವಿನಿಂದ ಏಕದಿನ ಕ್ರಿಕೆಟ್‌ನಲ್ಲಿ 7ನೇ ಅರ್ಧಶತಕ ಪೂರೈಸಿದರು. ಕಿಶನ್ ಔಟಾದ ನಂತರ ಪಾಂಡ್ಯ ಅವರು ರವೀಂದ್ರ ಜಡೇಜ(14 ರನ್) ಜೊತೆ 6ನೇ ವಿಕೆಟ್‌ಗೆ 35 ರನ್ ಸೇರಿಸಿದರು. ಕಿಶನ್‌ಗೆ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ 62 ಎಸೆತಗಳಲ್ಲಿ 3 ಬೌಂಡರಿ ಸಹಾಯದಿಂದ 11ನೇ ಅರ್ಧಶತಕ ಪೂರ್ಣಗೊಳಿಸಿದರು.

ಪಾಕಿಸ್ತಾನದ ಬೌಲಿಂಗ್ ವಿಭಾಗದಲ್ಲಿ ವೇಗಿಗಳಾದ ಶಾಹೀನ್ ಶಾ ಅಫ್ರಿದಿ(4-35) ಯಶಸ್ವಿ ಬೌಲರ್ ಎನಿಸಿಕೊಂಡರು. ಹಾರಿಸ್ ರವೂಫ್(3-58)ಹಾಗೂ ನಸೀಂ ಶಾ(3-36) ತಲಾ 3 ವಿಕೆಟ್‌ಗಳನ್ನು ಪಡೆದರು.

andolanait

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

8 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

8 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

8 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

8 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

8 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

8 hours ago