ಕ್ರೀಡೆ

ಏಶ್ಯಕಪ್| ಅಲ್ಪ ಮೊತ್ತಕ್ಕೆ ಕುಸಿದ ಭಾರತಕ್ಕೆ ಇಶಾನ್‌-ಪಾಂಡ್ಯ ಆಸರೆ: ಪಾಕಿಸ್ತಾನಕ್ಕೆ 267 ರನ್‌ ಗುರಿ

ಪಲ್ಲೆಕೆಲೆ : ಆರಂಭಿಕ ಬ್ಯಾಟಿಂಗ್ ಕುಸಿತದ ಹೊರತಾಗಿಯೂ ಹಾರ್ದಿಕ್ ಪಾಂಡ್ಯ(87 ರನ್, 90 ಎಸೆತ)ಹಾಗೂ ಇಶಾನ್ ಕಿಶನ್(82 ರನ್, 81 ಎಸೆತ)ಅರ್ಧಶತಕದ ಕೊಡುಗೆಯ ನೆರವಿನಿಂದ ಏಶ್ಯಕಪ್‌ನ ಎ ಗುಂಪಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನ ತಂಡದ ಗೆಲುವಿಗೆ 267 ರನ್ ಗುರಿ ನೀಡಿದೆ.

ಶನಿವಾರ ಟಾಸ್ ಜಯಿಸಿದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಭಾರತ 48.5 ಓವರ್‌ಗಳಲ್ಲಿ 266 ರನ್‌ಗೆ ಆಲೌಟಾಯಿತು. ಎರಡು ಬಾರಿ ಮಳೆ ಪಂದ್ಯಕ್ಕೆ ಅಡ್ಡಿಪಡಿಸಿದ್ದು ಈ ಮಧ್ಯೆ ಭಾರತವು 66 ರನ್‌ಗೆ 4 ವಿಕೆಟ್‌ಗಳನ್ನು ಕಳೆದುಕೊಂಡು ಅಗ್ರ ಸರದಿಯ ಕುಸಿತಕ್ಕೆ ಒಳಗಾಯಿತು.

ಆಗ ಜೊತೆಯಾದ ವಿಕೆಟ್‌ಕೀಪರ್-ಬ್ಯಾಟರ್ ಕಿಶನ್ ಹಾಗೂ ಆಲ್‌ರೌಂಡರ್ ಪಾಂಡ್ಯ 5ನೇ ವಿಕೆಟ್‌ಗೆ 138 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು. ಇದು 5ನೇ ವಿಕೆಟ್‌ನಲ್ಲಿ ಭಾರತ ಗಳಿಸಿರುವ ಗರಿಷ್ಠ ರನ್ ಜೊತೆಯಾಟವಾಗಿದೆ.

ಕಿಶನ್ 54 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ನೆರವಿನಿಂದ ಏಕದಿನ ಕ್ರಿಕೆಟ್‌ನಲ್ಲಿ 7ನೇ ಅರ್ಧಶತಕ ಪೂರೈಸಿದರು. ಕಿಶನ್ ಔಟಾದ ನಂತರ ಪಾಂಡ್ಯ ಅವರು ರವೀಂದ್ರ ಜಡೇಜ(14 ರನ್) ಜೊತೆ 6ನೇ ವಿಕೆಟ್‌ಗೆ 35 ರನ್ ಸೇರಿಸಿದರು. ಕಿಶನ್‌ಗೆ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ 62 ಎಸೆತಗಳಲ್ಲಿ 3 ಬೌಂಡರಿ ಸಹಾಯದಿಂದ 11ನೇ ಅರ್ಧಶತಕ ಪೂರ್ಣಗೊಳಿಸಿದರು.

ಪಾಕಿಸ್ತಾನದ ಬೌಲಿಂಗ್ ವಿಭಾಗದಲ್ಲಿ ವೇಗಿಗಳಾದ ಶಾಹೀನ್ ಶಾ ಅಫ್ರಿದಿ(4-35) ಯಶಸ್ವಿ ಬೌಲರ್ ಎನಿಸಿಕೊಂಡರು. ಹಾರಿಸ್ ರವೂಫ್(3-58)ಹಾಗೂ ನಸೀಂ ಶಾ(3-36) ತಲಾ 3 ವಿಕೆಟ್‌ಗಳನ್ನು ಪಡೆದರು.

andolanait

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

8 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

8 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

9 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

9 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

9 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

10 hours ago