ಪಲ್ಲೆಕೆಲೆ : ಆರಂಭಿಕ ಬ್ಯಾಟಿಂಗ್ ಕುಸಿತದ ಹೊರತಾಗಿಯೂ ಹಾರ್ದಿಕ್ ಪಾಂಡ್ಯ(87 ರನ್, 90 ಎಸೆತ)ಹಾಗೂ ಇಶಾನ್ ಕಿಶನ್(82 ರನ್, 81 ಎಸೆತ)ಅರ್ಧಶತಕದ ಕೊಡುಗೆಯ ನೆರವಿನಿಂದ ಏಶ್ಯಕಪ್ನ ಎ ಗುಂಪಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನ ತಂಡದ ಗೆಲುವಿಗೆ 267 ರನ್ ಗುರಿ ನೀಡಿದೆ.
ಶನಿವಾರ ಟಾಸ್ ಜಯಿಸಿದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಭಾರತ 48.5 ಓವರ್ಗಳಲ್ಲಿ 266 ರನ್ಗೆ ಆಲೌಟಾಯಿತು. ಎರಡು ಬಾರಿ ಮಳೆ ಪಂದ್ಯಕ್ಕೆ ಅಡ್ಡಿಪಡಿಸಿದ್ದು ಈ ಮಧ್ಯೆ ಭಾರತವು 66 ರನ್ಗೆ 4 ವಿಕೆಟ್ಗಳನ್ನು ಕಳೆದುಕೊಂಡು ಅಗ್ರ ಸರದಿಯ ಕುಸಿತಕ್ಕೆ ಒಳಗಾಯಿತು.
ಆಗ ಜೊತೆಯಾದ ವಿಕೆಟ್ಕೀಪರ್-ಬ್ಯಾಟರ್ ಕಿಶನ್ ಹಾಗೂ ಆಲ್ರೌಂಡರ್ ಪಾಂಡ್ಯ 5ನೇ ವಿಕೆಟ್ಗೆ 138 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು. ಇದು 5ನೇ ವಿಕೆಟ್ನಲ್ಲಿ ಭಾರತ ಗಳಿಸಿರುವ ಗರಿಷ್ಠ ರನ್ ಜೊತೆಯಾಟವಾಗಿದೆ.
ಕಿಶನ್ 54 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ನೆರವಿನಿಂದ ಏಕದಿನ ಕ್ರಿಕೆಟ್ನಲ್ಲಿ 7ನೇ ಅರ್ಧಶತಕ ಪೂರೈಸಿದರು. ಕಿಶನ್ ಔಟಾದ ನಂತರ ಪಾಂಡ್ಯ ಅವರು ರವೀಂದ್ರ ಜಡೇಜ(14 ರನ್) ಜೊತೆ 6ನೇ ವಿಕೆಟ್ಗೆ 35 ರನ್ ಸೇರಿಸಿದರು. ಕಿಶನ್ಗೆ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ 62 ಎಸೆತಗಳಲ್ಲಿ 3 ಬೌಂಡರಿ ಸಹಾಯದಿಂದ 11ನೇ ಅರ್ಧಶತಕ ಪೂರ್ಣಗೊಳಿಸಿದರು.
ಪಾಕಿಸ್ತಾನದ ಬೌಲಿಂಗ್ ವಿಭಾಗದಲ್ಲಿ ವೇಗಿಗಳಾದ ಶಾಹೀನ್ ಶಾ ಅಫ್ರಿದಿ(4-35) ಯಶಸ್ವಿ ಬೌಲರ್ ಎನಿಸಿಕೊಂಡರು. ಹಾರಿಸ್ ರವೂಫ್(3-58)ಹಾಗೂ ನಸೀಂ ಶಾ(3-36) ತಲಾ 3 ವಿಕೆಟ್ಗಳನ್ನು ಪಡೆದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…