ಪಲ್ಲೆಕೆಲೆ : ಆರಂಭಿಕ ಬ್ಯಾಟಿಂಗ್ ಕುಸಿತದ ಹೊರತಾಗಿಯೂ ಹಾರ್ದಿಕ್ ಪಾಂಡ್ಯ(87 ರನ್, 90 ಎಸೆತ)ಹಾಗೂ ಇಶಾನ್ ಕಿಶನ್(82 ರನ್, 81 ಎಸೆತ)ಅರ್ಧಶತಕದ ಕೊಡುಗೆಯ ನೆರವಿನಿಂದ ಏಶ್ಯಕಪ್ನ ಎ ಗುಂಪಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನ ತಂಡದ ಗೆಲುವಿಗೆ 267 ರನ್ ಗುರಿ ನೀಡಿದೆ.
ಶನಿವಾರ ಟಾಸ್ ಜಯಿಸಿದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಭಾರತ 48.5 ಓವರ್ಗಳಲ್ಲಿ 266 ರನ್ಗೆ ಆಲೌಟಾಯಿತು. ಎರಡು ಬಾರಿ ಮಳೆ ಪಂದ್ಯಕ್ಕೆ ಅಡ್ಡಿಪಡಿಸಿದ್ದು ಈ ಮಧ್ಯೆ ಭಾರತವು 66 ರನ್ಗೆ 4 ವಿಕೆಟ್ಗಳನ್ನು ಕಳೆದುಕೊಂಡು ಅಗ್ರ ಸರದಿಯ ಕುಸಿತಕ್ಕೆ ಒಳಗಾಯಿತು.
ಆಗ ಜೊತೆಯಾದ ವಿಕೆಟ್ಕೀಪರ್-ಬ್ಯಾಟರ್ ಕಿಶನ್ ಹಾಗೂ ಆಲ್ರೌಂಡರ್ ಪಾಂಡ್ಯ 5ನೇ ವಿಕೆಟ್ಗೆ 138 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು. ಇದು 5ನೇ ವಿಕೆಟ್ನಲ್ಲಿ ಭಾರತ ಗಳಿಸಿರುವ ಗರಿಷ್ಠ ರನ್ ಜೊತೆಯಾಟವಾಗಿದೆ.
ಕಿಶನ್ 54 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ನೆರವಿನಿಂದ ಏಕದಿನ ಕ್ರಿಕೆಟ್ನಲ್ಲಿ 7ನೇ ಅರ್ಧಶತಕ ಪೂರೈಸಿದರು. ಕಿಶನ್ ಔಟಾದ ನಂತರ ಪಾಂಡ್ಯ ಅವರು ರವೀಂದ್ರ ಜಡೇಜ(14 ರನ್) ಜೊತೆ 6ನೇ ವಿಕೆಟ್ಗೆ 35 ರನ್ ಸೇರಿಸಿದರು. ಕಿಶನ್ಗೆ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ 62 ಎಸೆತಗಳಲ್ಲಿ 3 ಬೌಂಡರಿ ಸಹಾಯದಿಂದ 11ನೇ ಅರ್ಧಶತಕ ಪೂರ್ಣಗೊಳಿಸಿದರು.
ಪಾಕಿಸ್ತಾನದ ಬೌಲಿಂಗ್ ವಿಭಾಗದಲ್ಲಿ ವೇಗಿಗಳಾದ ಶಾಹೀನ್ ಶಾ ಅಫ್ರಿದಿ(4-35) ಯಶಸ್ವಿ ಬೌಲರ್ ಎನಿಸಿಕೊಂಡರು. ಹಾರಿಸ್ ರವೂಫ್(3-58)ಹಾಗೂ ನಸೀಂ ಶಾ(3-36) ತಲಾ 3 ವಿಕೆಟ್ಗಳನ್ನು ಪಡೆದರು.
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…