ಕ್ರೀಡೆ

ಏಶ್ಯಕಪ್| ಅಲ್ಪ ಮೊತ್ತಕ್ಕೆ ಕುಸಿದ ಭಾರತಕ್ಕೆ ಇಶಾನ್‌-ಪಾಂಡ್ಯ ಆಸರೆ: ಪಾಕಿಸ್ತಾನಕ್ಕೆ 267 ರನ್‌ ಗುರಿ

ಪಲ್ಲೆಕೆಲೆ : ಆರಂಭಿಕ ಬ್ಯಾಟಿಂಗ್ ಕುಸಿತದ ಹೊರತಾಗಿಯೂ ಹಾರ್ದಿಕ್ ಪಾಂಡ್ಯ(87 ರನ್, 90 ಎಸೆತ)ಹಾಗೂ ಇಶಾನ್ ಕಿಶನ್(82 ರನ್, 81 ಎಸೆತ)ಅರ್ಧಶತಕದ ಕೊಡುಗೆಯ ನೆರವಿನಿಂದ ಏಶ್ಯಕಪ್‌ನ ಎ ಗುಂಪಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನ ತಂಡದ ಗೆಲುವಿಗೆ 267 ರನ್ ಗುರಿ ನೀಡಿದೆ.

ಶನಿವಾರ ಟಾಸ್ ಜಯಿಸಿದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಭಾರತ 48.5 ಓವರ್‌ಗಳಲ್ಲಿ 266 ರನ್‌ಗೆ ಆಲೌಟಾಯಿತು. ಎರಡು ಬಾರಿ ಮಳೆ ಪಂದ್ಯಕ್ಕೆ ಅಡ್ಡಿಪಡಿಸಿದ್ದು ಈ ಮಧ್ಯೆ ಭಾರತವು 66 ರನ್‌ಗೆ 4 ವಿಕೆಟ್‌ಗಳನ್ನು ಕಳೆದುಕೊಂಡು ಅಗ್ರ ಸರದಿಯ ಕುಸಿತಕ್ಕೆ ಒಳಗಾಯಿತು.

ಆಗ ಜೊತೆಯಾದ ವಿಕೆಟ್‌ಕೀಪರ್-ಬ್ಯಾಟರ್ ಕಿಶನ್ ಹಾಗೂ ಆಲ್‌ರೌಂಡರ್ ಪಾಂಡ್ಯ 5ನೇ ವಿಕೆಟ್‌ಗೆ 138 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು. ಇದು 5ನೇ ವಿಕೆಟ್‌ನಲ್ಲಿ ಭಾರತ ಗಳಿಸಿರುವ ಗರಿಷ್ಠ ರನ್ ಜೊತೆಯಾಟವಾಗಿದೆ.

ಕಿಶನ್ 54 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ನೆರವಿನಿಂದ ಏಕದಿನ ಕ್ರಿಕೆಟ್‌ನಲ್ಲಿ 7ನೇ ಅರ್ಧಶತಕ ಪೂರೈಸಿದರು. ಕಿಶನ್ ಔಟಾದ ನಂತರ ಪಾಂಡ್ಯ ಅವರು ರವೀಂದ್ರ ಜಡೇಜ(14 ರನ್) ಜೊತೆ 6ನೇ ವಿಕೆಟ್‌ಗೆ 35 ರನ್ ಸೇರಿಸಿದರು. ಕಿಶನ್‌ಗೆ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ 62 ಎಸೆತಗಳಲ್ಲಿ 3 ಬೌಂಡರಿ ಸಹಾಯದಿಂದ 11ನೇ ಅರ್ಧಶತಕ ಪೂರ್ಣಗೊಳಿಸಿದರು.

ಪಾಕಿಸ್ತಾನದ ಬೌಲಿಂಗ್ ವಿಭಾಗದಲ್ಲಿ ವೇಗಿಗಳಾದ ಶಾಹೀನ್ ಶಾ ಅಫ್ರಿದಿ(4-35) ಯಶಸ್ವಿ ಬೌಲರ್ ಎನಿಸಿಕೊಂಡರು. ಹಾರಿಸ್ ರವೂಫ್(3-58)ಹಾಗೂ ನಸೀಂ ಶಾ(3-36) ತಲಾ 3 ವಿಕೆಟ್‌ಗಳನ್ನು ಪಡೆದರು.

andolanait

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

19 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

20 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

20 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

23 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

2 days ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

2 days ago