ಕ್ರೀಡೆ

ಏಷ್ಯನ್ ಗೇಮ್ಸ್ 2023 : ಬಾಂಗ್ಲಾದೇಶವನ್ನು ಬಗ್ಗು ಬಡಿದು ಫೈನಲ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

ಹ್ಯಾಂಗ್‌ಝೌ : ಚೀನಾದ ಹ್ಯಾಂಗ್‌ಝೌನಲ್ಲಿ ಆಯೋಜಿಸಿರುವ ಏಷ್ಯನ್ ಗೇಮ್ಸ್ 2023ರ ಮಹಿಳಾ ಟಿ20 ಯಲ್ಲಿ ಭಾರತ ಕ್ರಿಕೆಟ್ ತಂಡ ಫೈನಲ್‌ಗೆ ಪ್ರವೇಶಿಸಿದೆ.

ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್‌ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಸ್ಮೃತಿ ಮಂದಾನ ನಾುಂಕತ್ವದ ಭಾರತ ಮಹಿಳಾ ತಂಡ 8 ವಿಕೆಟ್‌ಗಳ ಜಯ ಸಾಧಿಸಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ ತಂಡ ಬಲಿಷ್ಠ ಸ್ಮೃತಿ ಮಂದಾನ ಪಡೆಯ ಬೌಲಿಂಗ್ ಎದುರು ತತ್ತರಿಸಿತು. 17.5 ಓವರ್‌ಗಳಿಗೆ 51 ರನ್ ಗಳಿಸಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. 52 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಭಾರತ 8.2 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಅಲ್ಲದೆ, ಗ್ರ್ಯಾಂಡ್ ಆಗಿ ಫೈನಲ್‌ಗೆ ಎಂಟ್ರಿ ಕೊಟ್ಟಿದೆ.

ಬಾಂಗ್ಲಾ ನೀಡಿದ್ದ ಸಾಧಾರಣ ಗುರಿಯನ್ನು ಬೆಟ್ಟಿದ ಟೀಂ ಇಂಡಿಯಾ ಇನ್ನಿಂಗ್ಸ್‌ನ ನಾಲ್ಕನೇ ಓವರ್‌ನಲ್ಲಿ ನಾಯಕ ಸ್ಮೃತಿ ಮಂದಾನ ವಿಕೆಟ್ ಕಳೆದುಕೊಂಡಿತು. ಕೇವಲ 7 ರನ್ ಗಳಿಸಿ ಮಂದಾನ ವಾರುಫಾ ಅಕ್ಟರ್ ಎಸೆತದಲ್ಲಿ ಶಮೀವಾ ಸುಲ್ತಾನಾಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಆ ಬಳಿಕ ಶಫಾಲಿ ವರ್ವಾ ಮತ್ತು ಜೆಮಿಮ ರಾಡ್ರಿಗಸ್ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಶಫಾಲಿ ವರ್ವಾ ಔಟ್‌ ಆಗದೇ 17 ರನ್ ಗಳಿಸಿ ಜೆಮಿಮ ರಾಡ್ರಿಗಸ್ ಔಟಾಗದೆ 20 ರನ್ ಗಳಿಸಿದರೆ, ಕನಿಕಾ ಅಹುಜಾ 1 ರನ್ ಗಳಿಸಿ ಔಟಾಗದೆ ಉಳಿದರು. ಬಾಂಗ್ಲಾ ಪರ ವಾರುಫಾ ಅಕ್ಟರ್ ಮತ್ತು ಫಾಹಿವಾ ಖಾತುನ್ ತಲಾ 1 ವಿಕೆಟ್ ಪಡೆದರು.

ಮೊದಲು ಬ್ಯಾಟಿಂಗ್ ವಾಡಿದ ಬಾಂಗ್ಲಾದೇಶ ಆಟಗಾರ್ತಿುಂರು ಟೀಂ ಇಂಡಿಾಂದ ಬೌಲರ್‌ಗಳ ಎದುರು ಪೆಲಿವಿುಂನ್ ಪೆರೇಡ್ ನಡೆಸಿದರು. ನಾುಂಕಿ ನಿಗರ್ ಸುಲ್ತಾನಾ ಅವರು 12 ರನ್ ಗಳಿಸಿದ್ದು ಹೊರತುಪಡಿಸಿದರೆ ಬೇರೆ ಯಾವೊಬ್ಬ ಆಟಗಾರ್ತಿಯೂ ಎರಡಂಕಿ ದಾಟಲು ಸಾಧ್ಯವಾಗಲಿಲ್ಲ.

ಶಾತಿ ರಾಣಿ (0), ಶಮೀವಾ ಸುಲ್ತಾನಾ (0), ಸೋಭಾನಾ ಮೊಸ್ತರಿ (8), ಶೋರ್ನಾ ಅಕ್ಟರ್ (0), ರಿತು ಮೋನಿ (8), ಫಾಹಿವಾ ಖಾತುನ್ (೦), ರಬೇಯಾ ಖಾನ್ (3), ಸುಲ್ತಾನ ಖಾತುನ್ (3), ವಾರುಫಾ ಅಕ್ಟರ್ (0), ನಹಿದಾ ಅಕ್ಟರ್ ಔಟಾಗದೆ 9 ರನ್ ಗಳಿಸಿದರು. ಟೀಂ ಇಂಡಿಯಾ ಪರ ಪೂಜಾ ವಸ್ತ್ರಾಕರ್ 4 ಓವರ್‌ಗಳಲ್ಲಿ 17 ರನ್ ನೀಡಿ 4 ವಿಕೆಟ್ ಪಡೆದರು. ಟೈಟಾಸ್ ಸಾಧು, ಅಮಂಜೋತ್ ಕೌರ್, ರಾಜೇಶ್ವರಿ ಗಾಯಕ್ವಾಡ್ ಹಾಗೂ ದೇವಿಕಾ ವೈದ್ಯ ತಲಾ 1 ವಿಕೆಟ್ ಪಡೆದರು.

ಇತ್ತ ಎರಡನೇ ಸೆಮಿ ಫೈನಲ್‌ನಲ್ಲಿ ಪಾಕಿಸ್ತಾನ ಮಹಿಳಾ ತಂಡವನ್ನು ಬಗ್ಗು ಬಡಿದ ಶ್ರೀಲಂಕಾ ಮಹಿಳಾ ತಂಡ ಫೈನಲ್ ತಲುಪಿದೆ. ಭಾರತ ತಂಡ ಪ್ರಶಸ್ತಿ ಸುತ್ತಿನಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಭಾರತಕ್ಕೆ ಮಹಿಳಾ ಕ್ರಿಕೆಟ್ ತಂಡದಿಂದ ಪದಕ ಖಚಿತವಾಗಿದೆ.

lokesh

Recent Posts

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : ಸಿವಿಲ್ ಹುದ್ದೆಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

2 mins ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

46 mins ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

59 mins ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

1 hour ago

ಕಣಿವೆಗೆ ಉರುಳಿದ ಸೇನಾ ವಾಹನ : 10 ಸೈನಿಕರ ಸಾವು

11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…

2 hours ago

‘ಬಿಗ್ ಬಾಸ್’ ಗಿಲ್ಲಿಗೆ ಸಿಎಂ ಅಭಿನಂದನೆ!

ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…

2 hours ago