ಕ್ರೀಡೆ

ಏಷ್ಯನ್ ಗೇಮ್ಸ್ 2023 : ಬಾಂಗ್ಲಾದೇಶವನ್ನು ಬಗ್ಗು ಬಡಿದು ಫೈನಲ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

ಹ್ಯಾಂಗ್‌ಝೌ : ಚೀನಾದ ಹ್ಯಾಂಗ್‌ಝೌನಲ್ಲಿ ಆಯೋಜಿಸಿರುವ ಏಷ್ಯನ್ ಗೇಮ್ಸ್ 2023ರ ಮಹಿಳಾ ಟಿ20 ಯಲ್ಲಿ ಭಾರತ ಕ್ರಿಕೆಟ್ ತಂಡ ಫೈನಲ್‌ಗೆ ಪ್ರವೇಶಿಸಿದೆ.

ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್‌ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಸ್ಮೃತಿ ಮಂದಾನ ನಾುಂಕತ್ವದ ಭಾರತ ಮಹಿಳಾ ತಂಡ 8 ವಿಕೆಟ್‌ಗಳ ಜಯ ಸಾಧಿಸಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ ತಂಡ ಬಲಿಷ್ಠ ಸ್ಮೃತಿ ಮಂದಾನ ಪಡೆಯ ಬೌಲಿಂಗ್ ಎದುರು ತತ್ತರಿಸಿತು. 17.5 ಓವರ್‌ಗಳಿಗೆ 51 ರನ್ ಗಳಿಸಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. 52 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಭಾರತ 8.2 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಅಲ್ಲದೆ, ಗ್ರ್ಯಾಂಡ್ ಆಗಿ ಫೈನಲ್‌ಗೆ ಎಂಟ್ರಿ ಕೊಟ್ಟಿದೆ.

ಬಾಂಗ್ಲಾ ನೀಡಿದ್ದ ಸಾಧಾರಣ ಗುರಿಯನ್ನು ಬೆಟ್ಟಿದ ಟೀಂ ಇಂಡಿಯಾ ಇನ್ನಿಂಗ್ಸ್‌ನ ನಾಲ್ಕನೇ ಓವರ್‌ನಲ್ಲಿ ನಾಯಕ ಸ್ಮೃತಿ ಮಂದಾನ ವಿಕೆಟ್ ಕಳೆದುಕೊಂಡಿತು. ಕೇವಲ 7 ರನ್ ಗಳಿಸಿ ಮಂದಾನ ವಾರುಫಾ ಅಕ್ಟರ್ ಎಸೆತದಲ್ಲಿ ಶಮೀವಾ ಸುಲ್ತಾನಾಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಆ ಬಳಿಕ ಶಫಾಲಿ ವರ್ವಾ ಮತ್ತು ಜೆಮಿಮ ರಾಡ್ರಿಗಸ್ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಶಫಾಲಿ ವರ್ವಾ ಔಟ್‌ ಆಗದೇ 17 ರನ್ ಗಳಿಸಿ ಜೆಮಿಮ ರಾಡ್ರಿಗಸ್ ಔಟಾಗದೆ 20 ರನ್ ಗಳಿಸಿದರೆ, ಕನಿಕಾ ಅಹುಜಾ 1 ರನ್ ಗಳಿಸಿ ಔಟಾಗದೆ ಉಳಿದರು. ಬಾಂಗ್ಲಾ ಪರ ವಾರುಫಾ ಅಕ್ಟರ್ ಮತ್ತು ಫಾಹಿವಾ ಖಾತುನ್ ತಲಾ 1 ವಿಕೆಟ್ ಪಡೆದರು.

ಮೊದಲು ಬ್ಯಾಟಿಂಗ್ ವಾಡಿದ ಬಾಂಗ್ಲಾದೇಶ ಆಟಗಾರ್ತಿುಂರು ಟೀಂ ಇಂಡಿಾಂದ ಬೌಲರ್‌ಗಳ ಎದುರು ಪೆಲಿವಿುಂನ್ ಪೆರೇಡ್ ನಡೆಸಿದರು. ನಾುಂಕಿ ನಿಗರ್ ಸುಲ್ತಾನಾ ಅವರು 12 ರನ್ ಗಳಿಸಿದ್ದು ಹೊರತುಪಡಿಸಿದರೆ ಬೇರೆ ಯಾವೊಬ್ಬ ಆಟಗಾರ್ತಿಯೂ ಎರಡಂಕಿ ದಾಟಲು ಸಾಧ್ಯವಾಗಲಿಲ್ಲ.

ಶಾತಿ ರಾಣಿ (0), ಶಮೀವಾ ಸುಲ್ತಾನಾ (0), ಸೋಭಾನಾ ಮೊಸ್ತರಿ (8), ಶೋರ್ನಾ ಅಕ್ಟರ್ (0), ರಿತು ಮೋನಿ (8), ಫಾಹಿವಾ ಖಾತುನ್ (೦), ರಬೇಯಾ ಖಾನ್ (3), ಸುಲ್ತಾನ ಖಾತುನ್ (3), ವಾರುಫಾ ಅಕ್ಟರ್ (0), ನಹಿದಾ ಅಕ್ಟರ್ ಔಟಾಗದೆ 9 ರನ್ ಗಳಿಸಿದರು. ಟೀಂ ಇಂಡಿಯಾ ಪರ ಪೂಜಾ ವಸ್ತ್ರಾಕರ್ 4 ಓವರ್‌ಗಳಲ್ಲಿ 17 ರನ್ ನೀಡಿ 4 ವಿಕೆಟ್ ಪಡೆದರು. ಟೈಟಾಸ್ ಸಾಧು, ಅಮಂಜೋತ್ ಕೌರ್, ರಾಜೇಶ್ವರಿ ಗಾಯಕ್ವಾಡ್ ಹಾಗೂ ದೇವಿಕಾ ವೈದ್ಯ ತಲಾ 1 ವಿಕೆಟ್ ಪಡೆದರು.

ಇತ್ತ ಎರಡನೇ ಸೆಮಿ ಫೈನಲ್‌ನಲ್ಲಿ ಪಾಕಿಸ್ತಾನ ಮಹಿಳಾ ತಂಡವನ್ನು ಬಗ್ಗು ಬಡಿದ ಶ್ರೀಲಂಕಾ ಮಹಿಳಾ ತಂಡ ಫೈನಲ್ ತಲುಪಿದೆ. ಭಾರತ ತಂಡ ಪ್ರಶಸ್ತಿ ಸುತ್ತಿನಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಭಾರತಕ್ಕೆ ಮಹಿಳಾ ಕ್ರಿಕೆಟ್ ತಂಡದಿಂದ ಪದಕ ಖಚಿತವಾಗಿದೆ.

lokesh

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago