ಹ್ಯಾಂಗ್ಝೌ : ಚೀನಾದ ಹ್ಯಾಂಗ್ಝೌನಲ್ಲಿ ಆಯೋಜಿಸಿರುವ ಏಷ್ಯನ್ ಗೇಮ್ಸ್ 2023ರ ಮಹಿಳಾ ಟಿ20 ಯಲ್ಲಿ ಭಾರತ ಕ್ರಿಕೆಟ್ ತಂಡ ಫೈನಲ್ಗೆ ಪ್ರವೇಶಿಸಿದೆ.
ಪಿಂಗ್ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಸ್ಮೃತಿ ಮಂದಾನ ನಾುಂಕತ್ವದ ಭಾರತ ಮಹಿಳಾ ತಂಡ 8 ವಿಕೆಟ್ಗಳ ಜಯ ಸಾಧಿಸಿ ಫೈನಲ್ಗೆ ಅರ್ಹತೆ ಪಡೆದುಕೊಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ ತಂಡ ಬಲಿಷ್ಠ ಸ್ಮೃತಿ ಮಂದಾನ ಪಡೆಯ ಬೌಲಿಂಗ್ ಎದುರು ತತ್ತರಿಸಿತು. 17.5 ಓವರ್ಗಳಿಗೆ 51 ರನ್ ಗಳಿಸಿ ತನ್ನೆಲ್ಲಾ ವಿಕೆಟ್ಗಳನ್ನು ಕಳೆದುಕೊಂಡಿತು. 52 ರನ್ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಭಾರತ 8.2 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಅಲ್ಲದೆ, ಗ್ರ್ಯಾಂಡ್ ಆಗಿ ಫೈನಲ್ಗೆ ಎಂಟ್ರಿ ಕೊಟ್ಟಿದೆ.
ಬಾಂಗ್ಲಾ ನೀಡಿದ್ದ ಸಾಧಾರಣ ಗುರಿಯನ್ನು ಬೆಟ್ಟಿದ ಟೀಂ ಇಂಡಿಯಾ ಇನ್ನಿಂಗ್ಸ್ನ ನಾಲ್ಕನೇ ಓವರ್ನಲ್ಲಿ ನಾಯಕ ಸ್ಮೃತಿ ಮಂದಾನ ವಿಕೆಟ್ ಕಳೆದುಕೊಂಡಿತು. ಕೇವಲ 7 ರನ್ ಗಳಿಸಿ ಮಂದಾನ ವಾರುಫಾ ಅಕ್ಟರ್ ಎಸೆತದಲ್ಲಿ ಶಮೀವಾ ಸುಲ್ತಾನಾಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಆ ಬಳಿಕ ಶಫಾಲಿ ವರ್ವಾ ಮತ್ತು ಜೆಮಿಮ ರಾಡ್ರಿಗಸ್ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.
ಶಫಾಲಿ ವರ್ವಾ ಔಟ್ ಆಗದೇ 17 ರನ್ ಗಳಿಸಿ ಜೆಮಿಮ ರಾಡ್ರಿಗಸ್ ಔಟಾಗದೆ 20 ರನ್ ಗಳಿಸಿದರೆ, ಕನಿಕಾ ಅಹುಜಾ 1 ರನ್ ಗಳಿಸಿ ಔಟಾಗದೆ ಉಳಿದರು. ಬಾಂಗ್ಲಾ ಪರ ವಾರುಫಾ ಅಕ್ಟರ್ ಮತ್ತು ಫಾಹಿವಾ ಖಾತುನ್ ತಲಾ 1 ವಿಕೆಟ್ ಪಡೆದರು.
ಮೊದಲು ಬ್ಯಾಟಿಂಗ್ ವಾಡಿದ ಬಾಂಗ್ಲಾದೇಶ ಆಟಗಾರ್ತಿುಂರು ಟೀಂ ಇಂಡಿಾಂದ ಬೌಲರ್ಗಳ ಎದುರು ಪೆಲಿವಿುಂನ್ ಪೆರೇಡ್ ನಡೆಸಿದರು. ನಾುಂಕಿ ನಿಗರ್ ಸುಲ್ತಾನಾ ಅವರು 12 ರನ್ ಗಳಿಸಿದ್ದು ಹೊರತುಪಡಿಸಿದರೆ ಬೇರೆ ಯಾವೊಬ್ಬ ಆಟಗಾರ್ತಿಯೂ ಎರಡಂಕಿ ದಾಟಲು ಸಾಧ್ಯವಾಗಲಿಲ್ಲ.
ಶಾತಿ ರಾಣಿ (0), ಶಮೀವಾ ಸುಲ್ತಾನಾ (0), ಸೋಭಾನಾ ಮೊಸ್ತರಿ (8), ಶೋರ್ನಾ ಅಕ್ಟರ್ (0), ರಿತು ಮೋನಿ (8), ಫಾಹಿವಾ ಖಾತುನ್ (೦), ರಬೇಯಾ ಖಾನ್ (3), ಸುಲ್ತಾನ ಖಾತುನ್ (3), ವಾರುಫಾ ಅಕ್ಟರ್ (0), ನಹಿದಾ ಅಕ್ಟರ್ ಔಟಾಗದೆ 9 ರನ್ ಗಳಿಸಿದರು. ಟೀಂ ಇಂಡಿಯಾ ಪರ ಪೂಜಾ ವಸ್ತ್ರಾಕರ್ 4 ಓವರ್ಗಳಲ್ಲಿ 17 ರನ್ ನೀಡಿ 4 ವಿಕೆಟ್ ಪಡೆದರು. ಟೈಟಾಸ್ ಸಾಧು, ಅಮಂಜೋತ್ ಕೌರ್, ರಾಜೇಶ್ವರಿ ಗಾಯಕ್ವಾಡ್ ಹಾಗೂ ದೇವಿಕಾ ವೈದ್ಯ ತಲಾ 1 ವಿಕೆಟ್ ಪಡೆದರು.
ಇತ್ತ ಎರಡನೇ ಸೆಮಿ ಫೈನಲ್ನಲ್ಲಿ ಪಾಕಿಸ್ತಾನ ಮಹಿಳಾ ತಂಡವನ್ನು ಬಗ್ಗು ಬಡಿದ ಶ್ರೀಲಂಕಾ ಮಹಿಳಾ ತಂಡ ಫೈನಲ್ ತಲುಪಿದೆ. ಭಾರತ ತಂಡ ಪ್ರಶಸ್ತಿ ಸುತ್ತಿನಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಭಾರತಕ್ಕೆ ಮಹಿಳಾ ಕ್ರಿಕೆಟ್ ತಂಡದಿಂದ ಪದಕ ಖಚಿತವಾಗಿದೆ.
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…
ವಾಷಿಂಗ್ಟನ್: ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್ ಮತ್ತು ಅಮೇರಿಕಾ ನಡುವಿನ ಒಪ್ಪಂದ್ ನಂತರ ಶುಕ್ರವಾರದಿಂದ ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…
ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…