ಕ್ರೀಡೆ

ಏಷ್ಯನ್ ಗೇಮ್ಸ್ 2023 : ಬಾಂಗ್ಲಾದೇಶವನ್ನು ಬಗ್ಗು ಬಡಿದು ಫೈನಲ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

ಹ್ಯಾಂಗ್‌ಝೌ : ಚೀನಾದ ಹ್ಯಾಂಗ್‌ಝೌನಲ್ಲಿ ಆಯೋಜಿಸಿರುವ ಏಷ್ಯನ್ ಗೇಮ್ಸ್ 2023ರ ಮಹಿಳಾ ಟಿ20 ಯಲ್ಲಿ ಭಾರತ ಕ್ರಿಕೆಟ್ ತಂಡ ಫೈನಲ್‌ಗೆ ಪ್ರವೇಶಿಸಿದೆ.

ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್‌ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಸ್ಮೃತಿ ಮಂದಾನ ನಾುಂಕತ್ವದ ಭಾರತ ಮಹಿಳಾ ತಂಡ 8 ವಿಕೆಟ್‌ಗಳ ಜಯ ಸಾಧಿಸಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ ತಂಡ ಬಲಿಷ್ಠ ಸ್ಮೃತಿ ಮಂದಾನ ಪಡೆಯ ಬೌಲಿಂಗ್ ಎದುರು ತತ್ತರಿಸಿತು. 17.5 ಓವರ್‌ಗಳಿಗೆ 51 ರನ್ ಗಳಿಸಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. 52 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಭಾರತ 8.2 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಅಲ್ಲದೆ, ಗ್ರ್ಯಾಂಡ್ ಆಗಿ ಫೈನಲ್‌ಗೆ ಎಂಟ್ರಿ ಕೊಟ್ಟಿದೆ.

ಬಾಂಗ್ಲಾ ನೀಡಿದ್ದ ಸಾಧಾರಣ ಗುರಿಯನ್ನು ಬೆಟ್ಟಿದ ಟೀಂ ಇಂಡಿಯಾ ಇನ್ನಿಂಗ್ಸ್‌ನ ನಾಲ್ಕನೇ ಓವರ್‌ನಲ್ಲಿ ನಾಯಕ ಸ್ಮೃತಿ ಮಂದಾನ ವಿಕೆಟ್ ಕಳೆದುಕೊಂಡಿತು. ಕೇವಲ 7 ರನ್ ಗಳಿಸಿ ಮಂದಾನ ವಾರುಫಾ ಅಕ್ಟರ್ ಎಸೆತದಲ್ಲಿ ಶಮೀವಾ ಸುಲ್ತಾನಾಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಆ ಬಳಿಕ ಶಫಾಲಿ ವರ್ವಾ ಮತ್ತು ಜೆಮಿಮ ರಾಡ್ರಿಗಸ್ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಶಫಾಲಿ ವರ್ವಾ ಔಟ್‌ ಆಗದೇ 17 ರನ್ ಗಳಿಸಿ ಜೆಮಿಮ ರಾಡ್ರಿಗಸ್ ಔಟಾಗದೆ 20 ರನ್ ಗಳಿಸಿದರೆ, ಕನಿಕಾ ಅಹುಜಾ 1 ರನ್ ಗಳಿಸಿ ಔಟಾಗದೆ ಉಳಿದರು. ಬಾಂಗ್ಲಾ ಪರ ವಾರುಫಾ ಅಕ್ಟರ್ ಮತ್ತು ಫಾಹಿವಾ ಖಾತುನ್ ತಲಾ 1 ವಿಕೆಟ್ ಪಡೆದರು.

ಮೊದಲು ಬ್ಯಾಟಿಂಗ್ ವಾಡಿದ ಬಾಂಗ್ಲಾದೇಶ ಆಟಗಾರ್ತಿುಂರು ಟೀಂ ಇಂಡಿಾಂದ ಬೌಲರ್‌ಗಳ ಎದುರು ಪೆಲಿವಿುಂನ್ ಪೆರೇಡ್ ನಡೆಸಿದರು. ನಾುಂಕಿ ನಿಗರ್ ಸುಲ್ತಾನಾ ಅವರು 12 ರನ್ ಗಳಿಸಿದ್ದು ಹೊರತುಪಡಿಸಿದರೆ ಬೇರೆ ಯಾವೊಬ್ಬ ಆಟಗಾರ್ತಿಯೂ ಎರಡಂಕಿ ದಾಟಲು ಸಾಧ್ಯವಾಗಲಿಲ್ಲ.

ಶಾತಿ ರಾಣಿ (0), ಶಮೀವಾ ಸುಲ್ತಾನಾ (0), ಸೋಭಾನಾ ಮೊಸ್ತರಿ (8), ಶೋರ್ನಾ ಅಕ್ಟರ್ (0), ರಿತು ಮೋನಿ (8), ಫಾಹಿವಾ ಖಾತುನ್ (೦), ರಬೇಯಾ ಖಾನ್ (3), ಸುಲ್ತಾನ ಖಾತುನ್ (3), ವಾರುಫಾ ಅಕ್ಟರ್ (0), ನಹಿದಾ ಅಕ್ಟರ್ ಔಟಾಗದೆ 9 ರನ್ ಗಳಿಸಿದರು. ಟೀಂ ಇಂಡಿಯಾ ಪರ ಪೂಜಾ ವಸ್ತ್ರಾಕರ್ 4 ಓವರ್‌ಗಳಲ್ಲಿ 17 ರನ್ ನೀಡಿ 4 ವಿಕೆಟ್ ಪಡೆದರು. ಟೈಟಾಸ್ ಸಾಧು, ಅಮಂಜೋತ್ ಕೌರ್, ರಾಜೇಶ್ವರಿ ಗಾಯಕ್ವಾಡ್ ಹಾಗೂ ದೇವಿಕಾ ವೈದ್ಯ ತಲಾ 1 ವಿಕೆಟ್ ಪಡೆದರು.

ಇತ್ತ ಎರಡನೇ ಸೆಮಿ ಫೈನಲ್‌ನಲ್ಲಿ ಪಾಕಿಸ್ತಾನ ಮಹಿಳಾ ತಂಡವನ್ನು ಬಗ್ಗು ಬಡಿದ ಶ್ರೀಲಂಕಾ ಮಹಿಳಾ ತಂಡ ಫೈನಲ್ ತಲುಪಿದೆ. ಭಾರತ ತಂಡ ಪ್ರಶಸ್ತಿ ಸುತ್ತಿನಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಭಾರತಕ್ಕೆ ಮಹಿಳಾ ಕ್ರಿಕೆಟ್ ತಂಡದಿಂದ ಪದಕ ಖಚಿತವಾಗಿದೆ.

lokesh

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago