ಕ್ರೀಡೆ

ಏಷ್ಯನ್‌ ಗೇಮ್ಸ್‌| ಬಾಕ್ಸಿಂಗ್: ಒಲಿಂಪಿಕ್ಸ್ ನೇರ ಅರ್ಹತೆ ಪಡೆದ ಪ್ರೀತಿ ಪವಾರ್‌

ಹಾಂಗ್‌ಝೌ : ಭಾರತದ ಪ್ರೀತಿ ಪವಾರ್ ಅವರೂ ಬಾಕ್ಸಿಂಗ್‌ನಲ್ಲಿ ಪ್ಯಾರಿಸ್ ಒಲಿಂಪಿಕ್ಸ್‌ಗೆ ಕೋಟಾ ಗಿಟ್ಟಿಸಿದರು. ಅವರೊಂದಿಗೆ, ಲವಿನಾ ಬೋರ್ಗೊಹೈನ್ ಕೂಡ ಶನಿವಾರ ಸೆಮಿಫೈನಲ್ ತಲುಪುವ ಮೂಲಕ ಏಷ್ಯನ್ ಕ್ರೀಡಾಕೂಟದ ಬಾಕ್ಸಿಂಗ್‌ನಲ್ಲಿ ಭಾರತಕ್ಕೆ ಪದಕಗಳನ್ನು ಖಚಿಪಡಿಸಿಕೊಂಡರು.

19 ವರ್ಷದ ಪ್ರೀತಿ 54 ಕೆ.ಜಿ. ವಿಭಾಗದಲ್ಲಿ ಆತ್ಮವಿಶ್ವಾಸದಿಂದ ಕಣಕ್ಕಿಳಿದು ಏಷ್ಯನ್ ಚಾಂಪಿಯನ್ ಆಗಿರುವ ಕಜಕಸ್ತಾನದ ಮೈನಾ ಶೇಖೆರ್‌ಬೆಕೋವಾ ಅವರನ್ನು ಉತ್ತಮ ಹಣಾಹಣಿಯ ಹೋರಾಟದಲ್ಲಿ 4-1 ರಿಂದ ಸೋಲಿಸಿದರು. ಶೇಖೆರ್‌ಬೆಕೋವಾ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಮೂರು ಬಾರಿ ಪದಕ ಗೆದ್ದುಕೊಂಡಿದ್ದಾರೆ.

75 ಕೆ.ಜಿ. ವಿಭಾಗದ ಮೊದಲ ಸುತ್ತಿನಲ್ಲಿ ಬೈ ಪಡೆದಿದ್ದ, ಟೋಕಿಯೊ ಒಲಿಂಪಿಕ್ಸ್‌ನ ಕಂಚಿನ ಪದಕ ವಿಜೇತೆ ಲವಿನಾ ನಿರೀಕ್ಷೆಯಂತೆ ದಕ್ಷಿಣ ಕೊರಿಯದ ಸಿಯೊಂಗ್ ಸುಯೋನ್ ಅವರನ್ನು 5-0 ಯಿಂದ ರೆಫ್ರಿಗಳ ಒಮ್ಮತದ ನಿರ್ಧಾರದಲ್ಲಿ ಜಯಗಳಿಸಿದರು. ಈ ವಿಭಾಗದಲ್ಲಿ ಫೈನಲ್ ತಲುಪಿದರೆ ಲವಿನಾ ಅವರೂ ಒಲಿಂಪಿಕ್ ಕೋಟಾಕ್ಕೆ ಅರ್ಹರಾಗುತ್ತಾರೆ.

ನಿಖತ್ ಝರೀನ್ ಅವರು ಶುಕ್ರವಾರ ಈ ಕೂಟದಲ್ಲಿ ಒಲಿಂಪಿಕ್ ಕೋಟಾದಡಿ ಅರ್ಹತೆ ಪಡೆದ ಭಾರತದ ಮೊದಲ ಬಾಕ್ಸರ್ ಎನಿಸಿದ್ದರು.

ಮಹಿಳೆಯರ ವಿಭಾಗದ ಸ್ಪರ್ಧೆಗಳಲ್ಲಿ 50 ಕೆ.ಜಿ., 54 ಕೆ.ಜಿ, 57 ಕೆ.ಜಿ. ಮತ್ತು 60 ಕೆ.ಜಿ. ವಿಭಾಗಗಳಲ್ಲಿ ಸೆಮಿಫೈನಲ್ ತಲುಪಿದವರು ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುತ್ತಾರೆ. 66 ಕೆ.ಜಿ. 75 ಕೆ.ಜಿ. ವಿಭಾಗದಲ್ಲಿ ಫೈನಲ್ ತಲುಪಿದವರು ಮಾತ್ರ ಅರ್ಹತೆ ಪಡೆಯುತ್ತಾರೆ.

ಪುರುಷರ ವಿಭಾಗದ ಏಳು ತೂಕ ವಿಭಾಗಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಪದಕ ಗೆದ್ದ ಬಾಕ್ಸಿಂಗ್ ಪಟುಗಳು ಒಲಿಂಪಿಕ್ಸ್ ಕೋಟಾದಡಿ ಆಯ್ಕೆಯಾಗುತ್ತಾರೆ.

andolanait

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

3 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

4 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

4 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

4 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

4 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

4 hours ago