ಕ್ರೀಡೆ

ಏಷ್ಯನ್‌ ಗೇಮ್ಸ್‌| ಬಾಕ್ಸಿಂಗ್: ಒಲಿಂಪಿಕ್ಸ್ ನೇರ ಅರ್ಹತೆ ಪಡೆದ ಪ್ರೀತಿ ಪವಾರ್‌

ಹಾಂಗ್‌ಝೌ : ಭಾರತದ ಪ್ರೀತಿ ಪವಾರ್ ಅವರೂ ಬಾಕ್ಸಿಂಗ್‌ನಲ್ಲಿ ಪ್ಯಾರಿಸ್ ಒಲಿಂಪಿಕ್ಸ್‌ಗೆ ಕೋಟಾ ಗಿಟ್ಟಿಸಿದರು. ಅವರೊಂದಿಗೆ, ಲವಿನಾ ಬೋರ್ಗೊಹೈನ್ ಕೂಡ ಶನಿವಾರ ಸೆಮಿಫೈನಲ್ ತಲುಪುವ ಮೂಲಕ ಏಷ್ಯನ್ ಕ್ರೀಡಾಕೂಟದ ಬಾಕ್ಸಿಂಗ್‌ನಲ್ಲಿ ಭಾರತಕ್ಕೆ ಪದಕಗಳನ್ನು ಖಚಿಪಡಿಸಿಕೊಂಡರು.

19 ವರ್ಷದ ಪ್ರೀತಿ 54 ಕೆ.ಜಿ. ವಿಭಾಗದಲ್ಲಿ ಆತ್ಮವಿಶ್ವಾಸದಿಂದ ಕಣಕ್ಕಿಳಿದು ಏಷ್ಯನ್ ಚಾಂಪಿಯನ್ ಆಗಿರುವ ಕಜಕಸ್ತಾನದ ಮೈನಾ ಶೇಖೆರ್‌ಬೆಕೋವಾ ಅವರನ್ನು ಉತ್ತಮ ಹಣಾಹಣಿಯ ಹೋರಾಟದಲ್ಲಿ 4-1 ರಿಂದ ಸೋಲಿಸಿದರು. ಶೇಖೆರ್‌ಬೆಕೋವಾ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಮೂರು ಬಾರಿ ಪದಕ ಗೆದ್ದುಕೊಂಡಿದ್ದಾರೆ.

75 ಕೆ.ಜಿ. ವಿಭಾಗದ ಮೊದಲ ಸುತ್ತಿನಲ್ಲಿ ಬೈ ಪಡೆದಿದ್ದ, ಟೋಕಿಯೊ ಒಲಿಂಪಿಕ್ಸ್‌ನ ಕಂಚಿನ ಪದಕ ವಿಜೇತೆ ಲವಿನಾ ನಿರೀಕ್ಷೆಯಂತೆ ದಕ್ಷಿಣ ಕೊರಿಯದ ಸಿಯೊಂಗ್ ಸುಯೋನ್ ಅವರನ್ನು 5-0 ಯಿಂದ ರೆಫ್ರಿಗಳ ಒಮ್ಮತದ ನಿರ್ಧಾರದಲ್ಲಿ ಜಯಗಳಿಸಿದರು. ಈ ವಿಭಾಗದಲ್ಲಿ ಫೈನಲ್ ತಲುಪಿದರೆ ಲವಿನಾ ಅವರೂ ಒಲಿಂಪಿಕ್ ಕೋಟಾಕ್ಕೆ ಅರ್ಹರಾಗುತ್ತಾರೆ.

ನಿಖತ್ ಝರೀನ್ ಅವರು ಶುಕ್ರವಾರ ಈ ಕೂಟದಲ್ಲಿ ಒಲಿಂಪಿಕ್ ಕೋಟಾದಡಿ ಅರ್ಹತೆ ಪಡೆದ ಭಾರತದ ಮೊದಲ ಬಾಕ್ಸರ್ ಎನಿಸಿದ್ದರು.

ಮಹಿಳೆಯರ ವಿಭಾಗದ ಸ್ಪರ್ಧೆಗಳಲ್ಲಿ 50 ಕೆ.ಜಿ., 54 ಕೆ.ಜಿ, 57 ಕೆ.ಜಿ. ಮತ್ತು 60 ಕೆ.ಜಿ. ವಿಭಾಗಗಳಲ್ಲಿ ಸೆಮಿಫೈನಲ್ ತಲುಪಿದವರು ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುತ್ತಾರೆ. 66 ಕೆ.ಜಿ. 75 ಕೆ.ಜಿ. ವಿಭಾಗದಲ್ಲಿ ಫೈನಲ್ ತಲುಪಿದವರು ಮಾತ್ರ ಅರ್ಹತೆ ಪಡೆಯುತ್ತಾರೆ.

ಪುರುಷರ ವಿಭಾಗದ ಏಳು ತೂಕ ವಿಭಾಗಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಪದಕ ಗೆದ್ದ ಬಾಕ್ಸಿಂಗ್ ಪಟುಗಳು ಒಲಿಂಪಿಕ್ಸ್ ಕೋಟಾದಡಿ ಆಯ್ಕೆಯಾಗುತ್ತಾರೆ.

andolanait

Recent Posts

ಬಿಜೆಪಿ ಹೋರಾಟ ನಡೆಸಬೇಕಾಗಿದ್ದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು…

23 mins ago

ಶಾಲಾ ಬಸ್ ತಡೆದು ಬಾಲಕಿಯನ್ನು ವಶಕ್ಕೆ ನೀಡುವಂತೆ ಕಿರಿಕ್: ಪುಂಡರಿಬ್ಬರ ಬಂಧನ

ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್…

33 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸಿ

ಇತ್ತೀಚೆಗೆ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ ಅನೇಕ ಸರ್ಕಾರಿ ಶಾಲೆಗಳು ಹಳೆಯ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡು…

36 mins ago

ಓದುಗರ ಪತ್ರ:  ರಷ್ಯಾ-ಭಾರತ ಇನ್ನೂ ಹತ್ತಿರ

ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ…

1 hour ago

ಓದುಗರ ಪತ್ರ: ಸೋಲಾರ್ ಕೃಷಿ ಪಂಪ್ ಸೆಟ್ ಸಬ್ಸಿಡಿ ಸದ್ಬಳಕೆಯಾಗಲಿ

ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…

1 hour ago

ಕಾಡುಪ್ರಾಣಿಗಳಿಗೆ ಪ್ರತಿನಿತ್ಯ ಒಂದು ಹಸು ಬಲಿ!

ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…

2 hours ago