ಕ್ರೀಡೆ

ಏಷ್ಯನ್‌ ಗೇಮ್ಸ್‌: ಭಾರತಕ್ಕೆ ಗ್ರೀಕೊ ರೋಮನ್ ಕುಸ್ತಿಯಲ್ಲಿ ಕಂಚು

ಹಾಂಗ್‌ಝೌ : ಗ್ರೀಕೊ ರೋಮನ್ ಕುಸ್ತಿ ಸ್ಪರ್ಧೆಯಲ್ಲಿ ಭಾರತಕ್ಕೆ 13 ವರ್ಷಗಳ ನಂತರ ಪದಕ ದೊರಕಿದೆ.

ಏಷ್ಯನ್ ಗೇಮ್ಸ್ 2023ರ ಕ್ರೀಡಾಕೂಟದಲ್ಲಿ ಪುರುಷರ 87 ಕೆ.ಜಿ ಗ್ರೀಕೊ ರೋಮನ್ ಕುಸ್ತಿ ವಿಭಾಗದಲ್ಲಿ ಭಾರತದ ಸುನಿಲ್ ಕುಮಾರ್ ಕಂಚಿನ ಪದಕ ಜಯಿಸಿದ್ದಾರೆ.

ಚಾಣಕ್ಯತನ ಮೆರೆದ ಭಾರತೀಯ ಸ್ಪರ್ಧಿ ಕಿರ್ಗಿಸ್ತಾನದ ಅಟಾಬೆಕ್ ಅಜಿಸ್ಟೆಕೋವ್ ವಿರುದ್ಧ ಗೆಲುವು ಸಾಧಿಸಿದರು.

ಈ ಹಿಂದೆ 2010ರ ಏಷ್ಯನ್ ಗೇಮ್ಸ್‌ನಲ್ಲಿ ಗ್ರೀಕೊ ರೋಮನ್ ವಿಭಾಗದಲ್ಲಿ ಭಾರತದ ರವಿಂದರ್‌ ಸಿಂಗ್ (60 ಕೆ.ಜಿ) ಮತ್ತು ಸುನಿಲ್ ಕುಮಾರ್ ರಾಣಾ (66 ಕೆ.ಜಿ) ಕಂಚಿನ ಪದಕ ಜಯಿಸಿದ್ದರು.

ಸಾಬ್ಬಿಗೆ ಬೆಳ್ಳಿ

ಪುರುಷರ 5000 ಮೀ ಓಟದಲ್ಲಿ ಆನಿನಾಶ್ ಸಾಚ್ಚೆ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಮತ್ತೊಂದೆಡೆ 800 ಮೀ ಮಹಿಳೆಯರ ಓಟದಲ್ಲಿ ಹರ್ಮಿಲನ್ ಬೆಸ್ಟ್‌ ಬೆಳ್ಳಿ ಪದಕ ಜಯಿಸಿದ್ದಾರೆ.

ಭಾರತ ಐತಿಹಾಸಿಕ ಸಾಧನೆ :

ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಸ್ಪರ್ಧಿಗಳು ಬುಧವಾರ ಮೂರು ಚಿನ್ನ ಸೇರಿದಂತೆ ಒಟ್ಟು 12 ಪದಕಗಳನ್ನು ಗೆದ್ದಿದ್ದಾರೆ. ಈ ಮೂಲಕ ಭಾರತವು 81 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಮುಂದುವರಿದಿದೆ. ಇದು ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲೇ ಭಾರತದ ಸರ್ವಶ್ರೇಷ್ಠ ಸಾಧನೆಯಾಗಿದೆ.

andolanait

Recent Posts

ರಾಮನಗರದಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೇ ಒಂದೇ ಕುಟುಂಬದ ಮೂವರು ಸಾವು

ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ. ಗ್ಯಾಸ್‌…

37 mins ago

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

4 hours ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

4 hours ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

5 hours ago

ಶತಮಾನದ ದೇವರಾಜ ಶಾಲೆಯ ಶೋಕಗೀತೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…

5 hours ago