ಕ್ರೀಡೆ

ಏಷ್ಯನ್‌ ಗೇಮ್ಸ್‌: ಸ್ಕ್ಯಾಷ್‌ನಲ್ಲಿ ಭಾರತಕ್ಕೆ ಕಂಚಿನ ಪದಕ-ಮತ್ತೊಂದು ತಂಡ ಫೈನಲ್‌ಗೆ

ಹಾಂಗ್‌ಝೌ : ಭಾರತದ ಅನಾಹತ್ ಸಿಂಗ್ ಹಾಗೂ ಅಭಯ್ ಸಿಂಗ್ ಜೋಡಿ ಏಷ್ಯನ್ ಕ್ರೀಡಾಕೂಟದ ಸ್ಮಾಷ್ ಸ್ಪರ್ಧೆಯ ಮಿಕ್ಸೆಡ್ ಡಬಲ್ಸ್ ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ ಮುಗ್ಗರಿಸಿತು. ಆದಾಗ್ಯೂ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು.

ಮಲೇಷ್ಯಾದ ಐಫಾ ಬಿಂಟಿ ಅಜಂ ಮತ್ತು ಮೊಹಮ್ಮದ್ ಸೈಫಿಕ್ ಕಮಾಲ್ ಅವರಿಂದ ಕಠಿಣ ಪೈಪೋಟಿ ಎದುರಿಸಿದ ಭಾರತದ ಜೋಡಿ 39 ನಿಮಿಷ ನಡೆದ ಹಣಾಹಣಿಯಲ್ಲಿ 11-8, 2-11, 9-11 ಅಂತರದಿಂದ ಸೋಲೊಪ್ಪಿಕೊಂಡಿತು.

ಇದೇ ದಿನ ನಡೆದ ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ಭಾರತದವರೇ ಆದ ದೀಪಿಕಾ ಪಲ್ಲಿಕಲ್ ಮತ್ತು ಹರಿಂದರ್ ಪಾಲ್ ಸಿಂಗ್ ಜೋಡಿ ಹಾಂಗ್ ಕಾಂಗ್ ಆಟಗಾರರ ಎದುರು ಜಯ ಸಾಧಿಸಿದೆ. ಫೈನಲ್‌ಗೆ ಲಗ್ಗೆ ಇಟ್ಟಿರುವ ಈ ತಂಡ ಮತ್ತೊಂದು ಪದಕವನ್ನು ಖಾತ್ರಿಪಡಿಸಿದೆ.

ಅನಾಹತ್‌ ಹಾಗೂ ಅಭಯ್ ಗಳಿಸಿದ ಪದಕವು, ಈ ಬಾರಿಯ ಕ್ರೀಡಾಕೂಟದಲ್ಲಿ ಭಾರತಕ್ಕೆ ದೊರೆತ 70ನೇ ಪದಕ. 2018ರಲ್ಲಿ ಇಂಡೊನೇಷ್ಯಾದಲ್ಲಿ ನಡೆದಿದ್ದ ಕೂಟದಲ್ಲಿ 70 ಪದಕ ಗಳಿಸಿದ್ದು ಭಾರತದ ಶ್ರೇಷ್ಠ ಸಾಧನೆಯಾಗಿತ್ತು.

andolanait

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

6 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

6 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

7 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

7 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

7 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

7 hours ago