ಕ್ರೀಡೆ

ಏಷ್ಯನ್‌ ಗೇಮ್ಸ್‌: ಸ್ಕ್ಯಾಷ್‌ನಲ್ಲಿ ಭಾರತಕ್ಕೆ ಕಂಚಿನ ಪದಕ-ಮತ್ತೊಂದು ತಂಡ ಫೈನಲ್‌ಗೆ

ಹಾಂಗ್‌ಝೌ : ಭಾರತದ ಅನಾಹತ್ ಸಿಂಗ್ ಹಾಗೂ ಅಭಯ್ ಸಿಂಗ್ ಜೋಡಿ ಏಷ್ಯನ್ ಕ್ರೀಡಾಕೂಟದ ಸ್ಮಾಷ್ ಸ್ಪರ್ಧೆಯ ಮಿಕ್ಸೆಡ್ ಡಬಲ್ಸ್ ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ ಮುಗ್ಗರಿಸಿತು. ಆದಾಗ್ಯೂ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು.

ಮಲೇಷ್ಯಾದ ಐಫಾ ಬಿಂಟಿ ಅಜಂ ಮತ್ತು ಮೊಹಮ್ಮದ್ ಸೈಫಿಕ್ ಕಮಾಲ್ ಅವರಿಂದ ಕಠಿಣ ಪೈಪೋಟಿ ಎದುರಿಸಿದ ಭಾರತದ ಜೋಡಿ 39 ನಿಮಿಷ ನಡೆದ ಹಣಾಹಣಿಯಲ್ಲಿ 11-8, 2-11, 9-11 ಅಂತರದಿಂದ ಸೋಲೊಪ್ಪಿಕೊಂಡಿತು.

ಇದೇ ದಿನ ನಡೆದ ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ಭಾರತದವರೇ ಆದ ದೀಪಿಕಾ ಪಲ್ಲಿಕಲ್ ಮತ್ತು ಹರಿಂದರ್ ಪಾಲ್ ಸಿಂಗ್ ಜೋಡಿ ಹಾಂಗ್ ಕಾಂಗ್ ಆಟಗಾರರ ಎದುರು ಜಯ ಸಾಧಿಸಿದೆ. ಫೈನಲ್‌ಗೆ ಲಗ್ಗೆ ಇಟ್ಟಿರುವ ಈ ತಂಡ ಮತ್ತೊಂದು ಪದಕವನ್ನು ಖಾತ್ರಿಪಡಿಸಿದೆ.

ಅನಾಹತ್‌ ಹಾಗೂ ಅಭಯ್ ಗಳಿಸಿದ ಪದಕವು, ಈ ಬಾರಿಯ ಕ್ರೀಡಾಕೂಟದಲ್ಲಿ ಭಾರತಕ್ಕೆ ದೊರೆತ 70ನೇ ಪದಕ. 2018ರಲ್ಲಿ ಇಂಡೊನೇಷ್ಯಾದಲ್ಲಿ ನಡೆದಿದ್ದ ಕೂಟದಲ್ಲಿ 70 ಪದಕ ಗಳಿಸಿದ್ದು ಭಾರತದ ಶ್ರೇಷ್ಠ ಸಾಧನೆಯಾಗಿತ್ತು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago