ಕ್ರೀಡೆ

ಏಷ್ಯನ್‌ ಗೇಮ್ಸ್‌: ಸ್ಕ್ಯಾಷ್‌ನಲ್ಲಿ ಭಾರತಕ್ಕೆ ಕಂಚಿನ ಪದಕ-ಮತ್ತೊಂದು ತಂಡ ಫೈನಲ್‌ಗೆ

ಹಾಂಗ್‌ಝೌ : ಭಾರತದ ಅನಾಹತ್ ಸಿಂಗ್ ಹಾಗೂ ಅಭಯ್ ಸಿಂಗ್ ಜೋಡಿ ಏಷ್ಯನ್ ಕ್ರೀಡಾಕೂಟದ ಸ್ಮಾಷ್ ಸ್ಪರ್ಧೆಯ ಮಿಕ್ಸೆಡ್ ಡಬಲ್ಸ್ ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ ಮುಗ್ಗರಿಸಿತು. ಆದಾಗ್ಯೂ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು.

ಮಲೇಷ್ಯಾದ ಐಫಾ ಬಿಂಟಿ ಅಜಂ ಮತ್ತು ಮೊಹಮ್ಮದ್ ಸೈಫಿಕ್ ಕಮಾಲ್ ಅವರಿಂದ ಕಠಿಣ ಪೈಪೋಟಿ ಎದುರಿಸಿದ ಭಾರತದ ಜೋಡಿ 39 ನಿಮಿಷ ನಡೆದ ಹಣಾಹಣಿಯಲ್ಲಿ 11-8, 2-11, 9-11 ಅಂತರದಿಂದ ಸೋಲೊಪ್ಪಿಕೊಂಡಿತು.

ಇದೇ ದಿನ ನಡೆದ ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ಭಾರತದವರೇ ಆದ ದೀಪಿಕಾ ಪಲ್ಲಿಕಲ್ ಮತ್ತು ಹರಿಂದರ್ ಪಾಲ್ ಸಿಂಗ್ ಜೋಡಿ ಹಾಂಗ್ ಕಾಂಗ್ ಆಟಗಾರರ ಎದುರು ಜಯ ಸಾಧಿಸಿದೆ. ಫೈನಲ್‌ಗೆ ಲಗ್ಗೆ ಇಟ್ಟಿರುವ ಈ ತಂಡ ಮತ್ತೊಂದು ಪದಕವನ್ನು ಖಾತ್ರಿಪಡಿಸಿದೆ.

ಅನಾಹತ್‌ ಹಾಗೂ ಅಭಯ್ ಗಳಿಸಿದ ಪದಕವು, ಈ ಬಾರಿಯ ಕ್ರೀಡಾಕೂಟದಲ್ಲಿ ಭಾರತಕ್ಕೆ ದೊರೆತ 70ನೇ ಪದಕ. 2018ರಲ್ಲಿ ಇಂಡೊನೇಷ್ಯಾದಲ್ಲಿ ನಡೆದಿದ್ದ ಕೂಟದಲ್ಲಿ 70 ಪದಕ ಗಳಿಸಿದ್ದು ಭಾರತದ ಶ್ರೇಷ್ಠ ಸಾಧನೆಯಾಗಿತ್ತು.

andolanait

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

3 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

4 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

5 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

5 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

6 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

6 hours ago