ಕ್ರೀಡೆ

ಏಷ್ಯನ್‌ ಗೇಮ್ಸ್‌: ಸ್ಕ್ಯಾಷ್‌ನಲ್ಲಿ ಭಾರತಕ್ಕೆ ಕಂಚಿನ ಪದಕ-ಮತ್ತೊಂದು ತಂಡ ಫೈನಲ್‌ಗೆ

ಹಾಂಗ್‌ಝೌ : ಭಾರತದ ಅನಾಹತ್ ಸಿಂಗ್ ಹಾಗೂ ಅಭಯ್ ಸಿಂಗ್ ಜೋಡಿ ಏಷ್ಯನ್ ಕ್ರೀಡಾಕೂಟದ ಸ್ಮಾಷ್ ಸ್ಪರ್ಧೆಯ ಮಿಕ್ಸೆಡ್ ಡಬಲ್ಸ್ ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ ಮುಗ್ಗರಿಸಿತು. ಆದಾಗ್ಯೂ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು.

ಮಲೇಷ್ಯಾದ ಐಫಾ ಬಿಂಟಿ ಅಜಂ ಮತ್ತು ಮೊಹಮ್ಮದ್ ಸೈಫಿಕ್ ಕಮಾಲ್ ಅವರಿಂದ ಕಠಿಣ ಪೈಪೋಟಿ ಎದುರಿಸಿದ ಭಾರತದ ಜೋಡಿ 39 ನಿಮಿಷ ನಡೆದ ಹಣಾಹಣಿಯಲ್ಲಿ 11-8, 2-11, 9-11 ಅಂತರದಿಂದ ಸೋಲೊಪ್ಪಿಕೊಂಡಿತು.

ಇದೇ ದಿನ ನಡೆದ ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ಭಾರತದವರೇ ಆದ ದೀಪಿಕಾ ಪಲ್ಲಿಕಲ್ ಮತ್ತು ಹರಿಂದರ್ ಪಾಲ್ ಸಿಂಗ್ ಜೋಡಿ ಹಾಂಗ್ ಕಾಂಗ್ ಆಟಗಾರರ ಎದುರು ಜಯ ಸಾಧಿಸಿದೆ. ಫೈನಲ್‌ಗೆ ಲಗ್ಗೆ ಇಟ್ಟಿರುವ ಈ ತಂಡ ಮತ್ತೊಂದು ಪದಕವನ್ನು ಖಾತ್ರಿಪಡಿಸಿದೆ.

ಅನಾಹತ್‌ ಹಾಗೂ ಅಭಯ್ ಗಳಿಸಿದ ಪದಕವು, ಈ ಬಾರಿಯ ಕ್ರೀಡಾಕೂಟದಲ್ಲಿ ಭಾರತಕ್ಕೆ ದೊರೆತ 70ನೇ ಪದಕ. 2018ರಲ್ಲಿ ಇಂಡೊನೇಷ್ಯಾದಲ್ಲಿ ನಡೆದಿದ್ದ ಕೂಟದಲ್ಲಿ 70 ಪದಕ ಗಳಿಸಿದ್ದು ಭಾರತದ ಶ್ರೇಷ್ಠ ಸಾಧನೆಯಾಗಿತ್ತು.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

8 hours ago