ಕ್ರೀಡೆ

ಏಷ್ಯನ್‌ ಗೇಮ್ಸ್‌: ಕ್ರಿಕೆಟ್‌- ಬಾಂಗ್ಲಾ ಬಗ್ಗು ಬಡಿದು ಫೈನಲ್‌ಗೆ ಲಗ್ಗೆಯಿಟ್ಟ ಭಾರತ

ಹಾಂಗ್‌ಝೌ: ಋತುರಾಜ್‌ ಗಾಯಕ್ವಾಡ್‌ ಸಾರಥ್ಯದ ಟೀಮ್ ಇಂಡಿಯಾ, 2023ರ ಸಾಲಿನ ಏಷ್ಯನ್ ಗೇಮ್ಸ್‌ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಫೈನಲ್‌ಗೆ ದಾಪುಗಾಲಿಟ್ಟಿದೆ. ಶುಕ್ರವಾರ (ಅ. 6) ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 9 ವಿಕೆಟ್‌ಗಳಿಂದ ಬಗ್ಗುಬಡಿದು ಫೈನಲ್‌ಗೆ ದಾಪುಗಾಲಿಟ್ಟಿದೆ.

ಇಲ್ಲಿನ ಪಿಂಗ್‌ಫೆಂಗ್‌ ಕ್ಯಾಂಪಸ್‌ ಕ್ರಿಕೆಟ್‌ ಫೀಲ್ಡ್‌ನಲ್ಲಿ ಶುಕ್ರವಾರ ನಡೆದ ಪಂದ್ಯತದಲ್ಲಿ ಟಾಸ್‌ ಗೆದ್ದ ಟೀಮ್ ಇಂಡಿಯಾ ಬೌಲಿಂಗ್‌ ಆಯ್ದುಕೊಂಡಿತು. ಬಾಂಗ್ಲಾ ಪರ ಆರಂಭಿಕ ಬ್ಯಾಟರ್‌ ಪರ್ವೇಝ್ ಹುಸೇನ್ ಎಮಾನ್ (23) ಮತ್ತು ಜಾಕರ್ ಅಲಿ (24*) ಅಲ್ಪ ಹೋರಾಟ ನಡೆಸಿದರು. ಟೀಮ್ ಇಂಡಿಯಾದ ಶಿಸ್ತಿನ ಬೌಲಿಂಗ್‌ ದಾಳಿ ಎದುರು ಕುಸಿದ ಬಾಂಗ್ಲಾ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 96 ರನ್‌ಗಳ ಅಲ್ಪ ಮೊತ್ತ ಕಲೆಹಾಕಲಷ್ಟೇ ಶಕ್ತವಾಯಿತು.
ಟೀಮ್ ಇಂಡಿಯಾ ಪರ ಸ್ಪಿನ್ನರ್‌ ಆರ್‌ ಸಾಯ್‌ ಕಿಶೋರ್‌ (12ಕ್ಕೆ 3) ಹೆಚ್ಚು ವಿಕೆಟ್‌ ಪಡೆದರು. ವಾಷಿಂಗ್ಟನ್‌ ಸುಂದರ್‌ (15ಕ್ಕೆ 2), ಸ್ಪಿನ್ನರ್‌ಗಳಾದ ತಿಲಕ್ ವರ್ಮಾ, ರವಿ ಬಿಷ್ಣೋಯ್ ಮತ್ತು ಶಹಬಾಝ್ ಅಹ್ಮದ್‌ಗೂ ವಿಕೆಟ್‌ ಪಡೆದರು.
ತಿಲಕ್‌-ಋತುರಾಜ್‌ ಅಬ್ಬರದ ಬ್ಯಾಟಿಂಗ್‌ :
ಸುಲಭದ ರನ್‌ಚೇಸ್‌ ಆರಂಭಿಸಿದ ಟೀಮ್ ಇಂಡಿಯಾ ಆರಂಭದಲ್ಲೇ ಸ್ಟಾರ್‌ ಬ್ಯಾಟರ್‌ ಯಶಸ್ವಿ ಜೈಸ್ವಾಲ್‌ ವಿಕೆಟ್‌ ಕಳೆದುಕೊಂಡಿತು. ಮೊದಲ ಓವರತ್‌ನಲ್ಲೇ ವೇಗಿ ರೊಪಿನ್ ಮೊಂಡಲ್‌ಗೆ ವಿಕೆಟ್‌ ಒಪ್ಪಿಸಿ, ಶೂನ್ಯ ವಿಕೆಟ್‌ ಒಪ್ಪಿಸಿದರು.
ಬಳಿಕ ಎರಡನೇ ವಿಕೆಟ್‌ಗೆ ಜೊತೆಯಾದ ನಾಯಕ ಋತುರಾಜ್ ಗಾಯಕ್ವಾಡ್‌ ಮತ್ತು ತಿಲಕ್‌ ವರ್ಮಾ 56 ಎಸೆತಗಳಲ್ಲಿ ಮುರಿಯದ 97 ರನ್‌ಗಳ ಜೊತೆಯಾಟವಾಡುವ ಮೂಲಕ ಭಾರತ ತಂಡಕ್ಕೆ ಭರ್ಜರಿ ಜಯ ತಂದರು.
ಸ್ಪೋಟಕ ಬ್ಯಾಟಿಂಗ್‌ ಮಾಡಿದ ಋತುರಾಜ್‌, 26 ಎಸೆತಗಳಲ್ಲಿ 4 ಫೋರ್‌ ಮತ್ತು 3 ಸಿಕ್ಸರ್‌ಗಳೊಂದಿಗೆ ಅಜೇಯ 40 ರನ್‌ ಸಿಡಿಸಿದರು. ಯುವ ಎಡಗೈ ಬ್ಯಾಟರ್‌ ತಿಲಕ್ ವರ್ಮಾ, 26 ಎಸೆತಗಳಲ್ಲಿ 2 ಫೋರ್ ಮತ್ತು ಬರೋಬ್ಬರಿ 6 ಸಿಕ್ಸರ್‌ಗಳೊಂದಿಗೆ 55 ರನ್‌ ಸಿಡಿಸಿ ಔಟಾಗದೇ ಉಳಿದರು.
ಗೋಲ್ಡ್‌ ಮೆಡಲ್‌ ಸಲುವಾಘಿ ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಭಾರತ ತಂಡಕ್ಕೆ ಸಾಂಕ್ರದಾಯಿಕ ಎದುರಾಳಿ ಪಾಕಿಸ್ತಾನ ಅಥವಾ ಅಫಘಾನಿಸ್ತಾನ ತಂಡದ ಸವಾಲು ಎದುರಾಗಲಿದೆ.

ಸಂಕ್ಷಿಪ್ತ ಸ್ಕೋರ್‌

ಬಾಂಗ್ಲಾದೇಶ: 20 ಓವರ್‌ಗಳಲ್ಲಿ 9 ವಿಕೆಟ್‌ಗೆ 96 ರನ್‌ (ಪರ್ವೇಝ್ ಹುಸೇನ್ ಎಮಾನ್‌ 23, ಜಾಕರ್‌ ಅಲಿ 24*, ರಕಿಬುಲ್ ಹಸನ್‌ 14; ಸಾಯ್‌ ಕಿಶೋರ್‌ 12ಕ್ಕೆ 3, ವಾಷಿಂಗ್ಟನ್‌ ಸುಂದರ್‌ 15ಕ್ಕೆ 2, ಅರ್ಷದೀಪ್ ಸಿಂಗ್ 10ಕ್ಕೆ 1).

ಟೀಮ್ ಇಂಡಿಯಾ: 9.4 ಓವರ್‌ಗಳಲ್ಲಿ 1 ವಿಕೆಟ್‌ಗೆ 97 ರನ್ (ಋತುರಾಜ್‌ ಗಾಯಕ್ವಾಡ್‌ ಅಜೇಯ 40, ತಿಲಕ್ ವರ್ಮಾ ಅಜೇಯ 55).
andolanait

Recent Posts

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

12 mins ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

36 mins ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

44 mins ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

1 hour ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

1 hour ago

ಗೋ ಬ್ಯಾಕ್‌ ಗವರ್ನರ್‌ ಅನ್ನೋದು ರಾಜಕೀಯ ನಾಟಕ : ಎಚ್‌.ಡಿ.ಕುಮಾರಸ್ವಾಮಿ ಆರೋಪ

ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್…

2 hours ago