ಕ್ರೀಡೆ

ಏಷ್ಯನ್‌ ಗೇಮ್ಸ್‌: ಕ್ರಿಕೆಟ್‌- ಬಾಂಗ್ಲಾ ಬಗ್ಗು ಬಡಿದು ಫೈನಲ್‌ಗೆ ಲಗ್ಗೆಯಿಟ್ಟ ಭಾರತ

ಹಾಂಗ್‌ಝೌ: ಋತುರಾಜ್‌ ಗಾಯಕ್ವಾಡ್‌ ಸಾರಥ್ಯದ ಟೀಮ್ ಇಂಡಿಯಾ, 2023ರ ಸಾಲಿನ ಏಷ್ಯನ್ ಗೇಮ್ಸ್‌ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಫೈನಲ್‌ಗೆ ದಾಪುಗಾಲಿಟ್ಟಿದೆ. ಶುಕ್ರವಾರ (ಅ. 6) ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 9 ವಿಕೆಟ್‌ಗಳಿಂದ ಬಗ್ಗುಬಡಿದು ಫೈನಲ್‌ಗೆ ದಾಪುಗಾಲಿಟ್ಟಿದೆ.

ಇಲ್ಲಿನ ಪಿಂಗ್‌ಫೆಂಗ್‌ ಕ್ಯಾಂಪಸ್‌ ಕ್ರಿಕೆಟ್‌ ಫೀಲ್ಡ್‌ನಲ್ಲಿ ಶುಕ್ರವಾರ ನಡೆದ ಪಂದ್ಯತದಲ್ಲಿ ಟಾಸ್‌ ಗೆದ್ದ ಟೀಮ್ ಇಂಡಿಯಾ ಬೌಲಿಂಗ್‌ ಆಯ್ದುಕೊಂಡಿತು. ಬಾಂಗ್ಲಾ ಪರ ಆರಂಭಿಕ ಬ್ಯಾಟರ್‌ ಪರ್ವೇಝ್ ಹುಸೇನ್ ಎಮಾನ್ (23) ಮತ್ತು ಜಾಕರ್ ಅಲಿ (24*) ಅಲ್ಪ ಹೋರಾಟ ನಡೆಸಿದರು. ಟೀಮ್ ಇಂಡಿಯಾದ ಶಿಸ್ತಿನ ಬೌಲಿಂಗ್‌ ದಾಳಿ ಎದುರು ಕುಸಿದ ಬಾಂಗ್ಲಾ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 96 ರನ್‌ಗಳ ಅಲ್ಪ ಮೊತ್ತ ಕಲೆಹಾಕಲಷ್ಟೇ ಶಕ್ತವಾಯಿತು.
ಟೀಮ್ ಇಂಡಿಯಾ ಪರ ಸ್ಪಿನ್ನರ್‌ ಆರ್‌ ಸಾಯ್‌ ಕಿಶೋರ್‌ (12ಕ್ಕೆ 3) ಹೆಚ್ಚು ವಿಕೆಟ್‌ ಪಡೆದರು. ವಾಷಿಂಗ್ಟನ್‌ ಸುಂದರ್‌ (15ಕ್ಕೆ 2), ಸ್ಪಿನ್ನರ್‌ಗಳಾದ ತಿಲಕ್ ವರ್ಮಾ, ರವಿ ಬಿಷ್ಣೋಯ್ ಮತ್ತು ಶಹಬಾಝ್ ಅಹ್ಮದ್‌ಗೂ ವಿಕೆಟ್‌ ಪಡೆದರು.
ತಿಲಕ್‌-ಋತುರಾಜ್‌ ಅಬ್ಬರದ ಬ್ಯಾಟಿಂಗ್‌ :
ಸುಲಭದ ರನ್‌ಚೇಸ್‌ ಆರಂಭಿಸಿದ ಟೀಮ್ ಇಂಡಿಯಾ ಆರಂಭದಲ್ಲೇ ಸ್ಟಾರ್‌ ಬ್ಯಾಟರ್‌ ಯಶಸ್ವಿ ಜೈಸ್ವಾಲ್‌ ವಿಕೆಟ್‌ ಕಳೆದುಕೊಂಡಿತು. ಮೊದಲ ಓವರತ್‌ನಲ್ಲೇ ವೇಗಿ ರೊಪಿನ್ ಮೊಂಡಲ್‌ಗೆ ವಿಕೆಟ್‌ ಒಪ್ಪಿಸಿ, ಶೂನ್ಯ ವಿಕೆಟ್‌ ಒಪ್ಪಿಸಿದರು.
ಬಳಿಕ ಎರಡನೇ ವಿಕೆಟ್‌ಗೆ ಜೊತೆಯಾದ ನಾಯಕ ಋತುರಾಜ್ ಗಾಯಕ್ವಾಡ್‌ ಮತ್ತು ತಿಲಕ್‌ ವರ್ಮಾ 56 ಎಸೆತಗಳಲ್ಲಿ ಮುರಿಯದ 97 ರನ್‌ಗಳ ಜೊತೆಯಾಟವಾಡುವ ಮೂಲಕ ಭಾರತ ತಂಡಕ್ಕೆ ಭರ್ಜರಿ ಜಯ ತಂದರು.
ಸ್ಪೋಟಕ ಬ್ಯಾಟಿಂಗ್‌ ಮಾಡಿದ ಋತುರಾಜ್‌, 26 ಎಸೆತಗಳಲ್ಲಿ 4 ಫೋರ್‌ ಮತ್ತು 3 ಸಿಕ್ಸರ್‌ಗಳೊಂದಿಗೆ ಅಜೇಯ 40 ರನ್‌ ಸಿಡಿಸಿದರು. ಯುವ ಎಡಗೈ ಬ್ಯಾಟರ್‌ ತಿಲಕ್ ವರ್ಮಾ, 26 ಎಸೆತಗಳಲ್ಲಿ 2 ಫೋರ್ ಮತ್ತು ಬರೋಬ್ಬರಿ 6 ಸಿಕ್ಸರ್‌ಗಳೊಂದಿಗೆ 55 ರನ್‌ ಸಿಡಿಸಿ ಔಟಾಗದೇ ಉಳಿದರು.
ಗೋಲ್ಡ್‌ ಮೆಡಲ್‌ ಸಲುವಾಘಿ ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಭಾರತ ತಂಡಕ್ಕೆ ಸಾಂಕ್ರದಾಯಿಕ ಎದುರಾಳಿ ಪಾಕಿಸ್ತಾನ ಅಥವಾ ಅಫಘಾನಿಸ್ತಾನ ತಂಡದ ಸವಾಲು ಎದುರಾಗಲಿದೆ.

ಸಂಕ್ಷಿಪ್ತ ಸ್ಕೋರ್‌

ಬಾಂಗ್ಲಾದೇಶ: 20 ಓವರ್‌ಗಳಲ್ಲಿ 9 ವಿಕೆಟ್‌ಗೆ 96 ರನ್‌ (ಪರ್ವೇಝ್ ಹುಸೇನ್ ಎಮಾನ್‌ 23, ಜಾಕರ್‌ ಅಲಿ 24*, ರಕಿಬುಲ್ ಹಸನ್‌ 14; ಸಾಯ್‌ ಕಿಶೋರ್‌ 12ಕ್ಕೆ 3, ವಾಷಿಂಗ್ಟನ್‌ ಸುಂದರ್‌ 15ಕ್ಕೆ 2, ಅರ್ಷದೀಪ್ ಸಿಂಗ್ 10ಕ್ಕೆ 1).

ಟೀಮ್ ಇಂಡಿಯಾ: 9.4 ಓವರ್‌ಗಳಲ್ಲಿ 1 ವಿಕೆಟ್‌ಗೆ 97 ರನ್ (ಋತುರಾಜ್‌ ಗಾಯಕ್ವಾಡ್‌ ಅಜೇಯ 40, ತಿಲಕ್ ವರ್ಮಾ ಅಜೇಯ 55).
andolanait

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 mins ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

1 hour ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

3 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

6 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

6 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

6 hours ago