ಕ್ರೀಡೆ

ಏಷ್ಯನ್‌ ಗೇಮ್ಸ್‌: ಕ್ರಿಕೆಟ್‌- ಬಾಂಗ್ಲಾ ಬಗ್ಗು ಬಡಿದು ಫೈನಲ್‌ಗೆ ಲಗ್ಗೆಯಿಟ್ಟ ಭಾರತ

ಹಾಂಗ್‌ಝೌ: ಋತುರಾಜ್‌ ಗಾಯಕ್ವಾಡ್‌ ಸಾರಥ್ಯದ ಟೀಮ್ ಇಂಡಿಯಾ, 2023ರ ಸಾಲಿನ ಏಷ್ಯನ್ ಗೇಮ್ಸ್‌ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಫೈನಲ್‌ಗೆ ದಾಪುಗಾಲಿಟ್ಟಿದೆ. ಶುಕ್ರವಾರ (ಅ. 6) ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 9 ವಿಕೆಟ್‌ಗಳಿಂದ ಬಗ್ಗುಬಡಿದು ಫೈನಲ್‌ಗೆ ದಾಪುಗಾಲಿಟ್ಟಿದೆ.

ಇಲ್ಲಿನ ಪಿಂಗ್‌ಫೆಂಗ್‌ ಕ್ಯಾಂಪಸ್‌ ಕ್ರಿಕೆಟ್‌ ಫೀಲ್ಡ್‌ನಲ್ಲಿ ಶುಕ್ರವಾರ ನಡೆದ ಪಂದ್ಯತದಲ್ಲಿ ಟಾಸ್‌ ಗೆದ್ದ ಟೀಮ್ ಇಂಡಿಯಾ ಬೌಲಿಂಗ್‌ ಆಯ್ದುಕೊಂಡಿತು. ಬಾಂಗ್ಲಾ ಪರ ಆರಂಭಿಕ ಬ್ಯಾಟರ್‌ ಪರ್ವೇಝ್ ಹುಸೇನ್ ಎಮಾನ್ (23) ಮತ್ತು ಜಾಕರ್ ಅಲಿ (24*) ಅಲ್ಪ ಹೋರಾಟ ನಡೆಸಿದರು. ಟೀಮ್ ಇಂಡಿಯಾದ ಶಿಸ್ತಿನ ಬೌಲಿಂಗ್‌ ದಾಳಿ ಎದುರು ಕುಸಿದ ಬಾಂಗ್ಲಾ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 96 ರನ್‌ಗಳ ಅಲ್ಪ ಮೊತ್ತ ಕಲೆಹಾಕಲಷ್ಟೇ ಶಕ್ತವಾಯಿತು.
ಟೀಮ್ ಇಂಡಿಯಾ ಪರ ಸ್ಪಿನ್ನರ್‌ ಆರ್‌ ಸಾಯ್‌ ಕಿಶೋರ್‌ (12ಕ್ಕೆ 3) ಹೆಚ್ಚು ವಿಕೆಟ್‌ ಪಡೆದರು. ವಾಷಿಂಗ್ಟನ್‌ ಸುಂದರ್‌ (15ಕ್ಕೆ 2), ಸ್ಪಿನ್ನರ್‌ಗಳಾದ ತಿಲಕ್ ವರ್ಮಾ, ರವಿ ಬಿಷ್ಣೋಯ್ ಮತ್ತು ಶಹಬಾಝ್ ಅಹ್ಮದ್‌ಗೂ ವಿಕೆಟ್‌ ಪಡೆದರು.
ತಿಲಕ್‌-ಋತುರಾಜ್‌ ಅಬ್ಬರದ ಬ್ಯಾಟಿಂಗ್‌ :
ಸುಲಭದ ರನ್‌ಚೇಸ್‌ ಆರಂಭಿಸಿದ ಟೀಮ್ ಇಂಡಿಯಾ ಆರಂಭದಲ್ಲೇ ಸ್ಟಾರ್‌ ಬ್ಯಾಟರ್‌ ಯಶಸ್ವಿ ಜೈಸ್ವಾಲ್‌ ವಿಕೆಟ್‌ ಕಳೆದುಕೊಂಡಿತು. ಮೊದಲ ಓವರತ್‌ನಲ್ಲೇ ವೇಗಿ ರೊಪಿನ್ ಮೊಂಡಲ್‌ಗೆ ವಿಕೆಟ್‌ ಒಪ್ಪಿಸಿ, ಶೂನ್ಯ ವಿಕೆಟ್‌ ಒಪ್ಪಿಸಿದರು.
ಬಳಿಕ ಎರಡನೇ ವಿಕೆಟ್‌ಗೆ ಜೊತೆಯಾದ ನಾಯಕ ಋತುರಾಜ್ ಗಾಯಕ್ವಾಡ್‌ ಮತ್ತು ತಿಲಕ್‌ ವರ್ಮಾ 56 ಎಸೆತಗಳಲ್ಲಿ ಮುರಿಯದ 97 ರನ್‌ಗಳ ಜೊತೆಯಾಟವಾಡುವ ಮೂಲಕ ಭಾರತ ತಂಡಕ್ಕೆ ಭರ್ಜರಿ ಜಯ ತಂದರು.
ಸ್ಪೋಟಕ ಬ್ಯಾಟಿಂಗ್‌ ಮಾಡಿದ ಋತುರಾಜ್‌, 26 ಎಸೆತಗಳಲ್ಲಿ 4 ಫೋರ್‌ ಮತ್ತು 3 ಸಿಕ್ಸರ್‌ಗಳೊಂದಿಗೆ ಅಜೇಯ 40 ರನ್‌ ಸಿಡಿಸಿದರು. ಯುವ ಎಡಗೈ ಬ್ಯಾಟರ್‌ ತಿಲಕ್ ವರ್ಮಾ, 26 ಎಸೆತಗಳಲ್ಲಿ 2 ಫೋರ್ ಮತ್ತು ಬರೋಬ್ಬರಿ 6 ಸಿಕ್ಸರ್‌ಗಳೊಂದಿಗೆ 55 ರನ್‌ ಸಿಡಿಸಿ ಔಟಾಗದೇ ಉಳಿದರು.
ಗೋಲ್ಡ್‌ ಮೆಡಲ್‌ ಸಲುವಾಘಿ ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಭಾರತ ತಂಡಕ್ಕೆ ಸಾಂಕ್ರದಾಯಿಕ ಎದುರಾಳಿ ಪಾಕಿಸ್ತಾನ ಅಥವಾ ಅಫಘಾನಿಸ್ತಾನ ತಂಡದ ಸವಾಲು ಎದುರಾಗಲಿದೆ.

ಸಂಕ್ಷಿಪ್ತ ಸ್ಕೋರ್‌

ಬಾಂಗ್ಲಾದೇಶ: 20 ಓವರ್‌ಗಳಲ್ಲಿ 9 ವಿಕೆಟ್‌ಗೆ 96 ರನ್‌ (ಪರ್ವೇಝ್ ಹುಸೇನ್ ಎಮಾನ್‌ 23, ಜಾಕರ್‌ ಅಲಿ 24*, ರಕಿಬುಲ್ ಹಸನ್‌ 14; ಸಾಯ್‌ ಕಿಶೋರ್‌ 12ಕ್ಕೆ 3, ವಾಷಿಂಗ್ಟನ್‌ ಸುಂದರ್‌ 15ಕ್ಕೆ 2, ಅರ್ಷದೀಪ್ ಸಿಂಗ್ 10ಕ್ಕೆ 1).

ಟೀಮ್ ಇಂಡಿಯಾ: 9.4 ಓವರ್‌ಗಳಲ್ಲಿ 1 ವಿಕೆಟ್‌ಗೆ 97 ರನ್ (ಋತುರಾಜ್‌ ಗಾಯಕ್ವಾಡ್‌ ಅಜೇಯ 40, ತಿಲಕ್ ವರ್ಮಾ ಅಜೇಯ 55).
andolanait

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

5 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

7 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

8 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

9 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

11 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

12 hours ago